Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...