Homeಅಂತರಾಷ್ಟ್ರೀಯಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

- Advertisement -
- Advertisement -

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ ಕೂಡಲೇ ಸಭೆಯಿಂದ ಹೊರ ನಡೆದಿದ್ದಾರೆ.

ಶ್ವೇತ ಭವನದಿಂದ ನಿರ್ಗಮಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಝೆಲೆನ್‌ಸ್ಕಿ, ‘ಅಮೆರಿಕ, ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಜನತೆಗೆ ಉಕ್ರೇನ್‌ಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳು. ಉಕ್ರೇನ್‌ಗೆ ಶಾಶ್ವತವಾದ ಶಾಂತಿ ಬೇಕಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಜಟಾಪಟಿ

ಖನಿಜ ಒಪ್ಪಂದ ಸಭೆ ಬಳಿಕ ಟ್ರಂಪ್, ವ್ಯಾನ್ಸ್ ಮತ್ತು ಝೆಲೆನ್‌ಸ್ಕಿ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿದ್ದರು. ಈ ವೇಳೆ ಒಂದು ರೀತಿಯಲ್ಲಿ ರಷ್ಯಾ ಮುಂದೆ ಉಕ್ರೇನ್ ಶರಣಾಗುವಂತೆ ಮತ್ತು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಟ್ರಂಪ್ ಮಾತನಾಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದರೂ, ಉಕ್ರೇನ್ ತಪ್ಪು ಮಾಡಿದಂತೆ ರಷ್ಯಾ ಪರ ವಹಿಸಿ ಟ್ರಂಪ್ ಮತ್ತು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ “ಝೆಲೆನ್‌ಸ್ಕಿ ಪ್ರೊಪಗೊಂಡ ಟೂರ್ ಮಾಡುತ್ತಿದ್ದಾರೆ” ಎಂದಿದ್ದಾರೆ. ಯುದ್ದ ಕೊನೆಗೊಳಿಸಲು ನೀವು ಕದನ ವಿರಾಮಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಝೆಲೆನ್‌ಸ್ಕಿ “ರಷ್ಯಾ ನಮ್ಮ ಭೂಭಾಗವನ್ನು ಆಕ್ರಮಿಸಿದೆ. ಆದರೆ, ನೀವು ರಷ್ಯಾ ಪರ ವಹಿಸಿ ಮಾತನಾಡುತ್ತಿದ್ದೀರಿ. ನಿಮ್ಮದು ಯಾವ ರೀತಿಯ ರಾಜತಾಂತ್ರಿಕತೆ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೆಂಡಾಮಂಡಲರಾದ ವ್ಯಾನ್ಸ್‌ “ನಿಮಗೆ ಅಮೆರಿಕ ಸಾಕಷ್ಟು ಬೆಂಬಲ ನೀಡಿದೆ. ಅದಕ್ಕೆ ನೀವು ಕೃತಜ್ಞರಾಗಿಬೇಕು, ನೀವು ಓವಲ್ ಕಚೇರಿಯಲ್ಲಿ ಅಮೆರಿಕಕ್ಕೆ ಅಗೌರ ತೋರುತ್ತಿದ್ದೀರಿ” ಎಂದಿದ್ದಾರೆ.

“ರಷ್ಯಾ- ಉಕ್ರೇನ್ ಯುದ್ಧದಲ್ಲಿ ಝೆಲೆನ್‌ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ…3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ.

“ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ ನಿಂತಿದೆ. ಯಾರು ಏನೇ ಹೇಳಿದರೂ ನಿಮಗೆ ಅಮೆರಿಕ ಸಹಾಯ ಮಾಡಿದೆ. ಆದರೆ, ನೀವು ಅಮೆರಿಕ ಜನರಿಗೆ ಅವಮಾನ ಮಾಡುವ ಕೆಲಸ ಮಾಡ್ತಿದ್ದೀರಿ. ನಾವು ಯುದ್ಧವನ್ನು ನಿಲ್ಲಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ನೀವು ಕದನ ವಿರಾಮಕ್ಕೆ ಒಪ್ಪದೆ ವಿತಂಡವಾದ ಮಾಡಿದ್ದೀರಿ. ನಾವು ಸಾವು ತಡೆಗೆ ಯತ್ನಿಸಿದರೆ, ನೀವು ಹೆಣ ನೋಡಲು ಹೋಗುತ್ತೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಬೇಸರ ಹೊರಹಾಕಿದ್ದಾರೆ.

ಟ್ರಂಪ್ ಹೇಳಿಕೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಕೂಡ ಕೆಂಡಾಮಂಡಲರಾಗಿದ್ದಾರೆ. “ನಾವು ಯಾವುದೇ ದೇಶದ ವ್ಯಾಪ್ತಿಗೆ ಒಳಪಟ್ಟಿಲ್ಲ. ನಾವು ಯಾರ ಮೇಲೂ ದಾಳಿ ಮಾಡಲಿಲ್ಲ. ರಷ್ಯಾದವರೇ ನಮ್ಮ ಮೇಲೆ ದಾಳಿ ಮಾಡಿದ್ದು” ಎಂದು ಗುಡುಗಿದ್ದಾರೆ.

ಸಭೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮ ‘ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, “ಝೆಲೆನ್‌ಸ್ಕಿ ಅವರು ನಿಯಮಗಳನ್ನು ಪಾಲಿಸದೆ ಓವಲ್ ಕಚೇರಿಯಲ್ಲಿ ಅಮೆರಿಕವನ್ನು ಅಗೌರವಿಸಿದ್ದಾರೆ. ಅವರು ಶಾಂತಿ ಪಾಲನೆಗಾಗಿ ಸಿದ್ಧರಿದ್ದರೆ ಮತ್ತೆ ಚರ್ಚೆಗೆ ಹಿಂತಿರುಗಬಹುದು” ಎಂದು ಹೇಳಿದ್ದಾರೆ.

ರಷ್ಯಾ ಪರ ಟ್ರಂಪ್ ವಕಾಲತ್ತು

ಎರಡನೇ ವಿಶ್ವ ಮಹಾಯುದ್ಧದ ಬಳಿಕ ರಷ್ಯಾ ಮತ್ತು ಅಮೆರಿಕ ಬದ್ದ ವೈರಿಗಳು ಎಂದು ಎಲ್ಲರಿಗೂ ಗೊತ್ತು. ಆದರೆ, ಈ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ, ಟ್ರಂಪ್ ರಷ್ಯಾ ಪರ ವಕಾಲತ್ತು ವಹಿಸುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ದೊಡ್ಡ ರಾಷ್ಟ್ರಗಳು ಸಣ್ಣ ರಾಷ್ಟ್ರಗಳನ್ನು ಹೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಕುತಂತ್ರದಂತೆ ಕಾಣುತ್ತಿದೆ.

ಇತ್ತೀಚೆಗೆ ವಿಶ್ವ ಸಂಸ್ಥೆಯಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ದ ಸಂಬಂಧಿತ ನಿರ್ಣಯದ ಸಂದರ್ಭದಲ್ಲೂ ಯುದ್ದಪರಾಧಕ್ಕಾಗಿ ರಷ್ಯಾವನ್ನು ದೂಷಿಸಲು ಅಮೆರಿಕ ಹಿಂಜರಿದಿತ್ತು. ಈ ಕಾರಣಕ್ಕೆ ಗೊಂದಲ ಉಂಟಾಗಿ ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ನಿರ್ಣಯದ ಮೇಲಿನ ಮತದಾನದಿಂದ ದೂರು ಉಳಿದಿತ್ತು.

ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...