Homeಅಂತರಾಷ್ಟ್ರೀಯಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

- Advertisement -
- Advertisement -

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ ಕೂಡಲೇ ಸಭೆಯಿಂದ ಹೊರ ನಡೆದಿದ್ದಾರೆ.

ಶ್ವೇತ ಭವನದಿಂದ ನಿರ್ಗಮಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಝೆಲೆನ್‌ಸ್ಕಿ, ‘ಅಮೆರಿಕ, ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಜನತೆಗೆ ಉಕ್ರೇನ್‌ಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳು. ಉಕ್ರೇನ್‌ಗೆ ಶಾಶ್ವತವಾದ ಶಾಂತಿ ಬೇಕಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಜಟಾಪಟಿ

ಖನಿಜ ಒಪ್ಪಂದ ಸಭೆ ಬಳಿಕ ಟ್ರಂಪ್, ವ್ಯಾನ್ಸ್ ಮತ್ತು ಝೆಲೆನ್‌ಸ್ಕಿ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿದ್ದರು. ಈ ವೇಳೆ ಒಂದು ರೀತಿಯಲ್ಲಿ ರಷ್ಯಾ ಮುಂದೆ ಉಕ್ರೇನ್ ಶರಣಾಗುವಂತೆ ಮತ್ತು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಟ್ರಂಪ್ ಮಾತನಾಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದರೂ, ಉಕ್ರೇನ್ ತಪ್ಪು ಮಾಡಿದಂತೆ ರಷ್ಯಾ ಪರ ವಹಿಸಿ ಟ್ರಂಪ್ ಮತ್ತು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ “ಝೆಲೆನ್‌ಸ್ಕಿ ಪ್ರೊಪಗೊಂಡ ಟೂರ್ ಮಾಡುತ್ತಿದ್ದಾರೆ” ಎಂದಿದ್ದಾರೆ. ಯುದ್ದ ಕೊನೆಗೊಳಿಸಲು ನೀವು ಕದನ ವಿರಾಮಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಝೆಲೆನ್‌ಸ್ಕಿ “ರಷ್ಯಾ ನಮ್ಮ ಭೂಭಾಗವನ್ನು ಆಕ್ರಮಿಸಿದೆ. ಆದರೆ, ನೀವು ರಷ್ಯಾ ಪರ ವಹಿಸಿ ಮಾತನಾಡುತ್ತಿದ್ದೀರಿ. ನಿಮ್ಮದು ಯಾವ ರೀತಿಯ ರಾಜತಾಂತ್ರಿಕತೆ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೆಂಡಾಮಂಡಲರಾದ ವ್ಯಾನ್ಸ್‌ “ನಿಮಗೆ ಅಮೆರಿಕ ಸಾಕಷ್ಟು ಬೆಂಬಲ ನೀಡಿದೆ. ಅದಕ್ಕೆ ನೀವು ಕೃತಜ್ಞರಾಗಿಬೇಕು, ನೀವು ಓವಲ್ ಕಚೇರಿಯಲ್ಲಿ ಅಮೆರಿಕಕ್ಕೆ ಅಗೌರ ತೋರುತ್ತಿದ್ದೀರಿ” ಎಂದಿದ್ದಾರೆ.

“ರಷ್ಯಾ- ಉಕ್ರೇನ್ ಯುದ್ಧದಲ್ಲಿ ಝೆಲೆನ್‌ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ…3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ.

“ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ ನಿಂತಿದೆ. ಯಾರು ಏನೇ ಹೇಳಿದರೂ ನಿಮಗೆ ಅಮೆರಿಕ ಸಹಾಯ ಮಾಡಿದೆ. ಆದರೆ, ನೀವು ಅಮೆರಿಕ ಜನರಿಗೆ ಅವಮಾನ ಮಾಡುವ ಕೆಲಸ ಮಾಡ್ತಿದ್ದೀರಿ. ನಾವು ಯುದ್ಧವನ್ನು ನಿಲ್ಲಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ನೀವು ಕದನ ವಿರಾಮಕ್ಕೆ ಒಪ್ಪದೆ ವಿತಂಡವಾದ ಮಾಡಿದ್ದೀರಿ. ನಾವು ಸಾವು ತಡೆಗೆ ಯತ್ನಿಸಿದರೆ, ನೀವು ಹೆಣ ನೋಡಲು ಹೋಗುತ್ತೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಬೇಸರ ಹೊರಹಾಕಿದ್ದಾರೆ.

ಟ್ರಂಪ್ ಹೇಳಿಕೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಕೂಡ ಕೆಂಡಾಮಂಡಲರಾಗಿದ್ದಾರೆ. “ನಾವು ಯಾವುದೇ ದೇಶದ ವ್ಯಾಪ್ತಿಗೆ ಒಳಪಟ್ಟಿಲ್ಲ. ನಾವು ಯಾರ ಮೇಲೂ ದಾಳಿ ಮಾಡಲಿಲ್ಲ. ರಷ್ಯಾದವರೇ ನಮ್ಮ ಮೇಲೆ ದಾಳಿ ಮಾಡಿದ್ದು” ಎಂದು ಗುಡುಗಿದ್ದಾರೆ.

ಸಭೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮ ‘ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, “ಝೆಲೆನ್‌ಸ್ಕಿ ಅವರು ನಿಯಮಗಳನ್ನು ಪಾಲಿಸದೆ ಓವಲ್ ಕಚೇರಿಯಲ್ಲಿ ಅಮೆರಿಕವನ್ನು ಅಗೌರವಿಸಿದ್ದಾರೆ. ಅವರು ಶಾಂತಿ ಪಾಲನೆಗಾಗಿ ಸಿದ್ಧರಿದ್ದರೆ ಮತ್ತೆ ಚರ್ಚೆಗೆ ಹಿಂತಿರುಗಬಹುದು” ಎಂದು ಹೇಳಿದ್ದಾರೆ.

ರಷ್ಯಾ ಪರ ಟ್ರಂಪ್ ವಕಾಲತ್ತು

ಎರಡನೇ ವಿಶ್ವ ಮಹಾಯುದ್ಧದ ಬಳಿಕ ರಷ್ಯಾ ಮತ್ತು ಅಮೆರಿಕ ಬದ್ದ ವೈರಿಗಳು ಎಂದು ಎಲ್ಲರಿಗೂ ಗೊತ್ತು. ಆದರೆ, ಈ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ, ಟ್ರಂಪ್ ರಷ್ಯಾ ಪರ ವಕಾಲತ್ತು ವಹಿಸುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ದೊಡ್ಡ ರಾಷ್ಟ್ರಗಳು ಸಣ್ಣ ರಾಷ್ಟ್ರಗಳನ್ನು ಹೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಕುತಂತ್ರದಂತೆ ಕಾಣುತ್ತಿದೆ.

ಇತ್ತೀಚೆಗೆ ವಿಶ್ವ ಸಂಸ್ಥೆಯಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ದ ಸಂಬಂಧಿತ ನಿರ್ಣಯದ ಸಂದರ್ಭದಲ್ಲೂ ಯುದ್ದಪರಾಧಕ್ಕಾಗಿ ರಷ್ಯಾವನ್ನು ದೂಷಿಸಲು ಅಮೆರಿಕ ಹಿಂಜರಿದಿತ್ತು. ಈ ಕಾರಣಕ್ಕೆ ಗೊಂದಲ ಉಂಟಾಗಿ ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ನಿರ್ಣಯದ ಮೇಲಿನ ಮತದಾನದಿಂದ ದೂರು ಉಳಿದಿತ್ತು.

ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....