Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...