Homeಮುಖಪುಟಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು- ಅಭಿಷೇಕ್ ಮನು ಸಿಂಗ್ವಿ

- Advertisement -
- Advertisement -

ಕಾಂಗ್ರೆಸ್ “ದುರ್ಬಲಗೊಳ್ಳುತ್ತಿದೆ” ಮತ್ತು ಅದನ್ನು ಬಲಪಡಿಸುವ ಅಗತ್ಯವಿದೆ ಎಂದು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಶನಿವಾರ (ಫೆ.27) ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆಗೆ ಕೆಲವೇ ವಾರಗಳಿರುವಾಗ ಈ ಹೇಳಿಕೆ ಹೊರ ಬಂದಿದೆ. ಜಿ -23 ಸದಸ್ಯರಾಗಿ, ಗಾಂಧಿ ನಾಯಕತ್ವವನ್ನು ಬಹಿರಂಗವಾಗಿ ಪ್ರಶ್ನಿಸಿದ ಹಿರಿಯ ನಾಯಕರ ಗುಂಪಿನ ಸದಸ್ಯರಾಗಿ ಕೇಂದ್ರ ನಾಯಕತ್ವಕ್ಕೆ ತೀಕ್ಷವಾದ ಹೇಳಿಕೆ ನೀಡಿದ್ದಾರೆ.

ಕಪಿಲ್ ಸಿಬಲ್ ಅವರಲ್ಲದೆ, ಮಾಜಿ ರಾಜ್ಯಸಭಾ ಸಂಸದ ಗುಲಾಮ್ ನಬಿ ಆಜಾದ್, ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ರಾಜ್ಯಸಭಾ ಸಂಸದ ವಿವೇಕ್ ತಂಖಾ, ಲೋಕಸಭಾ ಸಂಸದ ಮನೀಶ್ ತಿವಾರಿ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಕೂಡಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

“ಸತ್ಯವೆಂದರೆ, ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ. ದುರ್ಬಲಗೊಳ್ಳುವುದನ್ನು ನಾವು ನೋಡುತ್ತಿದ್ದೇವೆ. ಅದಕ್ಕಾಗಿಯೇ ನಾವು ಒಟ್ಟುಗೂಡಿದ್ದೇವೆ. ನಾವು ಒಟ್ಟಾಗಿ ಪಕ್ಷವನ್ನು ಬಲಪಡಿಸಬೇಕು” ಎಂದು ಕಪಿಲ್ ಸಿಬಲ್ ಹೇಳಿದರು.

“ನಮ್ಮ ಧ್ವನಿಯು ಪಕ್ಷದ ಸುಧಾರಣೆಗಾಗಿಯೇ. ಅದನ್ನು ಮತ್ತೊಮ್ಮೆ ದೇಶದ ಎಲ್ಲೆಡೆ ಬಲಪಡಿಸಬೇಕು. ಹೊಸ ತಲೆಮಾರಿನವರು ಪಕ್ಷಕ್ಕೆ ಸೇರ್ಪಡೆ ಹೊಂದಬೇಕು. ಕಾಂಗ್ರೆಸ್ಸಿನ ಒಳ್ಳೆಯ ದಿನಗಳನ್ನು ನಾವು ನೋಡಿದ್ದೇವೆ. ಈಗ ನಮಗೆ ವಯಸ್ಸಾದಂತೆ ಅದು ದುರ್ಬಲಗೊಳ್ಳುವುದನ್ನು ನೋಡಲು ಬಯಸುವುದಿಲ್ಲ” ಎಂದು ಆನಂದ್ ಶರ್ಮಾ ಹೇಳಿದರು.

ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಭಿನ್ನಮತೀಯ ಕಾಂಗ್ರೆಸ್ ನಾಯಕರ ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ತಮ್ಮ ಮುಖಂಡರಿಗೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೆಲಸ ಮಾಡುವತ್ತ ಗಮನಹರಿಸಬೇಕೆಂದು ಒತ್ತಾಯಿಸಿದ್ದಾರೆ.

“ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು. ಚುನಾವಣೆ ನಡೆಯುತ್ತಿರುವ ಈ ರಾಜ್ಯಗಳಲ್ಲಿ ತೊಡಗಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಉದ್ದೇಶಕ್ಕೆ ನೀಡುವ ಉತ್ತಮ ಕೊಡುಗೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪರವಾಗಿ ಅತ್ಯಂತ ಗೌರವದಿಂದ ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ. ಅವರೂ ಕೂಡ ಹೆಮ್ಮೆ ಪಡುತ್ತಾರೆ. ನಾವು ಎಂದಿಗೂ ಒಂದು ಕುಟುಂಬ. ಜಮ್ಮುವಿನಲ್ಲಿರುವ ಪ್ರತಿಯೊಬ್ಬರೂ ಹಿರಿಯ ನಾಯಕರು” ಎಂದು ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

“ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಕಾಂಗ್ರೆಸ್‌ನಲ್ಲಿ ಏನಾಗುತ್ತಿದೆ ಎಂಬ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ. ಯಾವುದೇ ಸುಧಾರಣೆಗಳು ಅಥವಾ ಚುನಾವಣೆಯ ಯಾವುದೇ ಲಕ್ಷಣಗಳಿಲ್ಲ” ಎಂದು ಜಿ -23 ಹಿರಿಯ ಮುಖಂಡರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಎಎನ್‌ಐ ಉಲ್ಲೇಖಿಸಿದ ಮೂಲಗಳು ಈ ವಿಷಯದ ಬಗ್ಗೆ ಜಿ -23 ನಾಯಕರ ಅಭಿಪ್ರಾಯದ ಬಗ್ಗೆ ಕಾಂಗ್ರೆಸ್ ನಾಯಕತ್ವಕ್ಕೆ ತಿಳಿದಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಆದರೂ “ಯಾವುದೇ ತೀರ್ಮಾನಕ್ಕೆ ಬರುವ ಆತುರದಲ್ಲಿ ಹೈಕಮಾಂಡ್ ಇಲ್ಲ ಎಂದಿದೆ.


ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...