Homeಅಂತರಾಷ್ಟ್ರೀಯಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ

ಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ

- Advertisement -
- Advertisement -

ಬೀಜಿಂಗ್: ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷವು ತೀವ್ರ ಸ್ವರೂಪ ಪಡೆಯುತ್ತಿದೆ. ಅಮೆರಿಕವು ಇರಾನ್ ವಿರುದ್ಧ ‘ಬಲಪ್ರಯೋಗ’ದ ಹೇಳಿಕೆ ನೀಡಿದೆ.  ಚೀನಾವು ಇದನ್ನು ಖಂಡಿಸಿ ಸ್ಪಷ್ಟ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಅವರು, ಅಮೆರಿಕದಿಂದ ಯಾವುದೇ ರೀತಿಯ ಬಲಪ್ರಯೋಗವು ಇರಾನ್‌ನ ಸಾರ್ವಭೌಮತೆ ಮತ್ತು ಭದ್ರತೆಯ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಎಂದು ತಿಳಿಸಿದರು.

ಚೀನಾವು ಇದನ್ನು ವಿರೋಧಿಸುತ್ತದೆ. ಜೊತೆಗೆ, ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಇಂತಹ ಯಾವುದೇ ಬಲಪ್ರಯೋಗದ ಬೆದರಿಕೆಯನ್ನು ಸಹ ನಾವು ವಿರೋಧಿಸುತ್ತೇವೆ ಎಂದು ಅವರು ವರದಿಗಾರರಿಗೆ ಸ್ಪಷ್ಟಪಡಿಸಿದರು.

ಈ ವಾರದ ಆರಂಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು, ಇರಾನ್ ವಿರುದ್ಧ ಇಸ್ರೇಲ್‌ನ ಮಿಲಿಟರಿ ದಾಳಿಗಳ ಬಗ್ಗೆ ಬೀಜಿಂಗ್ “ತೀವ್ರವಾಗಿ ಚಿಂತಿತವಾಗಿದೆ” ಎಂದು ಹೇಳಿಕೆ ನೀಡಿದ್ದರು.

ಕಜಕಿಸ್ತಾನ್‌ನಲ್ಲಿ ಐದು ಮಧ್ಯ ಏಷ್ಯಾ ರಾಷ್ಟ್ರಗಳೊಂದಿಗೆ ನಡೆದ ಶೃಂಗಸಭೆಯ ಸಂದರ್ಭದಲ್ಲಿ ಮಾತನಾಡಿದ ಚೀನಾ ಅಧ್ಯಕ್ಷರು, ಇಸ್ರೇಲ್ ಮತ್ತು ಇರಾನ್‌ಗಳಿಗೆ ಸಂಘರ್ಷವನ್ನು ಕೊನೆಗೊಳಿಸಲು ಕರೆ ನೀಡಿದರು.

ಕ್ಸಿ ಜಿನ್‌ಪಿಂಗ್ ಅವರು “ಎಲ್ಲಾ ಪಕ್ಷಗಳು ಆದಷ್ಟು ಬೇಗ ಸಂಘರ್ಷವನ್ನು ಕಡಿಮೆ ಮಾಡಲು ಮತ್ತು ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಡೆಯಲು ಶ್ರಮಿಸಬೇಕು” ಎಂದು ಹೇಳಿರುವುದಾಗಿ ಚೀನಾದ ಸರ್ಕಾರಿ ಪ್ರಸಾರಕ ಸಿಜಿಟಿಎನ್ ವರದಿ ಮಾಡಿದೆ.

ಚೀನಾವು ಎಲ್ಲಾ ಸಂಬಂಧಿತ ಪಕ್ಷಗಳಿಗೆ, ವಿಶೇಷವಾಗಿ ಇಸ್ರೇಲ್ ಮೇಲೆ ವಿಶೇಷ ಪ್ರಭಾವ ಹೊಂದಿರುವ ದೇಶಗಳಿಗೆ, ತಮ್ಮ ಜವಾಬ್ದಾರಿಗಳನ್ನು ಹೊರಲು, ಉದ್ವಿಗ್ನ ಪರಿಸ್ಥಿತಿಯನ್ನು ತಣ್ಣಗಾಗಿಸಲು ಮತ್ತು ಸಂಘರ್ಷವು ಉಲ್ಬಣಗೊಳ್ಳುವುದನ್ನು ಹಾಗೂ ಹರಡುವುದನ್ನು ತಡೆಯಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರೆ ನೀಡುತ್ತದೆ” ಎಂದು ಗುವೊ ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ ಯಾವುದೇ ದೇಶಗಳನ್ನು ನೇರವಾಗಿ ಹೆಸರಿಸದೆ ಹೇಳಿದರು.

ಚೀನಾದ ಈ ಇತ್ತೀಚಿನ ಹೇಳಿಕೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ದಾಳಿಗಳನ್ನು ಆಯೋಜಿಸಲು ಪರಿಗಣಿಸುತ್ತಿರುವುದಾಗಿ ಹೇಳಿದ ನಂತರ ಬಂದಿದೆ. ಅಮೆರಿಕ ದಶಕಗಳಿಂದ ಇಸ್ರೇಲ್‌ನ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಕ್ಟೋಬರ್ 2023ರಲ್ಲಿ ಗಾಜಾದಲ್ಲಿ ಯುದ್ಧ ಪ್ರಾರಂಭವಾದ ನಂತರ ಇಸ್ರೇಲ್‌ಗೆ ಅಮೆರಿಕದ ಬೆಂಬಲ ಮತ್ತಷ್ಟು ಹೆಚ್ಚಾಗಿದೆ.

ಶ್ವೇತಭವನದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ಬಗ್ಗೆ ಮಿಶ್ರ ಸಂದೇಶವನ್ನು ನೀಡಿದರು. ಅವರು ಇರಾನ್ ವಿರುದ್ಧ ದಾಳಿಗಳನ್ನು ಆದೇಶಿಸಬಹುದು ಅಥವಾ ಆದೇಶಿಸದೇ ಇರಬಹುದು ಎಂದು ಹೇಳಿದರು. ನಾನು ತಾಳ್ಮೆಯನ್ನು ಕಳೆದುಕೊಂಡಿದ್ದೇನೆ. ಇರಾನ್ ಈ ಸಂಘರ್ಷದಿಂದ ಹಿಂದೆ ಸರಿಯುವಂತೆ ಟ್ರಂಪ್ ಕರೆ ನೀಡಿದ್ದಾರೆ.

ಅಮೆರಿಕದಿಂದ ಇರಾನ್ ನಾಯಕರ ಹತ್ಯೆ ಬೆದರಿಕೆ ಖಂಡನೀಯ: ಸಿಪಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...