Homeಅಂತರಾಷ್ಟ್ರೀಯಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ

ಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ

- Advertisement -
- Advertisement -

ಬೀಜಿಂಗ್: ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷವು ತೀವ್ರ ಸ್ವರೂಪ ಪಡೆಯುತ್ತಿದೆ. ಅಮೆರಿಕವು ಇರಾನ್ ವಿರುದ್ಧ ‘ಬಲಪ್ರಯೋಗ’ದ ಹೇಳಿಕೆ ನೀಡಿದೆ.  ಚೀನಾವು ಇದನ್ನು ಖಂಡಿಸಿ ಸ್ಪಷ್ಟ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಅವರು, ಅಮೆರಿಕದಿಂದ ಯಾವುದೇ ರೀತಿಯ ಬಲಪ್ರಯೋಗವು ಇರಾನ್‌ನ ಸಾರ್ವಭೌಮತೆ ಮತ್ತು ಭದ್ರತೆಯ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಎಂದು ತಿಳಿಸಿದರು.

ಚೀನಾವು ಇದನ್ನು ವಿರೋಧಿಸುತ್ತದೆ. ಜೊತೆಗೆ, ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಇಂತಹ ಯಾವುದೇ ಬಲಪ್ರಯೋಗದ ಬೆದರಿಕೆಯನ್ನು ಸಹ ನಾವು ವಿರೋಧಿಸುತ್ತೇವೆ ಎಂದು ಅವರು ವರದಿಗಾರರಿಗೆ ಸ್ಪಷ್ಟಪಡಿಸಿದರು.

ಈ ವಾರದ ಆರಂಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು, ಇರಾನ್ ವಿರುದ್ಧ ಇಸ್ರೇಲ್‌ನ ಮಿಲಿಟರಿ ದಾಳಿಗಳ ಬಗ್ಗೆ ಬೀಜಿಂಗ್ “ತೀವ್ರವಾಗಿ ಚಿಂತಿತವಾಗಿದೆ” ಎಂದು ಹೇಳಿಕೆ ನೀಡಿದ್ದರು.

ಕಜಕಿಸ್ತಾನ್‌ನಲ್ಲಿ ಐದು ಮಧ್ಯ ಏಷ್ಯಾ ರಾಷ್ಟ್ರಗಳೊಂದಿಗೆ ನಡೆದ ಶೃಂಗಸಭೆಯ ಸಂದರ್ಭದಲ್ಲಿ ಮಾತನಾಡಿದ ಚೀನಾ ಅಧ್ಯಕ್ಷರು, ಇಸ್ರೇಲ್ ಮತ್ತು ಇರಾನ್‌ಗಳಿಗೆ ಸಂಘರ್ಷವನ್ನು ಕೊನೆಗೊಳಿಸಲು ಕರೆ ನೀಡಿದರು.

ಕ್ಸಿ ಜಿನ್‌ಪಿಂಗ್ ಅವರು “ಎಲ್ಲಾ ಪಕ್ಷಗಳು ಆದಷ್ಟು ಬೇಗ ಸಂಘರ್ಷವನ್ನು ಕಡಿಮೆ ಮಾಡಲು ಮತ್ತು ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಡೆಯಲು ಶ್ರಮಿಸಬೇಕು” ಎಂದು ಹೇಳಿರುವುದಾಗಿ ಚೀನಾದ ಸರ್ಕಾರಿ ಪ್ರಸಾರಕ ಸಿಜಿಟಿಎನ್ ವರದಿ ಮಾಡಿದೆ.

ಚೀನಾವು ಎಲ್ಲಾ ಸಂಬಂಧಿತ ಪಕ್ಷಗಳಿಗೆ, ವಿಶೇಷವಾಗಿ ಇಸ್ರೇಲ್ ಮೇಲೆ ವಿಶೇಷ ಪ್ರಭಾವ ಹೊಂದಿರುವ ದೇಶಗಳಿಗೆ, ತಮ್ಮ ಜವಾಬ್ದಾರಿಗಳನ್ನು ಹೊರಲು, ಉದ್ವಿಗ್ನ ಪರಿಸ್ಥಿತಿಯನ್ನು ತಣ್ಣಗಾಗಿಸಲು ಮತ್ತು ಸಂಘರ್ಷವು ಉಲ್ಬಣಗೊಳ್ಳುವುದನ್ನು ಹಾಗೂ ಹರಡುವುದನ್ನು ತಡೆಯಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರೆ ನೀಡುತ್ತದೆ” ಎಂದು ಗುವೊ ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ ಯಾವುದೇ ದೇಶಗಳನ್ನು ನೇರವಾಗಿ ಹೆಸರಿಸದೆ ಹೇಳಿದರು.

ಚೀನಾದ ಈ ಇತ್ತೀಚಿನ ಹೇಳಿಕೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ದಾಳಿಗಳನ್ನು ಆಯೋಜಿಸಲು ಪರಿಗಣಿಸುತ್ತಿರುವುದಾಗಿ ಹೇಳಿದ ನಂತರ ಬಂದಿದೆ. ಅಮೆರಿಕ ದಶಕಗಳಿಂದ ಇಸ್ರೇಲ್‌ನ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಕ್ಟೋಬರ್ 2023ರಲ್ಲಿ ಗಾಜಾದಲ್ಲಿ ಯುದ್ಧ ಪ್ರಾರಂಭವಾದ ನಂತರ ಇಸ್ರೇಲ್‌ಗೆ ಅಮೆರಿಕದ ಬೆಂಬಲ ಮತ್ತಷ್ಟು ಹೆಚ್ಚಾಗಿದೆ.

ಶ್ವೇತಭವನದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ಬಗ್ಗೆ ಮಿಶ್ರ ಸಂದೇಶವನ್ನು ನೀಡಿದರು. ಅವರು ಇರಾನ್ ವಿರುದ್ಧ ದಾಳಿಗಳನ್ನು ಆದೇಶಿಸಬಹುದು ಅಥವಾ ಆದೇಶಿಸದೇ ಇರಬಹುದು ಎಂದು ಹೇಳಿದರು. ನಾನು ತಾಳ್ಮೆಯನ್ನು ಕಳೆದುಕೊಂಡಿದ್ದೇನೆ. ಇರಾನ್ ಈ ಸಂಘರ್ಷದಿಂದ ಹಿಂದೆ ಸರಿಯುವಂತೆ ಟ್ರಂಪ್ ಕರೆ ನೀಡಿದ್ದಾರೆ.

ಅಮೆರಿಕದಿಂದ ಇರಾನ್ ನಾಯಕರ ಹತ್ಯೆ ಬೆದರಿಕೆ ಖಂಡನೀಯ: ಸಿಪಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...