Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...