Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...