Homeಅಂತರಾಷ್ಟ್ರೀಯಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ

ಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ

- Advertisement -
- Advertisement -

ಬೀಜಿಂಗ್: ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷವು ತೀವ್ರ ಸ್ವರೂಪ ಪಡೆಯುತ್ತಿದೆ. ಅಮೆರಿಕವು ಇರಾನ್ ವಿರುದ್ಧ ‘ಬಲಪ್ರಯೋಗ’ದ ಹೇಳಿಕೆ ನೀಡಿದೆ.  ಚೀನಾವು ಇದನ್ನು ಖಂಡಿಸಿ ಸ್ಪಷ್ಟ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಅವರು, ಅಮೆರಿಕದಿಂದ ಯಾವುದೇ ರೀತಿಯ ಬಲಪ್ರಯೋಗವು ಇರಾನ್‌ನ ಸಾರ್ವಭೌಮತೆ ಮತ್ತು ಭದ್ರತೆಯ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಎಂದು ತಿಳಿಸಿದರು.

ಚೀನಾವು ಇದನ್ನು ವಿರೋಧಿಸುತ್ತದೆ. ಜೊತೆಗೆ, ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಇಂತಹ ಯಾವುದೇ ಬಲಪ್ರಯೋಗದ ಬೆದರಿಕೆಯನ್ನು ಸಹ ನಾವು ವಿರೋಧಿಸುತ್ತೇವೆ ಎಂದು ಅವರು ವರದಿಗಾರರಿಗೆ ಸ್ಪಷ್ಟಪಡಿಸಿದರು.

ಈ ವಾರದ ಆರಂಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು, ಇರಾನ್ ವಿರುದ್ಧ ಇಸ್ರೇಲ್‌ನ ಮಿಲಿಟರಿ ದಾಳಿಗಳ ಬಗ್ಗೆ ಬೀಜಿಂಗ್ “ತೀವ್ರವಾಗಿ ಚಿಂತಿತವಾಗಿದೆ” ಎಂದು ಹೇಳಿಕೆ ನೀಡಿದ್ದರು.

ಕಜಕಿಸ್ತಾನ್‌ನಲ್ಲಿ ಐದು ಮಧ್ಯ ಏಷ್ಯಾ ರಾಷ್ಟ್ರಗಳೊಂದಿಗೆ ನಡೆದ ಶೃಂಗಸಭೆಯ ಸಂದರ್ಭದಲ್ಲಿ ಮಾತನಾಡಿದ ಚೀನಾ ಅಧ್ಯಕ್ಷರು, ಇಸ್ರೇಲ್ ಮತ್ತು ಇರಾನ್‌ಗಳಿಗೆ ಸಂಘರ್ಷವನ್ನು ಕೊನೆಗೊಳಿಸಲು ಕರೆ ನೀಡಿದರು.

ಕ್ಸಿ ಜಿನ್‌ಪಿಂಗ್ ಅವರು “ಎಲ್ಲಾ ಪಕ್ಷಗಳು ಆದಷ್ಟು ಬೇಗ ಸಂಘರ್ಷವನ್ನು ಕಡಿಮೆ ಮಾಡಲು ಮತ್ತು ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಡೆಯಲು ಶ್ರಮಿಸಬೇಕು” ಎಂದು ಹೇಳಿರುವುದಾಗಿ ಚೀನಾದ ಸರ್ಕಾರಿ ಪ್ರಸಾರಕ ಸಿಜಿಟಿಎನ್ ವರದಿ ಮಾಡಿದೆ.

ಚೀನಾವು ಎಲ್ಲಾ ಸಂಬಂಧಿತ ಪಕ್ಷಗಳಿಗೆ, ವಿಶೇಷವಾಗಿ ಇಸ್ರೇಲ್ ಮೇಲೆ ವಿಶೇಷ ಪ್ರಭಾವ ಹೊಂದಿರುವ ದೇಶಗಳಿಗೆ, ತಮ್ಮ ಜವಾಬ್ದಾರಿಗಳನ್ನು ಹೊರಲು, ಉದ್ವಿಗ್ನ ಪರಿಸ್ಥಿತಿಯನ್ನು ತಣ್ಣಗಾಗಿಸಲು ಮತ್ತು ಸಂಘರ್ಷವು ಉಲ್ಬಣಗೊಳ್ಳುವುದನ್ನು ಹಾಗೂ ಹರಡುವುದನ್ನು ತಡೆಯಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರೆ ನೀಡುತ್ತದೆ” ಎಂದು ಗುವೊ ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ ಯಾವುದೇ ದೇಶಗಳನ್ನು ನೇರವಾಗಿ ಹೆಸರಿಸದೆ ಹೇಳಿದರು.

ಚೀನಾದ ಈ ಇತ್ತೀಚಿನ ಹೇಳಿಕೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ದಾಳಿಗಳನ್ನು ಆಯೋಜಿಸಲು ಪರಿಗಣಿಸುತ್ತಿರುವುದಾಗಿ ಹೇಳಿದ ನಂತರ ಬಂದಿದೆ. ಅಮೆರಿಕ ದಶಕಗಳಿಂದ ಇಸ್ರೇಲ್‌ನ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಕ್ಟೋಬರ್ 2023ರಲ್ಲಿ ಗಾಜಾದಲ್ಲಿ ಯುದ್ಧ ಪ್ರಾರಂಭವಾದ ನಂತರ ಇಸ್ರೇಲ್‌ಗೆ ಅಮೆರಿಕದ ಬೆಂಬಲ ಮತ್ತಷ್ಟು ಹೆಚ್ಚಾಗಿದೆ.

ಶ್ವೇತಭವನದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ಬಗ್ಗೆ ಮಿಶ್ರ ಸಂದೇಶವನ್ನು ನೀಡಿದರು. ಅವರು ಇರಾನ್ ವಿರುದ್ಧ ದಾಳಿಗಳನ್ನು ಆದೇಶಿಸಬಹುದು ಅಥವಾ ಆದೇಶಿಸದೇ ಇರಬಹುದು ಎಂದು ಹೇಳಿದರು. ನಾನು ತಾಳ್ಮೆಯನ್ನು ಕಳೆದುಕೊಂಡಿದ್ದೇನೆ. ಇರಾನ್ ಈ ಸಂಘರ್ಷದಿಂದ ಹಿಂದೆ ಸರಿಯುವಂತೆ ಟ್ರಂಪ್ ಕರೆ ನೀಡಿದ್ದಾರೆ.

ಅಮೆರಿಕದಿಂದ ಇರಾನ್ ನಾಯಕರ ಹತ್ಯೆ ಬೆದರಿಕೆ ಖಂಡನೀಯ: ಸಿಪಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...