Homeಮುಖಪುಟಸುದ್ದಿ ಮೇಲಿನ ನಂಬಿಕೆ - 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

ಸುದ್ದಿ ಮೇಲಿನ ನಂಬಿಕೆ – 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

- Advertisement -
- Advertisement -

ಸುದ್ದಿಗಳ ಮೇಲಿನ ನಂಬಿಕೆ ಜಾಗತಿಕವಾಗಿ ಸರಾಸರಿ ಬೆಳೆದಿದೆ ಎಂದು 2021 ರ ಡಿಜಿಟಲ್ ನ್ಯೂಸ್ ವರದಿಯ ಭಾಗವಾಗಿ 46 ದೇಶಗಳಲ್ಲಿ ನಡೆಸಿದ ಸಮೀಕ್ಷೆ ತಿಳಿಸಿದೆ. ಆದರೆ ಈ ಪಟ್ಟಿಯಲ್ಲಿ ಭಾರತ 31 ನೇ ಸ್ಥಾನದಲ್ಲಿದೆ ಎಂದು ತಿಳಿದು ಬಂದಿದೆ. ರಾಯಿಟರ್ಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸ್ಟಡಿ ಆಫ್ ಜರ್ನಲಿಸಂ ಮತ್ತು ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂ ಸಹಯೋಗದೊಂದಿಗೆ ಈ ಸಮೀಕ್ಷಯನ್ನು ನಡೆಸಿತ್ತು.

ವಿವಿಧ ದೇಶಗಳಲ್ಲಿ ಸುದ್ದಿಗಳನ್ನು ಹೇಗೆ ಬಳಸುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಮಾಡಲಾಗಿರುವ 46 ದೇಶಗಳ ಮಾಧ್ಯಮ ಮಾರುಕಟ್ಟೆಯ ಆನ್‌ಲೈನ್ ಸಮೀಕ್ಷೆಯನ್ನು ಇದು ಆಧರಿಸಿದೆ. ಈ ವರ್ಷದ ವರದಿಯು ಸುದ್ದಿಯಲ್ಲಿನ ನಂಬಿಕೆ, ಸುದ್ದಿ ಪ್ರಕಾಶಕರ ಮೇಲೆ ಸಾಂಕ್ರಾಮಿಕ ಪ್ರೇರಿತ ಆರ್ಥಿಕ ಒತ್ತಡ, ತಪ್ಪು ಮಾಹಿತಿ ಮತ್ತು ಕೊರೊನಾ ಹಾಗೂ ಸಾರ್ವಜನಿಕರಲ್ಲಿ ಡಿಜಿಟಲ್ ಸುದ್ದಿ ಬಳಕೆಯ ಇತರ ಅಂಶಗಳನ್ನು ಕೇಂದ್ರೀಕರಿಸಿದೆ.

ಭಾರತವು ಪ್ರಬಲ ಮೊಬೈಲ್ ಕೇಂದ್ರಿತ ಮಾಧ್ಯಮ ಮಾರುಕಟ್ಟೆಗಳಲ್ಲಿ ಒಂದಾಗಿದೆ. ದೇಶದ 73% ರಷ್ಟು ಜನರು ಸ್ಮಾರ್ಟ್‌ಫೋನ್‌ಗಳ ಮೂಲಕ ಸುದ್ದಿಗಳನ್ನು ನೋಡುತ್ತಾರೆ ಎಂದು ಸಮೀಕ್ಷೆಯು ಹೇಳಿದೆ. ಒಟ್ಟಾರೆಯಾಗಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ 82% ಜನರ ಸುದ್ದಿ ಮೂಲ ಆನ್‌ಲೈನ್ ಆಗಿದೆ, ಇದರಲ್ಲಿ ಸಾಮಾಜಿಕ ಜಾಲತಾಣದಲೇ 63% ಸಾಮಾಜಿಕ ಮಾಧ್ಯಮಗಳ ಮೂಲಕವೆ ಸುದ್ದಿಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ‘ಗಾಂಪರ ಗುರು’, ರಾಜ್ಯ ಬಿಜೆಪಿ ಗಾಂಪರ ಗುಂಪು!: ಕಾಂಗ್ರೆಸ್ ಲೇವಡಿ

ವಾಟ್ಸಾಪ್ ಮತ್ತು ಯೂಟ್ಯೂಬ್‌ ಉನ್ನತ ಸಾಮಾಜಿಕ ಜಾಲತಾಣದ ಪ್ಲಾಟ್‌ಫಾರ್ಮ್‌ಗಳಾಗಿದ್ದು, ಈ ಪ್ಲ್ಯಾಟ್‌ಫಾರ್ಮ್‌ಗಳಲ್ಲಿ ಅತಿರೇಕದ ತಪ್ಪು ಮಾಹಿತಿ ಸಿಗುತ್ತಿದೆ ಎಂಬ ಕಳವಳಗಳ ನಡುವೆಯು 53% ಜನರು ತಮ್ಮ ಸುದ್ದಿಯನ್ನು ಪಡೆಯುತ್ತಾರೆ ಸಮೀಕ್ಷೆ ಹೇಳಿದೆ.

46 ದೇಶಗಳ ಒಟ್ಟು ಮಾದರಿಗಳಲ್ಲಿ 44% ಜನರು ಹೆಚ್ಚಿನ ಸಮಯ ಸುದ್ದಿಯನ್ನು ನಂಬುತ್ತಾರೆ. ಆದರೆ ಭಾರತದಲ್ಲಿ 38% ಜನರು ಒಟ್ಟಾರೆ ಸುದ್ದಿಯನ್ನು ನಂಬಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಫಿನ್‌‌ಲ್ಯಾಂಡ್‌‌ನ 65% ರಷ್ಟು ಜನರು ಸುದ್ದಿಗಳನ್ನು ನಂಬುತ್ತಾರೆ ಎಂದು ತಿಳಿದು ಬಂದಿದ್ದು, ಈ ಮೂಲಕ ಇದು ಮೊದಲ ಸ್ಥಾನದಲ್ಲಿ ಇದೆ. ಆದರೆ ಅಮೆರಿಕಾ ಅತ್ಯಂತ ಕಡಿಮೆ ಮಟ್ಟದ ನಂಬಿಕೆಯನ್ನು ಹೊಂದಿದೆ. ಅಮೆರಿಕಾದಲ್ಲಿ ಕೇವಲ 29% ಜನರು ಸುದ್ದಿಗಳನ್ನು ನಂಬುತ್ತಾರೆ.

ಭಾರತದಲ್ಲಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರು ಮುಖ್ಯವಾಗಿ ಇಂಗ್ಲಿಷ್ ಮಾತನಾಡುವವರು, ಆನ್‌ಲೈನ್ ಸುದ್ದಿ ಬಳಕೆದಾರರು, ಹೆಚ್ಚು ಶ್ರೀಮಂತರು, ಕಿರಿಯರು, ವಿದ್ಯಾವಂತರು ಮತ್ತು ನಗರದಲ್ಲಿ ವಾಸಿಸುವವರಾಗಿದ್ದಾರೆ. ಇವರು ದೇಶದ ಮಾಧ್ಯಮ ಮಾರುಕಟ್ಟೆಯ ಒಂದು ಸಣ್ಣ ಭಾಗವನ್ನಷ್ಟೇ ಪ್ರತಿನಿಧಿಸುತ್ತಾರೆ. ಈ ಸಂಶೋಧನೆಗಳನ್ನು ರಾಷ್ಟ್ರವನ್ನು ಪ್ರತಿನಿಧಿಸುವಂತೆ ಪರಿಗಣಿಸಬಾರರದು ಎಂದು ಸಮೀಕ್ಷೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸಂಸದೆ ನವನೀತ್ ಕೌರ್‌ ಜಾತಿ ಪ್ರಮಾಣ ಪತ್ರ ರದ್ದತಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...