Homeಅಂತರಾಷ್ಟ್ರೀಯಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

- Advertisement -
- Advertisement -

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ ಕೂಡಲೇ ಸಭೆಯಿಂದ ಹೊರ ನಡೆದಿದ್ದಾರೆ.

ಶ್ವೇತ ಭವನದಿಂದ ನಿರ್ಗಮಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಝೆಲೆನ್‌ಸ್ಕಿ, ‘ಅಮೆರಿಕ, ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಜನತೆಗೆ ಉಕ್ರೇನ್‌ಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳು. ಉಕ್ರೇನ್‌ಗೆ ಶಾಶ್ವತವಾದ ಶಾಂತಿ ಬೇಕಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಜಟಾಪಟಿ

ಖನಿಜ ಒಪ್ಪಂದ ಸಭೆ ಬಳಿಕ ಟ್ರಂಪ್, ವ್ಯಾನ್ಸ್ ಮತ್ತು ಝೆಲೆನ್‌ಸ್ಕಿ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿದ್ದರು. ಈ ವೇಳೆ ಒಂದು ರೀತಿಯಲ್ಲಿ ರಷ್ಯಾ ಮುಂದೆ ಉಕ್ರೇನ್ ಶರಣಾಗುವಂತೆ ಮತ್ತು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಟ್ರಂಪ್ ಮಾತನಾಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದರೂ, ಉಕ್ರೇನ್ ತಪ್ಪು ಮಾಡಿದಂತೆ ರಷ್ಯಾ ಪರ ವಹಿಸಿ ಟ್ರಂಪ್ ಮತ್ತು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ “ಝೆಲೆನ್‌ಸ್ಕಿ ಪ್ರೊಪಗೊಂಡ ಟೂರ್ ಮಾಡುತ್ತಿದ್ದಾರೆ” ಎಂದಿದ್ದಾರೆ. ಯುದ್ದ ಕೊನೆಗೊಳಿಸಲು ನೀವು ಕದನ ವಿರಾಮಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಝೆಲೆನ್‌ಸ್ಕಿ “ರಷ್ಯಾ ನಮ್ಮ ಭೂಭಾಗವನ್ನು ಆಕ್ರಮಿಸಿದೆ. ಆದರೆ, ನೀವು ರಷ್ಯಾ ಪರ ವಹಿಸಿ ಮಾತನಾಡುತ್ತಿದ್ದೀರಿ. ನಿಮ್ಮದು ಯಾವ ರೀತಿಯ ರಾಜತಾಂತ್ರಿಕತೆ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೆಂಡಾಮಂಡಲರಾದ ವ್ಯಾನ್ಸ್‌ “ನಿಮಗೆ ಅಮೆರಿಕ ಸಾಕಷ್ಟು ಬೆಂಬಲ ನೀಡಿದೆ. ಅದಕ್ಕೆ ನೀವು ಕೃತಜ್ಞರಾಗಿಬೇಕು, ನೀವು ಓವಲ್ ಕಚೇರಿಯಲ್ಲಿ ಅಮೆರಿಕಕ್ಕೆ ಅಗೌರ ತೋರುತ್ತಿದ್ದೀರಿ” ಎಂದಿದ್ದಾರೆ.

“ರಷ್ಯಾ- ಉಕ್ರೇನ್ ಯುದ್ಧದಲ್ಲಿ ಝೆಲೆನ್‌ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ…3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ.

“ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ ನಿಂತಿದೆ. ಯಾರು ಏನೇ ಹೇಳಿದರೂ ನಿಮಗೆ ಅಮೆರಿಕ ಸಹಾಯ ಮಾಡಿದೆ. ಆದರೆ, ನೀವು ಅಮೆರಿಕ ಜನರಿಗೆ ಅವಮಾನ ಮಾಡುವ ಕೆಲಸ ಮಾಡ್ತಿದ್ದೀರಿ. ನಾವು ಯುದ್ಧವನ್ನು ನಿಲ್ಲಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ನೀವು ಕದನ ವಿರಾಮಕ್ಕೆ ಒಪ್ಪದೆ ವಿತಂಡವಾದ ಮಾಡಿದ್ದೀರಿ. ನಾವು ಸಾವು ತಡೆಗೆ ಯತ್ನಿಸಿದರೆ, ನೀವು ಹೆಣ ನೋಡಲು ಹೋಗುತ್ತೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಬೇಸರ ಹೊರಹಾಕಿದ್ದಾರೆ.

ಟ್ರಂಪ್ ಹೇಳಿಕೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಕೂಡ ಕೆಂಡಾಮಂಡಲರಾಗಿದ್ದಾರೆ. “ನಾವು ಯಾವುದೇ ದೇಶದ ವ್ಯಾಪ್ತಿಗೆ ಒಳಪಟ್ಟಿಲ್ಲ. ನಾವು ಯಾರ ಮೇಲೂ ದಾಳಿ ಮಾಡಲಿಲ್ಲ. ರಷ್ಯಾದವರೇ ನಮ್ಮ ಮೇಲೆ ದಾಳಿ ಮಾಡಿದ್ದು” ಎಂದು ಗುಡುಗಿದ್ದಾರೆ.

ಸಭೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮ ‘ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, “ಝೆಲೆನ್‌ಸ್ಕಿ ಅವರು ನಿಯಮಗಳನ್ನು ಪಾಲಿಸದೆ ಓವಲ್ ಕಚೇರಿಯಲ್ಲಿ ಅಮೆರಿಕವನ್ನು ಅಗೌರವಿಸಿದ್ದಾರೆ. ಅವರು ಶಾಂತಿ ಪಾಲನೆಗಾಗಿ ಸಿದ್ಧರಿದ್ದರೆ ಮತ್ತೆ ಚರ್ಚೆಗೆ ಹಿಂತಿರುಗಬಹುದು” ಎಂದು ಹೇಳಿದ್ದಾರೆ.

ರಷ್ಯಾ ಪರ ಟ್ರಂಪ್ ವಕಾಲತ್ತು

ಎರಡನೇ ವಿಶ್ವ ಮಹಾಯುದ್ಧದ ಬಳಿಕ ರಷ್ಯಾ ಮತ್ತು ಅಮೆರಿಕ ಬದ್ದ ವೈರಿಗಳು ಎಂದು ಎಲ್ಲರಿಗೂ ಗೊತ್ತು. ಆದರೆ, ಈ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ, ಟ್ರಂಪ್ ರಷ್ಯಾ ಪರ ವಕಾಲತ್ತು ವಹಿಸುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ದೊಡ್ಡ ರಾಷ್ಟ್ರಗಳು ಸಣ್ಣ ರಾಷ್ಟ್ರಗಳನ್ನು ಹೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಕುತಂತ್ರದಂತೆ ಕಾಣುತ್ತಿದೆ.

ಇತ್ತೀಚೆಗೆ ವಿಶ್ವ ಸಂಸ್ಥೆಯಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ದ ಸಂಬಂಧಿತ ನಿರ್ಣಯದ ಸಂದರ್ಭದಲ್ಲೂ ಯುದ್ದಪರಾಧಕ್ಕಾಗಿ ರಷ್ಯಾವನ್ನು ದೂಷಿಸಲು ಅಮೆರಿಕ ಹಿಂಜರಿದಿತ್ತು. ಈ ಕಾರಣಕ್ಕೆ ಗೊಂದಲ ಉಂಟಾಗಿ ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ನಿರ್ಣಯದ ಮೇಲಿನ ಮತದಾನದಿಂದ ದೂರು ಉಳಿದಿತ್ತು.

ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...