Homeಮುಖಪುಟಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ - RJD ಜೊತೆ ಮೈತ್ರಿಗೆ...

ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

- Advertisement -
- Advertisement -

ಕಾಂಗ್ರೆಸ್‌‌‌ ಪಕ್ಷಕ್ಕೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಪ್ರವೇಶವಾಗುತ್ತಿದ್ದಂತೆ, ಪಕ್ಷವು ಬಿಹಾರದಲ್ಲಿ ಆರ್‌ಜೆಡಿ ಜೊತೆಗಿನ ರಾಜಕೀಯ ಮೈತ್ರಿಯಿಂದ ಹೊರಬಂದಿದೆ. ಪಕ್ಷವು ಮುಂಬರುವ ತಾರಾಪುರ ಮತ್ತು ಕುಶೇಶ್ವರ್‌ ಆಸ್ಥಾನ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಲ್ಲದೆ, 2024 ರಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಟಾರ್ ಪ್ರಚಾರಕರಾಗಿ ಕನ್ಹಯ್ಯಾ, ಜಿಗ್ನೇಶ್ ಮತ್ತು ಹಾರ್ದಿಕ್ ಪಟೇಲ್ ಬಿಹಾರವನ್ನು ತಲುಪಿದ್ದು, ಪಕ್ಷದ ರಾಜಕೀಯ ಕಾರ್ಯತಂತ್ರದಲ್ಲಿ ಮಹತ್ವದ ತಿರುವು ಸಂಭವಿಸಿದೆ.

ಕನ್ಹಯ್ಯಾ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಅಸಮಾಧಾನ ಭುಗಿಲೆದ್ದಿತ್ತು. ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿರುವ ದರ್ಭಾಂಗಾದ ‘ಕುಶೇಶ್ವರ್ ಆಸ್ಥಾನ’ ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಕ್ಕು ಸಾಧಿಸುತ್ತಿದೆ.

ಇದನ್ನೂ ಓದಿ: ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

2020 ರ ರಾಜ್ಯ ಚುನಾವಣೆಯಲ್ಲಿ ತಾನು ಸ್ಪರ್ಧಿಸಿದ ಸ್ಥಾನವಾದ ಕುಶೇಶ್ವರ್‌ ಆಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಮೈತ್ರಿಯೊಳಗಿನ ಬಿರುಕು ಮುನ್ನಲೆಗೆ ಬಂದಿದೆ. ಆರ್‌ಜೆಡಿ ಕೂಡಾ ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರದ ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್,  “ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ತನ್ನ ಕಾಲ ಮೇಲೆ ನಿಲ್ಲಬೇಕು ಎಂಬ ಪಾಠ ಕಲಿತಿದೆ. ದೀರ್ಘಕಾಲದವರೆಗೆ ಯಾವುದೇ ಪಕ್ಷದ ಊರುಗೋಲನ್ನು ಅವಲಂಬಿಸುವುದು ಸೂಕ್ತವಲ್ಲ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ತನ್ನ ನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಇತರರೊಂದಿಗೆ ಕುಶೇಶ್ವರ ಆಸ್ಥಾನ ಮತ್ತು ತಾರಾಪುರದ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಗೆಲ್ಲಲು ಸಜ್ಜಾಗಿದೆ. ನಮ್ಮ ಪಕ್ಷವು ಆರ್‌ಜೆಡಿಯೊಂದಿಗೆ ಸ್ನೇಹಯುತ ಹೋರಾಟ ಮಾಡುತ್ತಿಲ್ಲ. ಬದಲಾಗಿ ನಾವು ಬೃಹತ್ ಪ್ರಮಾಣದಲ್ಲಿ ಜನರ ಬೆಂಬಲದ ಮೂಲಕ ಗೆಲ್ಲಲು ಹೋರಾಡುತ್ತಿದ್ದೇವೆ” ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಭಕತ್ ಚರಣ್ ದಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಪಕ್ಷದ ಆರಂಭಿಕ ಪ್ರಚಾರಕರಾಗಿ ಬಿಹಾರಕ್ಕೆ ಆಗಮಿಸಿದ ಪಕ್ಷದ ಮೂವರು ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಅವರ ಬಗ್ಗೆ ನಂಬಿಕೆ ಹೊಂದಿರುವ ಚರಣ್‌ ದಾಸ್, ಕಾಂಗ್ರೆಸ್ ಪಕ್ಷವು 2024 ರಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

“ಕಾಂಗ್ರೆಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಎನ್‌ಡಿಎಯನ್ನು ಎದುರಿಸಲು ತಯಾರಿ ನಡೆಸುತ್ತಿದೆ. ನಮ್ಮ ಪಕ್ಷವು ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ರಾಷ್ಟ್ರವನ್ನು ಉಳಿಸುವುದು ಮತ್ತು ರಾಜ್ಯವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಚರಣ್‌ ದಾಸ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಮೂವರು ಹೊಸ ನಾಯಕರ ಮೇಲೆ ನಂಬಿಕೆ ಇಟ್ಟಿರುವ ಚರಣ್‌ ದಾಸ್, ಕನ್ಹಯ್ಯ, ಜಿಗ್ನೇಶ್ ಮತ್ತು ಪಟೇಲ್ ಖಂಡಿತವಾಗಿಯೂ ಪಕ್ಷವನ್ನು ಬಲಪಡಿಸುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಯೊಂದಿಗೆ ಆರ್‌ಜೆಡಿಯು ಹೊಸ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಒಡಕು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

0
2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ 2012ರ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ...