Homeಮುಖಪುಟಸುದ್ದಿ ಮೇಲಿನ ನಂಬಿಕೆ - 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

ಸುದ್ದಿ ಮೇಲಿನ ನಂಬಿಕೆ – 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

- Advertisement -
- Advertisement -

ಸುದ್ದಿಗಳ ಮೇಲಿನ ನಂಬಿಕೆ ಜಾಗತಿಕವಾಗಿ ಸರಾಸರಿ ಬೆಳೆದಿದೆ ಎಂದು 2021 ರ ಡಿಜಿಟಲ್ ನ್ಯೂಸ್ ವರದಿಯ ಭಾಗವಾಗಿ 46 ದೇಶಗಳಲ್ಲಿ ನಡೆಸಿದ ಸಮೀಕ್ಷೆ ತಿಳಿಸಿದೆ. ಆದರೆ ಈ ಪಟ್ಟಿಯಲ್ಲಿ ಭಾರತ 31 ನೇ ಸ್ಥಾನದಲ್ಲಿದೆ ಎಂದು ತಿಳಿದು ಬಂದಿದೆ. ರಾಯಿಟರ್ಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸ್ಟಡಿ ಆಫ್ ಜರ್ನಲಿಸಂ ಮತ್ತು ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂ ಸಹಯೋಗದೊಂದಿಗೆ ಈ ಸಮೀಕ್ಷಯನ್ನು ನಡೆಸಿತ್ತು.

ವಿವಿಧ ದೇಶಗಳಲ್ಲಿ ಸುದ್ದಿಗಳನ್ನು ಹೇಗೆ ಬಳಸುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಮಾಡಲಾಗಿರುವ 46 ದೇಶಗಳ ಮಾಧ್ಯಮ ಮಾರುಕಟ್ಟೆಯ ಆನ್‌ಲೈನ್ ಸಮೀಕ್ಷೆಯನ್ನು ಇದು ಆಧರಿಸಿದೆ. ಈ ವರ್ಷದ ವರದಿಯು ಸುದ್ದಿಯಲ್ಲಿನ ನಂಬಿಕೆ, ಸುದ್ದಿ ಪ್ರಕಾಶಕರ ಮೇಲೆ ಸಾಂಕ್ರಾಮಿಕ ಪ್ರೇರಿತ ಆರ್ಥಿಕ ಒತ್ತಡ, ತಪ್ಪು ಮಾಹಿತಿ ಮತ್ತು ಕೊರೊನಾ ಹಾಗೂ ಸಾರ್ವಜನಿಕರಲ್ಲಿ ಡಿಜಿಟಲ್ ಸುದ್ದಿ ಬಳಕೆಯ ಇತರ ಅಂಶಗಳನ್ನು ಕೇಂದ್ರೀಕರಿಸಿದೆ.

ಭಾರತವು ಪ್ರಬಲ ಮೊಬೈಲ್ ಕೇಂದ್ರಿತ ಮಾಧ್ಯಮ ಮಾರುಕಟ್ಟೆಗಳಲ್ಲಿ ಒಂದಾಗಿದೆ. ದೇಶದ 73% ರಷ್ಟು ಜನರು ಸ್ಮಾರ್ಟ್‌ಫೋನ್‌ಗಳ ಮೂಲಕ ಸುದ್ದಿಗಳನ್ನು ನೋಡುತ್ತಾರೆ ಎಂದು ಸಮೀಕ್ಷೆಯು ಹೇಳಿದೆ. ಒಟ್ಟಾರೆಯಾಗಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ 82% ಜನರ ಸುದ್ದಿ ಮೂಲ ಆನ್‌ಲೈನ್ ಆಗಿದೆ, ಇದರಲ್ಲಿ ಸಾಮಾಜಿಕ ಜಾಲತಾಣದಲೇ 63% ಸಾಮಾಜಿಕ ಮಾಧ್ಯಮಗಳ ಮೂಲಕವೆ ಸುದ್ದಿಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ‘ಗಾಂಪರ ಗುರು’, ರಾಜ್ಯ ಬಿಜೆಪಿ ಗಾಂಪರ ಗುಂಪು!: ಕಾಂಗ್ರೆಸ್ ಲೇವಡಿ

ವಾಟ್ಸಾಪ್ ಮತ್ತು ಯೂಟ್ಯೂಬ್‌ ಉನ್ನತ ಸಾಮಾಜಿಕ ಜಾಲತಾಣದ ಪ್ಲಾಟ್‌ಫಾರ್ಮ್‌ಗಳಾಗಿದ್ದು, ಈ ಪ್ಲ್ಯಾಟ್‌ಫಾರ್ಮ್‌ಗಳಲ್ಲಿ ಅತಿರೇಕದ ತಪ್ಪು ಮಾಹಿತಿ ಸಿಗುತ್ತಿದೆ ಎಂಬ ಕಳವಳಗಳ ನಡುವೆಯು 53% ಜನರು ತಮ್ಮ ಸುದ್ದಿಯನ್ನು ಪಡೆಯುತ್ತಾರೆ ಸಮೀಕ್ಷೆ ಹೇಳಿದೆ.

46 ದೇಶಗಳ ಒಟ್ಟು ಮಾದರಿಗಳಲ್ಲಿ 44% ಜನರು ಹೆಚ್ಚಿನ ಸಮಯ ಸುದ್ದಿಯನ್ನು ನಂಬುತ್ತಾರೆ. ಆದರೆ ಭಾರತದಲ್ಲಿ 38% ಜನರು ಒಟ್ಟಾರೆ ಸುದ್ದಿಯನ್ನು ನಂಬಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಫಿನ್‌‌ಲ್ಯಾಂಡ್‌‌ನ 65% ರಷ್ಟು ಜನರು ಸುದ್ದಿಗಳನ್ನು ನಂಬುತ್ತಾರೆ ಎಂದು ತಿಳಿದು ಬಂದಿದ್ದು, ಈ ಮೂಲಕ ಇದು ಮೊದಲ ಸ್ಥಾನದಲ್ಲಿ ಇದೆ. ಆದರೆ ಅಮೆರಿಕಾ ಅತ್ಯಂತ ಕಡಿಮೆ ಮಟ್ಟದ ನಂಬಿಕೆಯನ್ನು ಹೊಂದಿದೆ. ಅಮೆರಿಕಾದಲ್ಲಿ ಕೇವಲ 29% ಜನರು ಸುದ್ದಿಗಳನ್ನು ನಂಬುತ್ತಾರೆ.

ಭಾರತದಲ್ಲಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರು ಮುಖ್ಯವಾಗಿ ಇಂಗ್ಲಿಷ್ ಮಾತನಾಡುವವರು, ಆನ್‌ಲೈನ್ ಸುದ್ದಿ ಬಳಕೆದಾರರು, ಹೆಚ್ಚು ಶ್ರೀಮಂತರು, ಕಿರಿಯರು, ವಿದ್ಯಾವಂತರು ಮತ್ತು ನಗರದಲ್ಲಿ ವಾಸಿಸುವವರಾಗಿದ್ದಾರೆ. ಇವರು ದೇಶದ ಮಾಧ್ಯಮ ಮಾರುಕಟ್ಟೆಯ ಒಂದು ಸಣ್ಣ ಭಾಗವನ್ನಷ್ಟೇ ಪ್ರತಿನಿಧಿಸುತ್ತಾರೆ. ಈ ಸಂಶೋಧನೆಗಳನ್ನು ರಾಷ್ಟ್ರವನ್ನು ಪ್ರತಿನಿಧಿಸುವಂತೆ ಪರಿಗಣಿಸಬಾರರದು ಎಂದು ಸಮೀಕ್ಷೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸಂಸದೆ ನವನೀತ್ ಕೌರ್‌ ಜಾತಿ ಪ್ರಮಾಣ ಪತ್ರ ರದ್ದತಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...