Homeಅಂತರಾಷ್ಟ್ರೀಯಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರೊಬ್ಬರು “ವೈಟ್‌ ಪವರ್” ಎಂದು ಜೋರಾಗಿ ಕೂಗುತ್ತಿರುವ ಜನಾಂಗೀಯ ತಾರತಮ್ಯದ ವೀಡಿಯೊವನ್ನು ರಿಟ್ವೀಟ್ ಮಾಡಿ ವಿವಾದಕ್ಕೊಳಗಾಗಿದ್ದಾರೆ.

ಫ್ಲೋರಿಡಾದ ನಿವೃತ್ತಿ ಸಂಕೀರ್ಣದಲ್ಲಿ ಟ್ರಂಪ್ ಪರ ರ್ಯಾಲಿಯಲ್ಲಿ ಭಾಗವಹಿಸುವ ಜನರ ಗುಂಪಿನಲ್ಲಿ ಈ ಘೋಷಣೆ ಕೂಗಿದ ಬೆಂಬಲಿಗನೂ ಇದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ಈ ವಿಡಿಯೋ ತುಣುಕಿನಲ್ಲಿ ಅಧ್ಯಕ್ಷರ ಬೆಂಬಲಿಗರು ಮತ್ತು ವಿರೋಧಿಗಳು ನಿಂದನೆ ಮತ್ತು ಪರಸ್ಪರರ ಮೇಲೆ ಟೀಕೆಗಳನ್ನು ಮಾಡುವುದನ್ನು ಗಮನಿಸಬಹುದಾಗಿದೆ. ನಂತರ ಆ ರಿಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜನಾಂಗೀಯ ಉದ್ವಿಗ್ನತೆಯನ್ನು ಲಾಭ ಮಾಡಿಕೊಳ್ಳಲು ಟ್ರಂಪ್‌ ಪ್ರಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಆದರೆ ಈ ಆರೋಪವನ್ನು ಟ್ರಂಪ್ ನಿರಾಕರಿಸಿದ್ದಾರೆ. “ವೈಟ್ ಪವರ್” ಘೋಷಣೆ ಕೂಗುವುದು ಕೇಳಲಿಲ್ಲ ಎಂದು ಅವರ ವಕ್ತಾರರು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಸೇರಿಸಲಾಗಿರುವ ವೀಡಿಯೊದಲ್ಲಿ ಟ್ರಂಪ್ ಬೆಂಬಲಿಗರು ಗಾಲ್ಫ್ ಕಾರ್ಟ್‌ನಲ್ಲಿ ಮುಷ್ಟಿಯನ್ನು ಮೇಲೆತ್ತಿ “ವೈಟ್ ಪವರ್” ಎಂದು ಕೂಗುತ್ತಿದ್ದಾರೆ. ಇತರ ಟ್ರಂಪ್ ವಿರೋಧಿ ಪ್ರತಿಭಟನಾಕಾರರು ರ್ಯಾಲಿ-ನಡೆಸುವವರ ಮೇಲೆ “ನಾಜಿ” ಎಂದು ಕರೆದಿದ್ದಾರೆ.

ಯುಎಸ್ ಸೆನೆಟ್‌ನ ಏಕೈಕ ಕಪ್ಪು ರಿಪಬ್ಲಿಕನ್ ಟಿಮ್ ಸ್ಕಾಟ್ ಭಾನುವಾರ ಸಂದರ್ಶನವೊಂದರಲ್ಲಿ ಈ ವೀಡಿಯೊ “ಆಕ್ರಮಣಕಾರಿ” ಎಂದು ಕರೆದಿದ್ದಾರೆ ಮತ್ತು ಆ ಟ್ವೀಟ್ ಅನ್ನು ಡಿಲೀಟ್ ಮಾಡುವಂತೆ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಶ್ವೇತಭವನದ ವಕ್ತಾರ nಜುಡ್ ಡೀರೆ ಪ್ರತಿಕ್ರಿಯಿಸಿ ಅಧ್ಯಕ್ಷರು “ವೀಡಿಯೊದಲ್ಲಿ ವೈಟ್ ಪವರ್ ಎಂದು ಕೂಗುವುದು ಕೇಳಿಸಲಿಲ್ಲ. ಬದಲಿಗೆ ಜನರ ಹಷೋದ್ಘಾರ ಮಾತ್ರ ಕೇಳಿಸುತ್ತಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ಈ ಹಿಂದೆ ಸಹ ಜನಾಂಗೀಯ ವಿಷಯವನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಆರೋಪವನ್ನು ಎದುರಿಸಿದ್ದರು. 2017 ರಲ್ಲಿ ಅವರು ಬ್ರಿಟಿಷ್ ಬಲಪಂಥೀಯ ಗುಂಪಿನಿಂದ ಮೂರು ಪ್ರಚೋದನಾಕಾರಿ ವೀಡಿಯೊಗಳನ್ನು ರಿಟ್ವೀಟ್ ಮಾಡಿದ್ದರು. ಆಗಿನ ಯುಕೆ ಪ್ರಧಾನಿ ಥೆರೆಸಾ ಮೇ ಅದನ್ನು ಖಂಡಿಸಿದ್ದರು.

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

ಕೊರೋನಾ ವೈರಸ್ ಅನ್ನು ವಿವರಿಸಲು “ಕುಂಗ್-ಫ್ಲೂ” ಎಂಬ ಪದವನ್ನು ಪದೇ ಪದೇ ಬಳಸಿದ್ದಕ್ಕಾಗಿ ಟ್ರಂಪ್ ಇತ್ತೀಚಿನ ವಾರಗಳಲ್ಲಿ ವರ್ಣಭೇದ ನೀತಿಯ ಆರೋಪ ಎದುರಿಸುತ್ತಿದ್ದಾರೆ. ಅಧ್ಯಕ್ಷರು ಈ ಪದವನ್ನು ಬಳಸುವುದನ್ನು ವರ್ಣಭೇದ ನೀತಿಯೆಂದು ಶ್ವೇತಭವನ ನಿರಾಕರಿಸಿದೆ.

ಈ ಮಧ್ಯೆ ಸಿಬಿಎಸ್ ನ್ಯೂಸ್‌ನ ಸಮೀಕ್ಷೆಯು ಯುಎಸ್‌ನ ಸಾರ್ವಜನಿಕರಲ್ಲಿ ಹೆಚ್ಚಿನವರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನವನ್ನು ಒಪ್ಪುತ್ತಾರೆ ಮತ್ತು ಪ್ರತಿಭಟನೆಗಳು ಪೊಲೀಸ್ ಸುಧಾರಣೆಗಳಿಗೆ ಕಾರಣವಾಗುತ್ತವೆ ಎಂದು ನಂಬುತ್ತಾರೆ ಎಂದು ತಿಳಿಸಿದೆ.

ಇತ್ತೀಚಿನ ಪ್ರತಿಭಟನೆಗಳನ್ನು ಅಧ್ಯಕ್ಷ ಟ್ರಂಪ್ ನಿರ್ವಹಿಸುವುದನ್ನು 10 ರಲ್ಲಿ ಆರು ಅಮೆರಿಕನ್ನರು ಒಪ್ಪುವುದಿಲ್ಲ ಎನ್ನಲಾಗಿದೆ.


ಡೋನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....