Homeಮುಖಪುಟಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು- ಅಭಿಷೇಕ್ ಮನು ಸಿಂಗ್ವಿ

- Advertisement -
- Advertisement -

ಕಾಂಗ್ರೆಸ್ “ದುರ್ಬಲಗೊಳ್ಳುತ್ತಿದೆ” ಮತ್ತು ಅದನ್ನು ಬಲಪಡಿಸುವ ಅಗತ್ಯವಿದೆ ಎಂದು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಶನಿವಾರ (ಫೆ.27) ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆಗೆ ಕೆಲವೇ ವಾರಗಳಿರುವಾಗ ಈ ಹೇಳಿಕೆ ಹೊರ ಬಂದಿದೆ. ಜಿ -23 ಸದಸ್ಯರಾಗಿ, ಗಾಂಧಿ ನಾಯಕತ್ವವನ್ನು ಬಹಿರಂಗವಾಗಿ ಪ್ರಶ್ನಿಸಿದ ಹಿರಿಯ ನಾಯಕರ ಗುಂಪಿನ ಸದಸ್ಯರಾಗಿ ಕೇಂದ್ರ ನಾಯಕತ್ವಕ್ಕೆ ತೀಕ್ಷವಾದ ಹೇಳಿಕೆ ನೀಡಿದ್ದಾರೆ.

ಕಪಿಲ್ ಸಿಬಲ್ ಅವರಲ್ಲದೆ, ಮಾಜಿ ರಾಜ್ಯಸಭಾ ಸಂಸದ ಗುಲಾಮ್ ನಬಿ ಆಜಾದ್, ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ರಾಜ್ಯಸಭಾ ಸಂಸದ ವಿವೇಕ್ ತಂಖಾ, ಲೋಕಸಭಾ ಸಂಸದ ಮನೀಶ್ ತಿವಾರಿ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಕೂಡಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

“ಸತ್ಯವೆಂದರೆ, ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ. ದುರ್ಬಲಗೊಳ್ಳುವುದನ್ನು ನಾವು ನೋಡುತ್ತಿದ್ದೇವೆ. ಅದಕ್ಕಾಗಿಯೇ ನಾವು ಒಟ್ಟುಗೂಡಿದ್ದೇವೆ. ನಾವು ಒಟ್ಟಾಗಿ ಪಕ್ಷವನ್ನು ಬಲಪಡಿಸಬೇಕು” ಎಂದು ಕಪಿಲ್ ಸಿಬಲ್ ಹೇಳಿದರು.

“ನಮ್ಮ ಧ್ವನಿಯು ಪಕ್ಷದ ಸುಧಾರಣೆಗಾಗಿಯೇ. ಅದನ್ನು ಮತ್ತೊಮ್ಮೆ ದೇಶದ ಎಲ್ಲೆಡೆ ಬಲಪಡಿಸಬೇಕು. ಹೊಸ ತಲೆಮಾರಿನವರು ಪಕ್ಷಕ್ಕೆ ಸೇರ್ಪಡೆ ಹೊಂದಬೇಕು. ಕಾಂಗ್ರೆಸ್ಸಿನ ಒಳ್ಳೆಯ ದಿನಗಳನ್ನು ನಾವು ನೋಡಿದ್ದೇವೆ. ಈಗ ನಮಗೆ ವಯಸ್ಸಾದಂತೆ ಅದು ದುರ್ಬಲಗೊಳ್ಳುವುದನ್ನು ನೋಡಲು ಬಯಸುವುದಿಲ್ಲ” ಎಂದು ಆನಂದ್ ಶರ್ಮಾ ಹೇಳಿದರು.

ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಭಿನ್ನಮತೀಯ ಕಾಂಗ್ರೆಸ್ ನಾಯಕರ ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ತಮ್ಮ ಮುಖಂಡರಿಗೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೆಲಸ ಮಾಡುವತ್ತ ಗಮನಹರಿಸಬೇಕೆಂದು ಒತ್ತಾಯಿಸಿದ್ದಾರೆ.

“ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು. ಚುನಾವಣೆ ನಡೆಯುತ್ತಿರುವ ಈ ರಾಜ್ಯಗಳಲ್ಲಿ ತೊಡಗಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಉದ್ದೇಶಕ್ಕೆ ನೀಡುವ ಉತ್ತಮ ಕೊಡುಗೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪರವಾಗಿ ಅತ್ಯಂತ ಗೌರವದಿಂದ ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ. ಅವರೂ ಕೂಡ ಹೆಮ್ಮೆ ಪಡುತ್ತಾರೆ. ನಾವು ಎಂದಿಗೂ ಒಂದು ಕುಟುಂಬ. ಜಮ್ಮುವಿನಲ್ಲಿರುವ ಪ್ರತಿಯೊಬ್ಬರೂ ಹಿರಿಯ ನಾಯಕರು” ಎಂದು ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

“ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಕಾಂಗ್ರೆಸ್‌ನಲ್ಲಿ ಏನಾಗುತ್ತಿದೆ ಎಂಬ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ. ಯಾವುದೇ ಸುಧಾರಣೆಗಳು ಅಥವಾ ಚುನಾವಣೆಯ ಯಾವುದೇ ಲಕ್ಷಣಗಳಿಲ್ಲ” ಎಂದು ಜಿ -23 ಹಿರಿಯ ಮುಖಂಡರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಎಎನ್‌ಐ ಉಲ್ಲೇಖಿಸಿದ ಮೂಲಗಳು ಈ ವಿಷಯದ ಬಗ್ಗೆ ಜಿ -23 ನಾಯಕರ ಅಭಿಪ್ರಾಯದ ಬಗ್ಗೆ ಕಾಂಗ್ರೆಸ್ ನಾಯಕತ್ವಕ್ಕೆ ತಿಳಿದಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಆದರೂ “ಯಾವುದೇ ತೀರ್ಮಾನಕ್ಕೆ ಬರುವ ಆತುರದಲ್ಲಿ ಹೈಕಮಾಂಡ್ ಇಲ್ಲ ಎಂದಿದೆ.


ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...