Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...

ವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು ‘ನ್ಯೂ ​​ಮುಸ್ಲಿಂ ಲೀಗ್’ ಎಂದು ಕರೆದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್

ತಮ್ಮ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, "ಮತಗಳಿಗಾಗಿ ವಿರೋಧ ಪಕ್ಷವು ಹೊಸ ಮುಸ್ಲಿಂ ಲೀಗ್...

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...