Homeಮುಖಪುಟಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು- ಅಭಿಷೇಕ್ ಮನು ಸಿಂಗ್ವಿ

- Advertisement -
- Advertisement -

ಕಾಂಗ್ರೆಸ್ “ದುರ್ಬಲಗೊಳ್ಳುತ್ತಿದೆ” ಮತ್ತು ಅದನ್ನು ಬಲಪಡಿಸುವ ಅಗತ್ಯವಿದೆ ಎಂದು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಶನಿವಾರ (ಫೆ.27) ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆಗೆ ಕೆಲವೇ ವಾರಗಳಿರುವಾಗ ಈ ಹೇಳಿಕೆ ಹೊರ ಬಂದಿದೆ. ಜಿ -23 ಸದಸ್ಯರಾಗಿ, ಗಾಂಧಿ ನಾಯಕತ್ವವನ್ನು ಬಹಿರಂಗವಾಗಿ ಪ್ರಶ್ನಿಸಿದ ಹಿರಿಯ ನಾಯಕರ ಗುಂಪಿನ ಸದಸ್ಯರಾಗಿ ಕೇಂದ್ರ ನಾಯಕತ್ವಕ್ಕೆ ತೀಕ್ಷವಾದ ಹೇಳಿಕೆ ನೀಡಿದ್ದಾರೆ.

ಕಪಿಲ್ ಸಿಬಲ್ ಅವರಲ್ಲದೆ, ಮಾಜಿ ರಾಜ್ಯಸಭಾ ಸಂಸದ ಗುಲಾಮ್ ನಬಿ ಆಜಾದ್, ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ರಾಜ್ಯಸಭಾ ಸಂಸದ ವಿವೇಕ್ ತಂಖಾ, ಲೋಕಸಭಾ ಸಂಸದ ಮನೀಶ್ ತಿವಾರಿ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಕೂಡಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

“ಸತ್ಯವೆಂದರೆ, ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ. ದುರ್ಬಲಗೊಳ್ಳುವುದನ್ನು ನಾವು ನೋಡುತ್ತಿದ್ದೇವೆ. ಅದಕ್ಕಾಗಿಯೇ ನಾವು ಒಟ್ಟುಗೂಡಿದ್ದೇವೆ. ನಾವು ಒಟ್ಟಾಗಿ ಪಕ್ಷವನ್ನು ಬಲಪಡಿಸಬೇಕು” ಎಂದು ಕಪಿಲ್ ಸಿಬಲ್ ಹೇಳಿದರು.

“ನಮ್ಮ ಧ್ವನಿಯು ಪಕ್ಷದ ಸುಧಾರಣೆಗಾಗಿಯೇ. ಅದನ್ನು ಮತ್ತೊಮ್ಮೆ ದೇಶದ ಎಲ್ಲೆಡೆ ಬಲಪಡಿಸಬೇಕು. ಹೊಸ ತಲೆಮಾರಿನವರು ಪಕ್ಷಕ್ಕೆ ಸೇರ್ಪಡೆ ಹೊಂದಬೇಕು. ಕಾಂಗ್ರೆಸ್ಸಿನ ಒಳ್ಳೆಯ ದಿನಗಳನ್ನು ನಾವು ನೋಡಿದ್ದೇವೆ. ಈಗ ನಮಗೆ ವಯಸ್ಸಾದಂತೆ ಅದು ದುರ್ಬಲಗೊಳ್ಳುವುದನ್ನು ನೋಡಲು ಬಯಸುವುದಿಲ್ಲ” ಎಂದು ಆನಂದ್ ಶರ್ಮಾ ಹೇಳಿದರು.

ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಭಿನ್ನಮತೀಯ ಕಾಂಗ್ರೆಸ್ ನಾಯಕರ ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ತಮ್ಮ ಮುಖಂಡರಿಗೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೆಲಸ ಮಾಡುವತ್ತ ಗಮನಹರಿಸಬೇಕೆಂದು ಒತ್ತಾಯಿಸಿದ್ದಾರೆ.

“ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು. ಚುನಾವಣೆ ನಡೆಯುತ್ತಿರುವ ಈ ರಾಜ್ಯಗಳಲ್ಲಿ ತೊಡಗಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಉದ್ದೇಶಕ್ಕೆ ನೀಡುವ ಉತ್ತಮ ಕೊಡುಗೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪರವಾಗಿ ಅತ್ಯಂತ ಗೌರವದಿಂದ ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ. ಅವರೂ ಕೂಡ ಹೆಮ್ಮೆ ಪಡುತ್ತಾರೆ. ನಾವು ಎಂದಿಗೂ ಒಂದು ಕುಟುಂಬ. ಜಮ್ಮುವಿನಲ್ಲಿರುವ ಪ್ರತಿಯೊಬ್ಬರೂ ಹಿರಿಯ ನಾಯಕರು” ಎಂದು ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

“ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಕಾಂಗ್ರೆಸ್‌ನಲ್ಲಿ ಏನಾಗುತ್ತಿದೆ ಎಂಬ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ. ಯಾವುದೇ ಸುಧಾರಣೆಗಳು ಅಥವಾ ಚುನಾವಣೆಯ ಯಾವುದೇ ಲಕ್ಷಣಗಳಿಲ್ಲ” ಎಂದು ಜಿ -23 ಹಿರಿಯ ಮುಖಂಡರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಎಎನ್‌ಐ ಉಲ್ಲೇಖಿಸಿದ ಮೂಲಗಳು ಈ ವಿಷಯದ ಬಗ್ಗೆ ಜಿ -23 ನಾಯಕರ ಅಭಿಪ್ರಾಯದ ಬಗ್ಗೆ ಕಾಂಗ್ರೆಸ್ ನಾಯಕತ್ವಕ್ಕೆ ತಿಳಿದಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಆದರೂ “ಯಾವುದೇ ತೀರ್ಮಾನಕ್ಕೆ ಬರುವ ಆತುರದಲ್ಲಿ ಹೈಕಮಾಂಡ್ ಇಲ್ಲ ಎಂದಿದೆ.


ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...