Homeಮುಖಪುಟಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು- ಅಭಿಷೇಕ್ ಮನು ಸಿಂಗ್ವಿ

- Advertisement -
- Advertisement -

ಕಾಂಗ್ರೆಸ್ “ದುರ್ಬಲಗೊಳ್ಳುತ್ತಿದೆ” ಮತ್ತು ಅದನ್ನು ಬಲಪಡಿಸುವ ಅಗತ್ಯವಿದೆ ಎಂದು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಶನಿವಾರ (ಫೆ.27) ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆಗೆ ಕೆಲವೇ ವಾರಗಳಿರುವಾಗ ಈ ಹೇಳಿಕೆ ಹೊರ ಬಂದಿದೆ. ಜಿ -23 ಸದಸ್ಯರಾಗಿ, ಗಾಂಧಿ ನಾಯಕತ್ವವನ್ನು ಬಹಿರಂಗವಾಗಿ ಪ್ರಶ್ನಿಸಿದ ಹಿರಿಯ ನಾಯಕರ ಗುಂಪಿನ ಸದಸ್ಯರಾಗಿ ಕೇಂದ್ರ ನಾಯಕತ್ವಕ್ಕೆ ತೀಕ್ಷವಾದ ಹೇಳಿಕೆ ನೀಡಿದ್ದಾರೆ.

ಕಪಿಲ್ ಸಿಬಲ್ ಅವರಲ್ಲದೆ, ಮಾಜಿ ರಾಜ್ಯಸಭಾ ಸಂಸದ ಗುಲಾಮ್ ನಬಿ ಆಜಾದ್, ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ರಾಜ್ಯಸಭಾ ಸಂಸದ ವಿವೇಕ್ ತಂಖಾ, ಲೋಕಸಭಾ ಸಂಸದ ಮನೀಶ್ ತಿವಾರಿ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಕೂಡಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

“ಸತ್ಯವೆಂದರೆ, ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ. ದುರ್ಬಲಗೊಳ್ಳುವುದನ್ನು ನಾವು ನೋಡುತ್ತಿದ್ದೇವೆ. ಅದಕ್ಕಾಗಿಯೇ ನಾವು ಒಟ್ಟುಗೂಡಿದ್ದೇವೆ. ನಾವು ಒಟ್ಟಾಗಿ ಪಕ್ಷವನ್ನು ಬಲಪಡಿಸಬೇಕು” ಎಂದು ಕಪಿಲ್ ಸಿಬಲ್ ಹೇಳಿದರು.

“ನಮ್ಮ ಧ್ವನಿಯು ಪಕ್ಷದ ಸುಧಾರಣೆಗಾಗಿಯೇ. ಅದನ್ನು ಮತ್ತೊಮ್ಮೆ ದೇಶದ ಎಲ್ಲೆಡೆ ಬಲಪಡಿಸಬೇಕು. ಹೊಸ ತಲೆಮಾರಿನವರು ಪಕ್ಷಕ್ಕೆ ಸೇರ್ಪಡೆ ಹೊಂದಬೇಕು. ಕಾಂಗ್ರೆಸ್ಸಿನ ಒಳ್ಳೆಯ ದಿನಗಳನ್ನು ನಾವು ನೋಡಿದ್ದೇವೆ. ಈಗ ನಮಗೆ ವಯಸ್ಸಾದಂತೆ ಅದು ದುರ್ಬಲಗೊಳ್ಳುವುದನ್ನು ನೋಡಲು ಬಯಸುವುದಿಲ್ಲ” ಎಂದು ಆನಂದ್ ಶರ್ಮಾ ಹೇಳಿದರು.

ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಭಿನ್ನಮತೀಯ ಕಾಂಗ್ರೆಸ್ ನಾಯಕರ ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ತಮ್ಮ ಮುಖಂಡರಿಗೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೆಲಸ ಮಾಡುವತ್ತ ಗಮನಹರಿಸಬೇಕೆಂದು ಒತ್ತಾಯಿಸಿದ್ದಾರೆ.

“ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು. ಚುನಾವಣೆ ನಡೆಯುತ್ತಿರುವ ಈ ರಾಜ್ಯಗಳಲ್ಲಿ ತೊಡಗಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಉದ್ದೇಶಕ್ಕೆ ನೀಡುವ ಉತ್ತಮ ಕೊಡುಗೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪರವಾಗಿ ಅತ್ಯಂತ ಗೌರವದಿಂದ ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ. ಅವರೂ ಕೂಡ ಹೆಮ್ಮೆ ಪಡುತ್ತಾರೆ. ನಾವು ಎಂದಿಗೂ ಒಂದು ಕುಟುಂಬ. ಜಮ್ಮುವಿನಲ್ಲಿರುವ ಪ್ರತಿಯೊಬ್ಬರೂ ಹಿರಿಯ ನಾಯಕರು” ಎಂದು ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

“ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಕಾಂಗ್ರೆಸ್‌ನಲ್ಲಿ ಏನಾಗುತ್ತಿದೆ ಎಂಬ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ. ಯಾವುದೇ ಸುಧಾರಣೆಗಳು ಅಥವಾ ಚುನಾವಣೆಯ ಯಾವುದೇ ಲಕ್ಷಣಗಳಿಲ್ಲ” ಎಂದು ಜಿ -23 ಹಿರಿಯ ಮುಖಂಡರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಎಎನ್‌ಐ ಉಲ್ಲೇಖಿಸಿದ ಮೂಲಗಳು ಈ ವಿಷಯದ ಬಗ್ಗೆ ಜಿ -23 ನಾಯಕರ ಅಭಿಪ್ರಾಯದ ಬಗ್ಗೆ ಕಾಂಗ್ರೆಸ್ ನಾಯಕತ್ವಕ್ಕೆ ತಿಳಿದಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಆದರೂ “ಯಾವುದೇ ತೀರ್ಮಾನಕ್ಕೆ ಬರುವ ಆತುರದಲ್ಲಿ ಹೈಕಮಾಂಡ್ ಇಲ್ಲ ಎಂದಿದೆ.


ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....