Homeಅಂತರಾಷ್ಟ್ರೀಯಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರೊಬ್ಬರು “ವೈಟ್‌ ಪವರ್” ಎಂದು ಜೋರಾಗಿ ಕೂಗುತ್ತಿರುವ ಜನಾಂಗೀಯ ತಾರತಮ್ಯದ ವೀಡಿಯೊವನ್ನು ರಿಟ್ವೀಟ್ ಮಾಡಿ ವಿವಾದಕ್ಕೊಳಗಾಗಿದ್ದಾರೆ.

ಫ್ಲೋರಿಡಾದ ನಿವೃತ್ತಿ ಸಂಕೀರ್ಣದಲ್ಲಿ ಟ್ರಂಪ್ ಪರ ರ್ಯಾಲಿಯಲ್ಲಿ ಭಾಗವಹಿಸುವ ಜನರ ಗುಂಪಿನಲ್ಲಿ ಈ ಘೋಷಣೆ ಕೂಗಿದ ಬೆಂಬಲಿಗನೂ ಇದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ಈ ವಿಡಿಯೋ ತುಣುಕಿನಲ್ಲಿ ಅಧ್ಯಕ್ಷರ ಬೆಂಬಲಿಗರು ಮತ್ತು ವಿರೋಧಿಗಳು ನಿಂದನೆ ಮತ್ತು ಪರಸ್ಪರರ ಮೇಲೆ ಟೀಕೆಗಳನ್ನು ಮಾಡುವುದನ್ನು ಗಮನಿಸಬಹುದಾಗಿದೆ. ನಂತರ ಆ ರಿಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜನಾಂಗೀಯ ಉದ್ವಿಗ್ನತೆಯನ್ನು ಲಾಭ ಮಾಡಿಕೊಳ್ಳಲು ಟ್ರಂಪ್‌ ಪ್ರಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಆದರೆ ಈ ಆರೋಪವನ್ನು ಟ್ರಂಪ್ ನಿರಾಕರಿಸಿದ್ದಾರೆ. “ವೈಟ್ ಪವರ್” ಘೋಷಣೆ ಕೂಗುವುದು ಕೇಳಲಿಲ್ಲ ಎಂದು ಅವರ ವಕ್ತಾರರು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಸೇರಿಸಲಾಗಿರುವ ವೀಡಿಯೊದಲ್ಲಿ ಟ್ರಂಪ್ ಬೆಂಬಲಿಗರು ಗಾಲ್ಫ್ ಕಾರ್ಟ್‌ನಲ್ಲಿ ಮುಷ್ಟಿಯನ್ನು ಮೇಲೆತ್ತಿ “ವೈಟ್ ಪವರ್” ಎಂದು ಕೂಗುತ್ತಿದ್ದಾರೆ. ಇತರ ಟ್ರಂಪ್ ವಿರೋಧಿ ಪ್ರತಿಭಟನಾಕಾರರು ರ್ಯಾಲಿ-ನಡೆಸುವವರ ಮೇಲೆ “ನಾಜಿ” ಎಂದು ಕರೆದಿದ್ದಾರೆ.

ಯುಎಸ್ ಸೆನೆಟ್‌ನ ಏಕೈಕ ಕಪ್ಪು ರಿಪಬ್ಲಿಕನ್ ಟಿಮ್ ಸ್ಕಾಟ್ ಭಾನುವಾರ ಸಂದರ್ಶನವೊಂದರಲ್ಲಿ ಈ ವೀಡಿಯೊ “ಆಕ್ರಮಣಕಾರಿ” ಎಂದು ಕರೆದಿದ್ದಾರೆ ಮತ್ತು ಆ ಟ್ವೀಟ್ ಅನ್ನು ಡಿಲೀಟ್ ಮಾಡುವಂತೆ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಶ್ವೇತಭವನದ ವಕ್ತಾರ nಜುಡ್ ಡೀರೆ ಪ್ರತಿಕ್ರಿಯಿಸಿ ಅಧ್ಯಕ್ಷರು “ವೀಡಿಯೊದಲ್ಲಿ ವೈಟ್ ಪವರ್ ಎಂದು ಕೂಗುವುದು ಕೇಳಿಸಲಿಲ್ಲ. ಬದಲಿಗೆ ಜನರ ಹಷೋದ್ಘಾರ ಮಾತ್ರ ಕೇಳಿಸುತ್ತಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ಈ ಹಿಂದೆ ಸಹ ಜನಾಂಗೀಯ ವಿಷಯವನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಆರೋಪವನ್ನು ಎದುರಿಸಿದ್ದರು. 2017 ರಲ್ಲಿ ಅವರು ಬ್ರಿಟಿಷ್ ಬಲಪಂಥೀಯ ಗುಂಪಿನಿಂದ ಮೂರು ಪ್ರಚೋದನಾಕಾರಿ ವೀಡಿಯೊಗಳನ್ನು ರಿಟ್ವೀಟ್ ಮಾಡಿದ್ದರು. ಆಗಿನ ಯುಕೆ ಪ್ರಧಾನಿ ಥೆರೆಸಾ ಮೇ ಅದನ್ನು ಖಂಡಿಸಿದ್ದರು.

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

ಕೊರೋನಾ ವೈರಸ್ ಅನ್ನು ವಿವರಿಸಲು “ಕುಂಗ್-ಫ್ಲೂ” ಎಂಬ ಪದವನ್ನು ಪದೇ ಪದೇ ಬಳಸಿದ್ದಕ್ಕಾಗಿ ಟ್ರಂಪ್ ಇತ್ತೀಚಿನ ವಾರಗಳಲ್ಲಿ ವರ್ಣಭೇದ ನೀತಿಯ ಆರೋಪ ಎದುರಿಸುತ್ತಿದ್ದಾರೆ. ಅಧ್ಯಕ್ಷರು ಈ ಪದವನ್ನು ಬಳಸುವುದನ್ನು ವರ್ಣಭೇದ ನೀತಿಯೆಂದು ಶ್ವೇತಭವನ ನಿರಾಕರಿಸಿದೆ.

ಈ ಮಧ್ಯೆ ಸಿಬಿಎಸ್ ನ್ಯೂಸ್‌ನ ಸಮೀಕ್ಷೆಯು ಯುಎಸ್‌ನ ಸಾರ್ವಜನಿಕರಲ್ಲಿ ಹೆಚ್ಚಿನವರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನವನ್ನು ಒಪ್ಪುತ್ತಾರೆ ಮತ್ತು ಪ್ರತಿಭಟನೆಗಳು ಪೊಲೀಸ್ ಸುಧಾರಣೆಗಳಿಗೆ ಕಾರಣವಾಗುತ್ತವೆ ಎಂದು ನಂಬುತ್ತಾರೆ ಎಂದು ತಿಳಿಸಿದೆ.

ಇತ್ತೀಚಿನ ಪ್ರತಿಭಟನೆಗಳನ್ನು ಅಧ್ಯಕ್ಷ ಟ್ರಂಪ್ ನಿರ್ವಹಿಸುವುದನ್ನು 10 ರಲ್ಲಿ ಆರು ಅಮೆರಿಕನ್ನರು ಒಪ್ಪುವುದಿಲ್ಲ ಎನ್ನಲಾಗಿದೆ.


ಡೋನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...