Homeಮುಖಪುಟಸುದ್ದಿ ಮೇಲಿನ ನಂಬಿಕೆ - 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

ಸುದ್ದಿ ಮೇಲಿನ ನಂಬಿಕೆ – 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

- Advertisement -
- Advertisement -

ಸುದ್ದಿಗಳ ಮೇಲಿನ ನಂಬಿಕೆ ಜಾಗತಿಕವಾಗಿ ಸರಾಸರಿ ಬೆಳೆದಿದೆ ಎಂದು 2021 ರ ಡಿಜಿಟಲ್ ನ್ಯೂಸ್ ವರದಿಯ ಭಾಗವಾಗಿ 46 ದೇಶಗಳಲ್ಲಿ ನಡೆಸಿದ ಸಮೀಕ್ಷೆ ತಿಳಿಸಿದೆ. ಆದರೆ ಈ ಪಟ್ಟಿಯಲ್ಲಿ ಭಾರತ 31 ನೇ ಸ್ಥಾನದಲ್ಲಿದೆ ಎಂದು ತಿಳಿದು ಬಂದಿದೆ. ರಾಯಿಟರ್ಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸ್ಟಡಿ ಆಫ್ ಜರ್ನಲಿಸಂ ಮತ್ತು ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂ ಸಹಯೋಗದೊಂದಿಗೆ ಈ ಸಮೀಕ್ಷಯನ್ನು ನಡೆಸಿತ್ತು.

ವಿವಿಧ ದೇಶಗಳಲ್ಲಿ ಸುದ್ದಿಗಳನ್ನು ಹೇಗೆ ಬಳಸುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಮಾಡಲಾಗಿರುವ 46 ದೇಶಗಳ ಮಾಧ್ಯಮ ಮಾರುಕಟ್ಟೆಯ ಆನ್‌ಲೈನ್ ಸಮೀಕ್ಷೆಯನ್ನು ಇದು ಆಧರಿಸಿದೆ. ಈ ವರ್ಷದ ವರದಿಯು ಸುದ್ದಿಯಲ್ಲಿನ ನಂಬಿಕೆ, ಸುದ್ದಿ ಪ್ರಕಾಶಕರ ಮೇಲೆ ಸಾಂಕ್ರಾಮಿಕ ಪ್ರೇರಿತ ಆರ್ಥಿಕ ಒತ್ತಡ, ತಪ್ಪು ಮಾಹಿತಿ ಮತ್ತು ಕೊರೊನಾ ಹಾಗೂ ಸಾರ್ವಜನಿಕರಲ್ಲಿ ಡಿಜಿಟಲ್ ಸುದ್ದಿ ಬಳಕೆಯ ಇತರ ಅಂಶಗಳನ್ನು ಕೇಂದ್ರೀಕರಿಸಿದೆ.

ಭಾರತವು ಪ್ರಬಲ ಮೊಬೈಲ್ ಕೇಂದ್ರಿತ ಮಾಧ್ಯಮ ಮಾರುಕಟ್ಟೆಗಳಲ್ಲಿ ಒಂದಾಗಿದೆ. ದೇಶದ 73% ರಷ್ಟು ಜನರು ಸ್ಮಾರ್ಟ್‌ಫೋನ್‌ಗಳ ಮೂಲಕ ಸುದ್ದಿಗಳನ್ನು ನೋಡುತ್ತಾರೆ ಎಂದು ಸಮೀಕ್ಷೆಯು ಹೇಳಿದೆ. ಒಟ್ಟಾರೆಯಾಗಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ 82% ಜನರ ಸುದ್ದಿ ಮೂಲ ಆನ್‌ಲೈನ್ ಆಗಿದೆ, ಇದರಲ್ಲಿ ಸಾಮಾಜಿಕ ಜಾಲತಾಣದಲೇ 63% ಸಾಮಾಜಿಕ ಮಾಧ್ಯಮಗಳ ಮೂಲಕವೆ ಸುದ್ದಿಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ‘ಗಾಂಪರ ಗುರು’, ರಾಜ್ಯ ಬಿಜೆಪಿ ಗಾಂಪರ ಗುಂಪು!: ಕಾಂಗ್ರೆಸ್ ಲೇವಡಿ

ವಾಟ್ಸಾಪ್ ಮತ್ತು ಯೂಟ್ಯೂಬ್‌ ಉನ್ನತ ಸಾಮಾಜಿಕ ಜಾಲತಾಣದ ಪ್ಲಾಟ್‌ಫಾರ್ಮ್‌ಗಳಾಗಿದ್ದು, ಈ ಪ್ಲ್ಯಾಟ್‌ಫಾರ್ಮ್‌ಗಳಲ್ಲಿ ಅತಿರೇಕದ ತಪ್ಪು ಮಾಹಿತಿ ಸಿಗುತ್ತಿದೆ ಎಂಬ ಕಳವಳಗಳ ನಡುವೆಯು 53% ಜನರು ತಮ್ಮ ಸುದ್ದಿಯನ್ನು ಪಡೆಯುತ್ತಾರೆ ಸಮೀಕ್ಷೆ ಹೇಳಿದೆ.

46 ದೇಶಗಳ ಒಟ್ಟು ಮಾದರಿಗಳಲ್ಲಿ 44% ಜನರು ಹೆಚ್ಚಿನ ಸಮಯ ಸುದ್ದಿಯನ್ನು ನಂಬುತ್ತಾರೆ. ಆದರೆ ಭಾರತದಲ್ಲಿ 38% ಜನರು ಒಟ್ಟಾರೆ ಸುದ್ದಿಯನ್ನು ನಂಬಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಫಿನ್‌‌ಲ್ಯಾಂಡ್‌‌ನ 65% ರಷ್ಟು ಜನರು ಸುದ್ದಿಗಳನ್ನು ನಂಬುತ್ತಾರೆ ಎಂದು ತಿಳಿದು ಬಂದಿದ್ದು, ಈ ಮೂಲಕ ಇದು ಮೊದಲ ಸ್ಥಾನದಲ್ಲಿ ಇದೆ. ಆದರೆ ಅಮೆರಿಕಾ ಅತ್ಯಂತ ಕಡಿಮೆ ಮಟ್ಟದ ನಂಬಿಕೆಯನ್ನು ಹೊಂದಿದೆ. ಅಮೆರಿಕಾದಲ್ಲಿ ಕೇವಲ 29% ಜನರು ಸುದ್ದಿಗಳನ್ನು ನಂಬುತ್ತಾರೆ.

ಭಾರತದಲ್ಲಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರು ಮುಖ್ಯವಾಗಿ ಇಂಗ್ಲಿಷ್ ಮಾತನಾಡುವವರು, ಆನ್‌ಲೈನ್ ಸುದ್ದಿ ಬಳಕೆದಾರರು, ಹೆಚ್ಚು ಶ್ರೀಮಂತರು, ಕಿರಿಯರು, ವಿದ್ಯಾವಂತರು ಮತ್ತು ನಗರದಲ್ಲಿ ವಾಸಿಸುವವರಾಗಿದ್ದಾರೆ. ಇವರು ದೇಶದ ಮಾಧ್ಯಮ ಮಾರುಕಟ್ಟೆಯ ಒಂದು ಸಣ್ಣ ಭಾಗವನ್ನಷ್ಟೇ ಪ್ರತಿನಿಧಿಸುತ್ತಾರೆ. ಈ ಸಂಶೋಧನೆಗಳನ್ನು ರಾಷ್ಟ್ರವನ್ನು ಪ್ರತಿನಿಧಿಸುವಂತೆ ಪರಿಗಣಿಸಬಾರರದು ಎಂದು ಸಮೀಕ್ಷೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸಂಸದೆ ನವನೀತ್ ಕೌರ್‌ ಜಾತಿ ಪ್ರಮಾಣ ಪತ್ರ ರದ್ದತಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...