Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...