Homeಅಂತರಾಷ್ಟ್ರೀಯಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರೊಬ್ಬರು “ವೈಟ್‌ ಪವರ್” ಎಂದು ಜೋರಾಗಿ ಕೂಗುತ್ತಿರುವ ಜನಾಂಗೀಯ ತಾರತಮ್ಯದ ವೀಡಿಯೊವನ್ನು ರಿಟ್ವೀಟ್ ಮಾಡಿ ವಿವಾದಕ್ಕೊಳಗಾಗಿದ್ದಾರೆ.

ಫ್ಲೋರಿಡಾದ ನಿವೃತ್ತಿ ಸಂಕೀರ್ಣದಲ್ಲಿ ಟ್ರಂಪ್ ಪರ ರ್ಯಾಲಿಯಲ್ಲಿ ಭಾಗವಹಿಸುವ ಜನರ ಗುಂಪಿನಲ್ಲಿ ಈ ಘೋಷಣೆ ಕೂಗಿದ ಬೆಂಬಲಿಗನೂ ಇದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ಈ ವಿಡಿಯೋ ತುಣುಕಿನಲ್ಲಿ ಅಧ್ಯಕ್ಷರ ಬೆಂಬಲಿಗರು ಮತ್ತು ವಿರೋಧಿಗಳು ನಿಂದನೆ ಮತ್ತು ಪರಸ್ಪರರ ಮೇಲೆ ಟೀಕೆಗಳನ್ನು ಮಾಡುವುದನ್ನು ಗಮನಿಸಬಹುದಾಗಿದೆ. ನಂತರ ಆ ರಿಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜನಾಂಗೀಯ ಉದ್ವಿಗ್ನತೆಯನ್ನು ಲಾಭ ಮಾಡಿಕೊಳ್ಳಲು ಟ್ರಂಪ್‌ ಪ್ರಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಆದರೆ ಈ ಆರೋಪವನ್ನು ಟ್ರಂಪ್ ನಿರಾಕರಿಸಿದ್ದಾರೆ. “ವೈಟ್ ಪವರ್” ಘೋಷಣೆ ಕೂಗುವುದು ಕೇಳಲಿಲ್ಲ ಎಂದು ಅವರ ವಕ್ತಾರರು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಸೇರಿಸಲಾಗಿರುವ ವೀಡಿಯೊದಲ್ಲಿ ಟ್ರಂಪ್ ಬೆಂಬಲಿಗರು ಗಾಲ್ಫ್ ಕಾರ್ಟ್‌ನಲ್ಲಿ ಮುಷ್ಟಿಯನ್ನು ಮೇಲೆತ್ತಿ “ವೈಟ್ ಪವರ್” ಎಂದು ಕೂಗುತ್ತಿದ್ದಾರೆ. ಇತರ ಟ್ರಂಪ್ ವಿರೋಧಿ ಪ್ರತಿಭಟನಾಕಾರರು ರ್ಯಾಲಿ-ನಡೆಸುವವರ ಮೇಲೆ “ನಾಜಿ” ಎಂದು ಕರೆದಿದ್ದಾರೆ.

ಯುಎಸ್ ಸೆನೆಟ್‌ನ ಏಕೈಕ ಕಪ್ಪು ರಿಪಬ್ಲಿಕನ್ ಟಿಮ್ ಸ್ಕಾಟ್ ಭಾನುವಾರ ಸಂದರ್ಶನವೊಂದರಲ್ಲಿ ಈ ವೀಡಿಯೊ “ಆಕ್ರಮಣಕಾರಿ” ಎಂದು ಕರೆದಿದ್ದಾರೆ ಮತ್ತು ಆ ಟ್ವೀಟ್ ಅನ್ನು ಡಿಲೀಟ್ ಮಾಡುವಂತೆ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಶ್ವೇತಭವನದ ವಕ್ತಾರ nಜುಡ್ ಡೀರೆ ಪ್ರತಿಕ್ರಿಯಿಸಿ ಅಧ್ಯಕ್ಷರು “ವೀಡಿಯೊದಲ್ಲಿ ವೈಟ್ ಪವರ್ ಎಂದು ಕೂಗುವುದು ಕೇಳಿಸಲಿಲ್ಲ. ಬದಲಿಗೆ ಜನರ ಹಷೋದ್ಘಾರ ಮಾತ್ರ ಕೇಳಿಸುತ್ತಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ಈ ಹಿಂದೆ ಸಹ ಜನಾಂಗೀಯ ವಿಷಯವನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಆರೋಪವನ್ನು ಎದುರಿಸಿದ್ದರು. 2017 ರಲ್ಲಿ ಅವರು ಬ್ರಿಟಿಷ್ ಬಲಪಂಥೀಯ ಗುಂಪಿನಿಂದ ಮೂರು ಪ್ರಚೋದನಾಕಾರಿ ವೀಡಿಯೊಗಳನ್ನು ರಿಟ್ವೀಟ್ ಮಾಡಿದ್ದರು. ಆಗಿನ ಯುಕೆ ಪ್ರಧಾನಿ ಥೆರೆಸಾ ಮೇ ಅದನ್ನು ಖಂಡಿಸಿದ್ದರು.

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

ಕೊರೋನಾ ವೈರಸ್ ಅನ್ನು ವಿವರಿಸಲು “ಕುಂಗ್-ಫ್ಲೂ” ಎಂಬ ಪದವನ್ನು ಪದೇ ಪದೇ ಬಳಸಿದ್ದಕ್ಕಾಗಿ ಟ್ರಂಪ್ ಇತ್ತೀಚಿನ ವಾರಗಳಲ್ಲಿ ವರ್ಣಭೇದ ನೀತಿಯ ಆರೋಪ ಎದುರಿಸುತ್ತಿದ್ದಾರೆ. ಅಧ್ಯಕ್ಷರು ಈ ಪದವನ್ನು ಬಳಸುವುದನ್ನು ವರ್ಣಭೇದ ನೀತಿಯೆಂದು ಶ್ವೇತಭವನ ನಿರಾಕರಿಸಿದೆ.

ಈ ಮಧ್ಯೆ ಸಿಬಿಎಸ್ ನ್ಯೂಸ್‌ನ ಸಮೀಕ್ಷೆಯು ಯುಎಸ್‌ನ ಸಾರ್ವಜನಿಕರಲ್ಲಿ ಹೆಚ್ಚಿನವರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನವನ್ನು ಒಪ್ಪುತ್ತಾರೆ ಮತ್ತು ಪ್ರತಿಭಟನೆಗಳು ಪೊಲೀಸ್ ಸುಧಾರಣೆಗಳಿಗೆ ಕಾರಣವಾಗುತ್ತವೆ ಎಂದು ನಂಬುತ್ತಾರೆ ಎಂದು ತಿಳಿಸಿದೆ.

ಇತ್ತೀಚಿನ ಪ್ರತಿಭಟನೆಗಳನ್ನು ಅಧ್ಯಕ್ಷ ಟ್ರಂಪ್ ನಿರ್ವಹಿಸುವುದನ್ನು 10 ರಲ್ಲಿ ಆರು ಅಮೆರಿಕನ್ನರು ಒಪ್ಪುವುದಿಲ್ಲ ಎನ್ನಲಾಗಿದೆ.


ಡೋನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...