Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...