Homeಅಂತರಾಷ್ಟ್ರೀಯಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

- Advertisement -
- Advertisement -

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ ಕೂಡಲೇ ಸಭೆಯಿಂದ ಹೊರ ನಡೆದಿದ್ದಾರೆ.

ಶ್ವೇತ ಭವನದಿಂದ ನಿರ್ಗಮಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಝೆಲೆನ್‌ಸ್ಕಿ, ‘ಅಮೆರಿಕ, ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಜನತೆಗೆ ಉಕ್ರೇನ್‌ಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳು. ಉಕ್ರೇನ್‌ಗೆ ಶಾಶ್ವತವಾದ ಶಾಂತಿ ಬೇಕಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಜಟಾಪಟಿ

ಖನಿಜ ಒಪ್ಪಂದ ಸಭೆ ಬಳಿಕ ಟ್ರಂಪ್, ವ್ಯಾನ್ಸ್ ಮತ್ತು ಝೆಲೆನ್‌ಸ್ಕಿ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿದ್ದರು. ಈ ವೇಳೆ ಒಂದು ರೀತಿಯಲ್ಲಿ ರಷ್ಯಾ ಮುಂದೆ ಉಕ್ರೇನ್ ಶರಣಾಗುವಂತೆ ಮತ್ತು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಟ್ರಂಪ್ ಮಾತನಾಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದರೂ, ಉಕ್ರೇನ್ ತಪ್ಪು ಮಾಡಿದಂತೆ ರಷ್ಯಾ ಪರ ವಹಿಸಿ ಟ್ರಂಪ್ ಮತ್ತು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ “ಝೆಲೆನ್‌ಸ್ಕಿ ಪ್ರೊಪಗೊಂಡ ಟೂರ್ ಮಾಡುತ್ತಿದ್ದಾರೆ” ಎಂದಿದ್ದಾರೆ. ಯುದ್ದ ಕೊನೆಗೊಳಿಸಲು ನೀವು ಕದನ ವಿರಾಮಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಝೆಲೆನ್‌ಸ್ಕಿ “ರಷ್ಯಾ ನಮ್ಮ ಭೂಭಾಗವನ್ನು ಆಕ್ರಮಿಸಿದೆ. ಆದರೆ, ನೀವು ರಷ್ಯಾ ಪರ ವಹಿಸಿ ಮಾತನಾಡುತ್ತಿದ್ದೀರಿ. ನಿಮ್ಮದು ಯಾವ ರೀತಿಯ ರಾಜತಾಂತ್ರಿಕತೆ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೆಂಡಾಮಂಡಲರಾದ ವ್ಯಾನ್ಸ್‌ “ನಿಮಗೆ ಅಮೆರಿಕ ಸಾಕಷ್ಟು ಬೆಂಬಲ ನೀಡಿದೆ. ಅದಕ್ಕೆ ನೀವು ಕೃತಜ್ಞರಾಗಿಬೇಕು, ನೀವು ಓವಲ್ ಕಚೇರಿಯಲ್ಲಿ ಅಮೆರಿಕಕ್ಕೆ ಅಗೌರ ತೋರುತ್ತಿದ್ದೀರಿ” ಎಂದಿದ್ದಾರೆ.

“ರಷ್ಯಾ- ಉಕ್ರೇನ್ ಯುದ್ಧದಲ್ಲಿ ಝೆಲೆನ್‌ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ…3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ.

“ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ ನಿಂತಿದೆ. ಯಾರು ಏನೇ ಹೇಳಿದರೂ ನಿಮಗೆ ಅಮೆರಿಕ ಸಹಾಯ ಮಾಡಿದೆ. ಆದರೆ, ನೀವು ಅಮೆರಿಕ ಜನರಿಗೆ ಅವಮಾನ ಮಾಡುವ ಕೆಲಸ ಮಾಡ್ತಿದ್ದೀರಿ. ನಾವು ಯುದ್ಧವನ್ನು ನಿಲ್ಲಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ನೀವು ಕದನ ವಿರಾಮಕ್ಕೆ ಒಪ್ಪದೆ ವಿತಂಡವಾದ ಮಾಡಿದ್ದೀರಿ. ನಾವು ಸಾವು ತಡೆಗೆ ಯತ್ನಿಸಿದರೆ, ನೀವು ಹೆಣ ನೋಡಲು ಹೋಗುತ್ತೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಬೇಸರ ಹೊರಹಾಕಿದ್ದಾರೆ.

ಟ್ರಂಪ್ ಹೇಳಿಕೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಕೂಡ ಕೆಂಡಾಮಂಡಲರಾಗಿದ್ದಾರೆ. “ನಾವು ಯಾವುದೇ ದೇಶದ ವ್ಯಾಪ್ತಿಗೆ ಒಳಪಟ್ಟಿಲ್ಲ. ನಾವು ಯಾರ ಮೇಲೂ ದಾಳಿ ಮಾಡಲಿಲ್ಲ. ರಷ್ಯಾದವರೇ ನಮ್ಮ ಮೇಲೆ ದಾಳಿ ಮಾಡಿದ್ದು” ಎಂದು ಗುಡುಗಿದ್ದಾರೆ.

ಸಭೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮ ‘ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, “ಝೆಲೆನ್‌ಸ್ಕಿ ಅವರು ನಿಯಮಗಳನ್ನು ಪಾಲಿಸದೆ ಓವಲ್ ಕಚೇರಿಯಲ್ಲಿ ಅಮೆರಿಕವನ್ನು ಅಗೌರವಿಸಿದ್ದಾರೆ. ಅವರು ಶಾಂತಿ ಪಾಲನೆಗಾಗಿ ಸಿದ್ಧರಿದ್ದರೆ ಮತ್ತೆ ಚರ್ಚೆಗೆ ಹಿಂತಿರುಗಬಹುದು” ಎಂದು ಹೇಳಿದ್ದಾರೆ.

ರಷ್ಯಾ ಪರ ಟ್ರಂಪ್ ವಕಾಲತ್ತು

ಎರಡನೇ ವಿಶ್ವ ಮಹಾಯುದ್ಧದ ಬಳಿಕ ರಷ್ಯಾ ಮತ್ತು ಅಮೆರಿಕ ಬದ್ದ ವೈರಿಗಳು ಎಂದು ಎಲ್ಲರಿಗೂ ಗೊತ್ತು. ಆದರೆ, ಈ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ, ಟ್ರಂಪ್ ರಷ್ಯಾ ಪರ ವಕಾಲತ್ತು ವಹಿಸುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ದೊಡ್ಡ ರಾಷ್ಟ್ರಗಳು ಸಣ್ಣ ರಾಷ್ಟ್ರಗಳನ್ನು ಹೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಕುತಂತ್ರದಂತೆ ಕಾಣುತ್ತಿದೆ.

ಇತ್ತೀಚೆಗೆ ವಿಶ್ವ ಸಂಸ್ಥೆಯಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ದ ಸಂಬಂಧಿತ ನಿರ್ಣಯದ ಸಂದರ್ಭದಲ್ಲೂ ಯುದ್ದಪರಾಧಕ್ಕಾಗಿ ರಷ್ಯಾವನ್ನು ದೂಷಿಸಲು ಅಮೆರಿಕ ಹಿಂಜರಿದಿತ್ತು. ಈ ಕಾರಣಕ್ಕೆ ಗೊಂದಲ ಉಂಟಾಗಿ ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ನಿರ್ಣಯದ ಮೇಲಿನ ಮತದಾನದಿಂದ ದೂರು ಉಳಿದಿತ್ತು.

ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...