Homeಅಂತರಾಷ್ಟ್ರೀಯಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

- Advertisement -
- Advertisement -

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ ಕೂಡಲೇ ಸಭೆಯಿಂದ ಹೊರ ನಡೆದಿದ್ದಾರೆ.

ಶ್ವೇತ ಭವನದಿಂದ ನಿರ್ಗಮಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಝೆಲೆನ್‌ಸ್ಕಿ, ‘ಅಮೆರಿಕ, ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಜನತೆಗೆ ಉಕ್ರೇನ್‌ಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳು. ಉಕ್ರೇನ್‌ಗೆ ಶಾಶ್ವತವಾದ ಶಾಂತಿ ಬೇಕಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಜಟಾಪಟಿ

ಖನಿಜ ಒಪ್ಪಂದ ಸಭೆ ಬಳಿಕ ಟ್ರಂಪ್, ವ್ಯಾನ್ಸ್ ಮತ್ತು ಝೆಲೆನ್‌ಸ್ಕಿ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿದ್ದರು. ಈ ವೇಳೆ ಒಂದು ರೀತಿಯಲ್ಲಿ ರಷ್ಯಾ ಮುಂದೆ ಉಕ್ರೇನ್ ಶರಣಾಗುವಂತೆ ಮತ್ತು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಟ್ರಂಪ್ ಮಾತನಾಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದರೂ, ಉಕ್ರೇನ್ ತಪ್ಪು ಮಾಡಿದಂತೆ ರಷ್ಯಾ ಪರ ವಹಿಸಿ ಟ್ರಂಪ್ ಮತ್ತು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ “ಝೆಲೆನ್‌ಸ್ಕಿ ಪ್ರೊಪಗೊಂಡ ಟೂರ್ ಮಾಡುತ್ತಿದ್ದಾರೆ” ಎಂದಿದ್ದಾರೆ. ಯುದ್ದ ಕೊನೆಗೊಳಿಸಲು ನೀವು ಕದನ ವಿರಾಮಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಝೆಲೆನ್‌ಸ್ಕಿ “ರಷ್ಯಾ ನಮ್ಮ ಭೂಭಾಗವನ್ನು ಆಕ್ರಮಿಸಿದೆ. ಆದರೆ, ನೀವು ರಷ್ಯಾ ಪರ ವಹಿಸಿ ಮಾತನಾಡುತ್ತಿದ್ದೀರಿ. ನಿಮ್ಮದು ಯಾವ ರೀತಿಯ ರಾಜತಾಂತ್ರಿಕತೆ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೆಂಡಾಮಂಡಲರಾದ ವ್ಯಾನ್ಸ್‌ “ನಿಮಗೆ ಅಮೆರಿಕ ಸಾಕಷ್ಟು ಬೆಂಬಲ ನೀಡಿದೆ. ಅದಕ್ಕೆ ನೀವು ಕೃತಜ್ಞರಾಗಿಬೇಕು, ನೀವು ಓವಲ್ ಕಚೇರಿಯಲ್ಲಿ ಅಮೆರಿಕಕ್ಕೆ ಅಗೌರ ತೋರುತ್ತಿದ್ದೀರಿ” ಎಂದಿದ್ದಾರೆ.

“ರಷ್ಯಾ- ಉಕ್ರೇನ್ ಯುದ್ಧದಲ್ಲಿ ಝೆಲೆನ್‌ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ…3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ.

“ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ ನಿಂತಿದೆ. ಯಾರು ಏನೇ ಹೇಳಿದರೂ ನಿಮಗೆ ಅಮೆರಿಕ ಸಹಾಯ ಮಾಡಿದೆ. ಆದರೆ, ನೀವು ಅಮೆರಿಕ ಜನರಿಗೆ ಅವಮಾನ ಮಾಡುವ ಕೆಲಸ ಮಾಡ್ತಿದ್ದೀರಿ. ನಾವು ಯುದ್ಧವನ್ನು ನಿಲ್ಲಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ನೀವು ಕದನ ವಿರಾಮಕ್ಕೆ ಒಪ್ಪದೆ ವಿತಂಡವಾದ ಮಾಡಿದ್ದೀರಿ. ನಾವು ಸಾವು ತಡೆಗೆ ಯತ್ನಿಸಿದರೆ, ನೀವು ಹೆಣ ನೋಡಲು ಹೋಗುತ್ತೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಬೇಸರ ಹೊರಹಾಕಿದ್ದಾರೆ.

ಟ್ರಂಪ್ ಹೇಳಿಕೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಕೂಡ ಕೆಂಡಾಮಂಡಲರಾಗಿದ್ದಾರೆ. “ನಾವು ಯಾವುದೇ ದೇಶದ ವ್ಯಾಪ್ತಿಗೆ ಒಳಪಟ್ಟಿಲ್ಲ. ನಾವು ಯಾರ ಮೇಲೂ ದಾಳಿ ಮಾಡಲಿಲ್ಲ. ರಷ್ಯಾದವರೇ ನಮ್ಮ ಮೇಲೆ ದಾಳಿ ಮಾಡಿದ್ದು” ಎಂದು ಗುಡುಗಿದ್ದಾರೆ.

ಸಭೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮ ‘ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, “ಝೆಲೆನ್‌ಸ್ಕಿ ಅವರು ನಿಯಮಗಳನ್ನು ಪಾಲಿಸದೆ ಓವಲ್ ಕಚೇರಿಯಲ್ಲಿ ಅಮೆರಿಕವನ್ನು ಅಗೌರವಿಸಿದ್ದಾರೆ. ಅವರು ಶಾಂತಿ ಪಾಲನೆಗಾಗಿ ಸಿದ್ಧರಿದ್ದರೆ ಮತ್ತೆ ಚರ್ಚೆಗೆ ಹಿಂತಿರುಗಬಹುದು” ಎಂದು ಹೇಳಿದ್ದಾರೆ.

ರಷ್ಯಾ ಪರ ಟ್ರಂಪ್ ವಕಾಲತ್ತು

ಎರಡನೇ ವಿಶ್ವ ಮಹಾಯುದ್ಧದ ಬಳಿಕ ರಷ್ಯಾ ಮತ್ತು ಅಮೆರಿಕ ಬದ್ದ ವೈರಿಗಳು ಎಂದು ಎಲ್ಲರಿಗೂ ಗೊತ್ತು. ಆದರೆ, ಈ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ, ಟ್ರಂಪ್ ರಷ್ಯಾ ಪರ ವಕಾಲತ್ತು ವಹಿಸುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ದೊಡ್ಡ ರಾಷ್ಟ್ರಗಳು ಸಣ್ಣ ರಾಷ್ಟ್ರಗಳನ್ನು ಹೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಕುತಂತ್ರದಂತೆ ಕಾಣುತ್ತಿದೆ.

ಇತ್ತೀಚೆಗೆ ವಿಶ್ವ ಸಂಸ್ಥೆಯಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ದ ಸಂಬಂಧಿತ ನಿರ್ಣಯದ ಸಂದರ್ಭದಲ್ಲೂ ಯುದ್ದಪರಾಧಕ್ಕಾಗಿ ರಷ್ಯಾವನ್ನು ದೂಷಿಸಲು ಅಮೆರಿಕ ಹಿಂಜರಿದಿತ್ತು. ಈ ಕಾರಣಕ್ಕೆ ಗೊಂದಲ ಉಂಟಾಗಿ ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ನಿರ್ಣಯದ ಮೇಲಿನ ಮತದಾನದಿಂದ ದೂರು ಉಳಿದಿತ್ತು.

ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...