Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...