Homeಅಂತರಾಷ್ಟ್ರೀಯಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ

ಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ

- Advertisement -
- Advertisement -

ಬೀಜಿಂಗ್: ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷವು ತೀವ್ರ ಸ್ವರೂಪ ಪಡೆಯುತ್ತಿದೆ. ಅಮೆರಿಕವು ಇರಾನ್ ವಿರುದ್ಧ ‘ಬಲಪ್ರಯೋಗ’ದ ಹೇಳಿಕೆ ನೀಡಿದೆ.  ಚೀನಾವು ಇದನ್ನು ಖಂಡಿಸಿ ಸ್ಪಷ್ಟ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಅವರು, ಅಮೆರಿಕದಿಂದ ಯಾವುದೇ ರೀತಿಯ ಬಲಪ್ರಯೋಗವು ಇರಾನ್‌ನ ಸಾರ್ವಭೌಮತೆ ಮತ್ತು ಭದ್ರತೆಯ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಎಂದು ತಿಳಿಸಿದರು.

ಚೀನಾವು ಇದನ್ನು ವಿರೋಧಿಸುತ್ತದೆ. ಜೊತೆಗೆ, ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಇಂತಹ ಯಾವುದೇ ಬಲಪ್ರಯೋಗದ ಬೆದರಿಕೆಯನ್ನು ಸಹ ನಾವು ವಿರೋಧಿಸುತ್ತೇವೆ ಎಂದು ಅವರು ವರದಿಗಾರರಿಗೆ ಸ್ಪಷ್ಟಪಡಿಸಿದರು.

ಈ ವಾರದ ಆರಂಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು, ಇರಾನ್ ವಿರುದ್ಧ ಇಸ್ರೇಲ್‌ನ ಮಿಲಿಟರಿ ದಾಳಿಗಳ ಬಗ್ಗೆ ಬೀಜಿಂಗ್ “ತೀವ್ರವಾಗಿ ಚಿಂತಿತವಾಗಿದೆ” ಎಂದು ಹೇಳಿಕೆ ನೀಡಿದ್ದರು.

ಕಜಕಿಸ್ತಾನ್‌ನಲ್ಲಿ ಐದು ಮಧ್ಯ ಏಷ್ಯಾ ರಾಷ್ಟ್ರಗಳೊಂದಿಗೆ ನಡೆದ ಶೃಂಗಸಭೆಯ ಸಂದರ್ಭದಲ್ಲಿ ಮಾತನಾಡಿದ ಚೀನಾ ಅಧ್ಯಕ್ಷರು, ಇಸ್ರೇಲ್ ಮತ್ತು ಇರಾನ್‌ಗಳಿಗೆ ಸಂಘರ್ಷವನ್ನು ಕೊನೆಗೊಳಿಸಲು ಕರೆ ನೀಡಿದರು.

ಕ್ಸಿ ಜಿನ್‌ಪಿಂಗ್ ಅವರು “ಎಲ್ಲಾ ಪಕ್ಷಗಳು ಆದಷ್ಟು ಬೇಗ ಸಂಘರ್ಷವನ್ನು ಕಡಿಮೆ ಮಾಡಲು ಮತ್ತು ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಡೆಯಲು ಶ್ರಮಿಸಬೇಕು” ಎಂದು ಹೇಳಿರುವುದಾಗಿ ಚೀನಾದ ಸರ್ಕಾರಿ ಪ್ರಸಾರಕ ಸಿಜಿಟಿಎನ್ ವರದಿ ಮಾಡಿದೆ.

ಚೀನಾವು ಎಲ್ಲಾ ಸಂಬಂಧಿತ ಪಕ್ಷಗಳಿಗೆ, ವಿಶೇಷವಾಗಿ ಇಸ್ರೇಲ್ ಮೇಲೆ ವಿಶೇಷ ಪ್ರಭಾವ ಹೊಂದಿರುವ ದೇಶಗಳಿಗೆ, ತಮ್ಮ ಜವಾಬ್ದಾರಿಗಳನ್ನು ಹೊರಲು, ಉದ್ವಿಗ್ನ ಪರಿಸ್ಥಿತಿಯನ್ನು ತಣ್ಣಗಾಗಿಸಲು ಮತ್ತು ಸಂಘರ್ಷವು ಉಲ್ಬಣಗೊಳ್ಳುವುದನ್ನು ಹಾಗೂ ಹರಡುವುದನ್ನು ತಡೆಯಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರೆ ನೀಡುತ್ತದೆ” ಎಂದು ಗುವೊ ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ ಯಾವುದೇ ದೇಶಗಳನ್ನು ನೇರವಾಗಿ ಹೆಸರಿಸದೆ ಹೇಳಿದರು.

ಚೀನಾದ ಈ ಇತ್ತೀಚಿನ ಹೇಳಿಕೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ದಾಳಿಗಳನ್ನು ಆಯೋಜಿಸಲು ಪರಿಗಣಿಸುತ್ತಿರುವುದಾಗಿ ಹೇಳಿದ ನಂತರ ಬಂದಿದೆ. ಅಮೆರಿಕ ದಶಕಗಳಿಂದ ಇಸ್ರೇಲ್‌ನ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಕ್ಟೋಬರ್ 2023ರಲ್ಲಿ ಗಾಜಾದಲ್ಲಿ ಯುದ್ಧ ಪ್ರಾರಂಭವಾದ ನಂತರ ಇಸ್ರೇಲ್‌ಗೆ ಅಮೆರಿಕದ ಬೆಂಬಲ ಮತ್ತಷ್ಟು ಹೆಚ್ಚಾಗಿದೆ.

ಶ್ವೇತಭವನದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ಬಗ್ಗೆ ಮಿಶ್ರ ಸಂದೇಶವನ್ನು ನೀಡಿದರು. ಅವರು ಇರಾನ್ ವಿರುದ್ಧ ದಾಳಿಗಳನ್ನು ಆದೇಶಿಸಬಹುದು ಅಥವಾ ಆದೇಶಿಸದೇ ಇರಬಹುದು ಎಂದು ಹೇಳಿದರು. ನಾನು ತಾಳ್ಮೆಯನ್ನು ಕಳೆದುಕೊಂಡಿದ್ದೇನೆ. ಇರಾನ್ ಈ ಸಂಘರ್ಷದಿಂದ ಹಿಂದೆ ಸರಿಯುವಂತೆ ಟ್ರಂಪ್ ಕರೆ ನೀಡಿದ್ದಾರೆ.

ಅಮೆರಿಕದಿಂದ ಇರಾನ್ ನಾಯಕರ ಹತ್ಯೆ ಬೆದರಿಕೆ ಖಂಡನೀಯ: ಸಿಪಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...