Homeಅಂತರಾಷ್ಟ್ರೀಯಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರೊಬ್ಬರು “ವೈಟ್‌ ಪವರ್” ಎಂದು ಜೋರಾಗಿ ಕೂಗುತ್ತಿರುವ ಜನಾಂಗೀಯ ತಾರತಮ್ಯದ ವೀಡಿಯೊವನ್ನು ರಿಟ್ವೀಟ್ ಮಾಡಿ ವಿವಾದಕ್ಕೊಳಗಾಗಿದ್ದಾರೆ.

ಫ್ಲೋರಿಡಾದ ನಿವೃತ್ತಿ ಸಂಕೀರ್ಣದಲ್ಲಿ ಟ್ರಂಪ್ ಪರ ರ್ಯಾಲಿಯಲ್ಲಿ ಭಾಗವಹಿಸುವ ಜನರ ಗುಂಪಿನಲ್ಲಿ ಈ ಘೋಷಣೆ ಕೂಗಿದ ಬೆಂಬಲಿಗನೂ ಇದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ಈ ವಿಡಿಯೋ ತುಣುಕಿನಲ್ಲಿ ಅಧ್ಯಕ್ಷರ ಬೆಂಬಲಿಗರು ಮತ್ತು ವಿರೋಧಿಗಳು ನಿಂದನೆ ಮತ್ತು ಪರಸ್ಪರರ ಮೇಲೆ ಟೀಕೆಗಳನ್ನು ಮಾಡುವುದನ್ನು ಗಮನಿಸಬಹುದಾಗಿದೆ. ನಂತರ ಆ ರಿಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜನಾಂಗೀಯ ಉದ್ವಿಗ್ನತೆಯನ್ನು ಲಾಭ ಮಾಡಿಕೊಳ್ಳಲು ಟ್ರಂಪ್‌ ಪ್ರಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಆದರೆ ಈ ಆರೋಪವನ್ನು ಟ್ರಂಪ್ ನಿರಾಕರಿಸಿದ್ದಾರೆ. “ವೈಟ್ ಪವರ್” ಘೋಷಣೆ ಕೂಗುವುದು ಕೇಳಲಿಲ್ಲ ಎಂದು ಅವರ ವಕ್ತಾರರು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಸೇರಿಸಲಾಗಿರುವ ವೀಡಿಯೊದಲ್ಲಿ ಟ್ರಂಪ್ ಬೆಂಬಲಿಗರು ಗಾಲ್ಫ್ ಕಾರ್ಟ್‌ನಲ್ಲಿ ಮುಷ್ಟಿಯನ್ನು ಮೇಲೆತ್ತಿ “ವೈಟ್ ಪವರ್” ಎಂದು ಕೂಗುತ್ತಿದ್ದಾರೆ. ಇತರ ಟ್ರಂಪ್ ವಿರೋಧಿ ಪ್ರತಿಭಟನಾಕಾರರು ರ್ಯಾಲಿ-ನಡೆಸುವವರ ಮೇಲೆ “ನಾಜಿ” ಎಂದು ಕರೆದಿದ್ದಾರೆ.

ಯುಎಸ್ ಸೆನೆಟ್‌ನ ಏಕೈಕ ಕಪ್ಪು ರಿಪಬ್ಲಿಕನ್ ಟಿಮ್ ಸ್ಕಾಟ್ ಭಾನುವಾರ ಸಂದರ್ಶನವೊಂದರಲ್ಲಿ ಈ ವೀಡಿಯೊ “ಆಕ್ರಮಣಕಾರಿ” ಎಂದು ಕರೆದಿದ್ದಾರೆ ಮತ್ತು ಆ ಟ್ವೀಟ್ ಅನ್ನು ಡಿಲೀಟ್ ಮಾಡುವಂತೆ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಶ್ವೇತಭವನದ ವಕ್ತಾರ nಜುಡ್ ಡೀರೆ ಪ್ರತಿಕ್ರಿಯಿಸಿ ಅಧ್ಯಕ್ಷರು “ವೀಡಿಯೊದಲ್ಲಿ ವೈಟ್ ಪವರ್ ಎಂದು ಕೂಗುವುದು ಕೇಳಿಸಲಿಲ್ಲ. ಬದಲಿಗೆ ಜನರ ಹಷೋದ್ಘಾರ ಮಾತ್ರ ಕೇಳಿಸುತ್ತಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ಈ ಹಿಂದೆ ಸಹ ಜನಾಂಗೀಯ ವಿಷಯವನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಆರೋಪವನ್ನು ಎದುರಿಸಿದ್ದರು. 2017 ರಲ್ಲಿ ಅವರು ಬ್ರಿಟಿಷ್ ಬಲಪಂಥೀಯ ಗುಂಪಿನಿಂದ ಮೂರು ಪ್ರಚೋದನಾಕಾರಿ ವೀಡಿಯೊಗಳನ್ನು ರಿಟ್ವೀಟ್ ಮಾಡಿದ್ದರು. ಆಗಿನ ಯುಕೆ ಪ್ರಧಾನಿ ಥೆರೆಸಾ ಮೇ ಅದನ್ನು ಖಂಡಿಸಿದ್ದರು.

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

ಕೊರೋನಾ ವೈರಸ್ ಅನ್ನು ವಿವರಿಸಲು “ಕುಂಗ್-ಫ್ಲೂ” ಎಂಬ ಪದವನ್ನು ಪದೇ ಪದೇ ಬಳಸಿದ್ದಕ್ಕಾಗಿ ಟ್ರಂಪ್ ಇತ್ತೀಚಿನ ವಾರಗಳಲ್ಲಿ ವರ್ಣಭೇದ ನೀತಿಯ ಆರೋಪ ಎದುರಿಸುತ್ತಿದ್ದಾರೆ. ಅಧ್ಯಕ್ಷರು ಈ ಪದವನ್ನು ಬಳಸುವುದನ್ನು ವರ್ಣಭೇದ ನೀತಿಯೆಂದು ಶ್ವೇತಭವನ ನಿರಾಕರಿಸಿದೆ.

ಈ ಮಧ್ಯೆ ಸಿಬಿಎಸ್ ನ್ಯೂಸ್‌ನ ಸಮೀಕ್ಷೆಯು ಯುಎಸ್‌ನ ಸಾರ್ವಜನಿಕರಲ್ಲಿ ಹೆಚ್ಚಿನವರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನವನ್ನು ಒಪ್ಪುತ್ತಾರೆ ಮತ್ತು ಪ್ರತಿಭಟನೆಗಳು ಪೊಲೀಸ್ ಸುಧಾರಣೆಗಳಿಗೆ ಕಾರಣವಾಗುತ್ತವೆ ಎಂದು ನಂಬುತ್ತಾರೆ ಎಂದು ತಿಳಿಸಿದೆ.

ಇತ್ತೀಚಿನ ಪ್ರತಿಭಟನೆಗಳನ್ನು ಅಧ್ಯಕ್ಷ ಟ್ರಂಪ್ ನಿರ್ವಹಿಸುವುದನ್ನು 10 ರಲ್ಲಿ ಆರು ಅಮೆರಿಕನ್ನರು ಒಪ್ಪುವುದಿಲ್ಲ ಎನ್ನಲಾಗಿದೆ.


ಡೋನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...