Homeಅಂತರಾಷ್ಟ್ರೀಯಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

- Advertisement -
- Advertisement -

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ ಕೂಡಲೇ ಸಭೆಯಿಂದ ಹೊರ ನಡೆದಿದ್ದಾರೆ.

ಶ್ವೇತ ಭವನದಿಂದ ನಿರ್ಗಮಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಝೆಲೆನ್‌ಸ್ಕಿ, ‘ಅಮೆರಿಕ, ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಜನತೆಗೆ ಉಕ್ರೇನ್‌ಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳು. ಉಕ್ರೇನ್‌ಗೆ ಶಾಶ್ವತವಾದ ಶಾಂತಿ ಬೇಕಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಜಟಾಪಟಿ

ಖನಿಜ ಒಪ್ಪಂದ ಸಭೆ ಬಳಿಕ ಟ್ರಂಪ್, ವ್ಯಾನ್ಸ್ ಮತ್ತು ಝೆಲೆನ್‌ಸ್ಕಿ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿದ್ದರು. ಈ ವೇಳೆ ಒಂದು ರೀತಿಯಲ್ಲಿ ರಷ್ಯಾ ಮುಂದೆ ಉಕ್ರೇನ್ ಶರಣಾಗುವಂತೆ ಮತ್ತು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಟ್ರಂಪ್ ಮಾತನಾಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದರೂ, ಉಕ್ರೇನ್ ತಪ್ಪು ಮಾಡಿದಂತೆ ರಷ್ಯಾ ಪರ ವಹಿಸಿ ಟ್ರಂಪ್ ಮತ್ತು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ “ಝೆಲೆನ್‌ಸ್ಕಿ ಪ್ರೊಪಗೊಂಡ ಟೂರ್ ಮಾಡುತ್ತಿದ್ದಾರೆ” ಎಂದಿದ್ದಾರೆ. ಯುದ್ದ ಕೊನೆಗೊಳಿಸಲು ನೀವು ಕದನ ವಿರಾಮಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಝೆಲೆನ್‌ಸ್ಕಿ “ರಷ್ಯಾ ನಮ್ಮ ಭೂಭಾಗವನ್ನು ಆಕ್ರಮಿಸಿದೆ. ಆದರೆ, ನೀವು ರಷ್ಯಾ ಪರ ವಹಿಸಿ ಮಾತನಾಡುತ್ತಿದ್ದೀರಿ. ನಿಮ್ಮದು ಯಾವ ರೀತಿಯ ರಾಜತಾಂತ್ರಿಕತೆ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೆಂಡಾಮಂಡಲರಾದ ವ್ಯಾನ್ಸ್‌ “ನಿಮಗೆ ಅಮೆರಿಕ ಸಾಕಷ್ಟು ಬೆಂಬಲ ನೀಡಿದೆ. ಅದಕ್ಕೆ ನೀವು ಕೃತಜ್ಞರಾಗಿಬೇಕು, ನೀವು ಓವಲ್ ಕಚೇರಿಯಲ್ಲಿ ಅಮೆರಿಕಕ್ಕೆ ಅಗೌರ ತೋರುತ್ತಿದ್ದೀರಿ” ಎಂದಿದ್ದಾರೆ.

“ರಷ್ಯಾ- ಉಕ್ರೇನ್ ಯುದ್ಧದಲ್ಲಿ ಝೆಲೆನ್‌ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ…3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ.

“ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ ನಿಂತಿದೆ. ಯಾರು ಏನೇ ಹೇಳಿದರೂ ನಿಮಗೆ ಅಮೆರಿಕ ಸಹಾಯ ಮಾಡಿದೆ. ಆದರೆ, ನೀವು ಅಮೆರಿಕ ಜನರಿಗೆ ಅವಮಾನ ಮಾಡುವ ಕೆಲಸ ಮಾಡ್ತಿದ್ದೀರಿ. ನಾವು ಯುದ್ಧವನ್ನು ನಿಲ್ಲಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ನೀವು ಕದನ ವಿರಾಮಕ್ಕೆ ಒಪ್ಪದೆ ವಿತಂಡವಾದ ಮಾಡಿದ್ದೀರಿ. ನಾವು ಸಾವು ತಡೆಗೆ ಯತ್ನಿಸಿದರೆ, ನೀವು ಹೆಣ ನೋಡಲು ಹೋಗುತ್ತೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಬೇಸರ ಹೊರಹಾಕಿದ್ದಾರೆ.

ಟ್ರಂಪ್ ಹೇಳಿಕೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಕೂಡ ಕೆಂಡಾಮಂಡಲರಾಗಿದ್ದಾರೆ. “ನಾವು ಯಾವುದೇ ದೇಶದ ವ್ಯಾಪ್ತಿಗೆ ಒಳಪಟ್ಟಿಲ್ಲ. ನಾವು ಯಾರ ಮೇಲೂ ದಾಳಿ ಮಾಡಲಿಲ್ಲ. ರಷ್ಯಾದವರೇ ನಮ್ಮ ಮೇಲೆ ದಾಳಿ ಮಾಡಿದ್ದು” ಎಂದು ಗುಡುಗಿದ್ದಾರೆ.

ಸಭೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮ ‘ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, “ಝೆಲೆನ್‌ಸ್ಕಿ ಅವರು ನಿಯಮಗಳನ್ನು ಪಾಲಿಸದೆ ಓವಲ್ ಕಚೇರಿಯಲ್ಲಿ ಅಮೆರಿಕವನ್ನು ಅಗೌರವಿಸಿದ್ದಾರೆ. ಅವರು ಶಾಂತಿ ಪಾಲನೆಗಾಗಿ ಸಿದ್ಧರಿದ್ದರೆ ಮತ್ತೆ ಚರ್ಚೆಗೆ ಹಿಂತಿರುಗಬಹುದು” ಎಂದು ಹೇಳಿದ್ದಾರೆ.

ರಷ್ಯಾ ಪರ ಟ್ರಂಪ್ ವಕಾಲತ್ತು

ಎರಡನೇ ವಿಶ್ವ ಮಹಾಯುದ್ಧದ ಬಳಿಕ ರಷ್ಯಾ ಮತ್ತು ಅಮೆರಿಕ ಬದ್ದ ವೈರಿಗಳು ಎಂದು ಎಲ್ಲರಿಗೂ ಗೊತ್ತು. ಆದರೆ, ಈ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ, ಟ್ರಂಪ್ ರಷ್ಯಾ ಪರ ವಕಾಲತ್ತು ವಹಿಸುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ದೊಡ್ಡ ರಾಷ್ಟ್ರಗಳು ಸಣ್ಣ ರಾಷ್ಟ್ರಗಳನ್ನು ಹೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಕುತಂತ್ರದಂತೆ ಕಾಣುತ್ತಿದೆ.

ಇತ್ತೀಚೆಗೆ ವಿಶ್ವ ಸಂಸ್ಥೆಯಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ದ ಸಂಬಂಧಿತ ನಿರ್ಣಯದ ಸಂದರ್ಭದಲ್ಲೂ ಯುದ್ದಪರಾಧಕ್ಕಾಗಿ ರಷ್ಯಾವನ್ನು ದೂಷಿಸಲು ಅಮೆರಿಕ ಹಿಂಜರಿದಿತ್ತು. ಈ ಕಾರಣಕ್ಕೆ ಗೊಂದಲ ಉಂಟಾಗಿ ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ನಿರ್ಣಯದ ಮೇಲಿನ ಮತದಾನದಿಂದ ದೂರು ಉಳಿದಿತ್ತು.

ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...