Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...