Homeಮುಖಪುಟಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು- ಅಭಿಷೇಕ್ ಮನು ಸಿಂಗ್ವಿ

- Advertisement -
- Advertisement -

ಕಾಂಗ್ರೆಸ್ “ದುರ್ಬಲಗೊಳ್ಳುತ್ತಿದೆ” ಮತ್ತು ಅದನ್ನು ಬಲಪಡಿಸುವ ಅಗತ್ಯವಿದೆ ಎಂದು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಶನಿವಾರ (ಫೆ.27) ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆಗೆ ಕೆಲವೇ ವಾರಗಳಿರುವಾಗ ಈ ಹೇಳಿಕೆ ಹೊರ ಬಂದಿದೆ. ಜಿ -23 ಸದಸ್ಯರಾಗಿ, ಗಾಂಧಿ ನಾಯಕತ್ವವನ್ನು ಬಹಿರಂಗವಾಗಿ ಪ್ರಶ್ನಿಸಿದ ಹಿರಿಯ ನಾಯಕರ ಗುಂಪಿನ ಸದಸ್ಯರಾಗಿ ಕೇಂದ್ರ ನಾಯಕತ್ವಕ್ಕೆ ತೀಕ್ಷವಾದ ಹೇಳಿಕೆ ನೀಡಿದ್ದಾರೆ.

ಕಪಿಲ್ ಸಿಬಲ್ ಅವರಲ್ಲದೆ, ಮಾಜಿ ರಾಜ್ಯಸಭಾ ಸಂಸದ ಗುಲಾಮ್ ನಬಿ ಆಜಾದ್, ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ರಾಜ್ಯಸಭಾ ಸಂಸದ ವಿವೇಕ್ ತಂಖಾ, ಲೋಕಸಭಾ ಸಂಸದ ಮನೀಶ್ ತಿವಾರಿ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಕೂಡಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

“ಸತ್ಯವೆಂದರೆ, ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ. ದುರ್ಬಲಗೊಳ್ಳುವುದನ್ನು ನಾವು ನೋಡುತ್ತಿದ್ದೇವೆ. ಅದಕ್ಕಾಗಿಯೇ ನಾವು ಒಟ್ಟುಗೂಡಿದ್ದೇವೆ. ನಾವು ಒಟ್ಟಾಗಿ ಪಕ್ಷವನ್ನು ಬಲಪಡಿಸಬೇಕು” ಎಂದು ಕಪಿಲ್ ಸಿಬಲ್ ಹೇಳಿದರು.

“ನಮ್ಮ ಧ್ವನಿಯು ಪಕ್ಷದ ಸುಧಾರಣೆಗಾಗಿಯೇ. ಅದನ್ನು ಮತ್ತೊಮ್ಮೆ ದೇಶದ ಎಲ್ಲೆಡೆ ಬಲಪಡಿಸಬೇಕು. ಹೊಸ ತಲೆಮಾರಿನವರು ಪಕ್ಷಕ್ಕೆ ಸೇರ್ಪಡೆ ಹೊಂದಬೇಕು. ಕಾಂಗ್ರೆಸ್ಸಿನ ಒಳ್ಳೆಯ ದಿನಗಳನ್ನು ನಾವು ನೋಡಿದ್ದೇವೆ. ಈಗ ನಮಗೆ ವಯಸ್ಸಾದಂತೆ ಅದು ದುರ್ಬಲಗೊಳ್ಳುವುದನ್ನು ನೋಡಲು ಬಯಸುವುದಿಲ್ಲ” ಎಂದು ಆನಂದ್ ಶರ್ಮಾ ಹೇಳಿದರು.

ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಭಿನ್ನಮತೀಯ ಕಾಂಗ್ರೆಸ್ ನಾಯಕರ ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ತಮ್ಮ ಮುಖಂಡರಿಗೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೆಲಸ ಮಾಡುವತ್ತ ಗಮನಹರಿಸಬೇಕೆಂದು ಒತ್ತಾಯಿಸಿದ್ದಾರೆ.

“ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು. ಚುನಾವಣೆ ನಡೆಯುತ್ತಿರುವ ಈ ರಾಜ್ಯಗಳಲ್ಲಿ ತೊಡಗಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಉದ್ದೇಶಕ್ಕೆ ನೀಡುವ ಉತ್ತಮ ಕೊಡುಗೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪರವಾಗಿ ಅತ್ಯಂತ ಗೌರವದಿಂದ ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ. ಅವರೂ ಕೂಡ ಹೆಮ್ಮೆ ಪಡುತ್ತಾರೆ. ನಾವು ಎಂದಿಗೂ ಒಂದು ಕುಟುಂಬ. ಜಮ್ಮುವಿನಲ್ಲಿರುವ ಪ್ರತಿಯೊಬ್ಬರೂ ಹಿರಿಯ ನಾಯಕರು” ಎಂದು ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

“ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಕಾಂಗ್ರೆಸ್‌ನಲ್ಲಿ ಏನಾಗುತ್ತಿದೆ ಎಂಬ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ. ಯಾವುದೇ ಸುಧಾರಣೆಗಳು ಅಥವಾ ಚುನಾವಣೆಯ ಯಾವುದೇ ಲಕ್ಷಣಗಳಿಲ್ಲ” ಎಂದು ಜಿ -23 ಹಿರಿಯ ಮುಖಂಡರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಎಎನ್‌ಐ ಉಲ್ಲೇಖಿಸಿದ ಮೂಲಗಳು ಈ ವಿಷಯದ ಬಗ್ಗೆ ಜಿ -23 ನಾಯಕರ ಅಭಿಪ್ರಾಯದ ಬಗ್ಗೆ ಕಾಂಗ್ರೆಸ್ ನಾಯಕತ್ವಕ್ಕೆ ತಿಳಿದಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಆದರೂ “ಯಾವುದೇ ತೀರ್ಮಾನಕ್ಕೆ ಬರುವ ಆತುರದಲ್ಲಿ ಹೈಕಮಾಂಡ್ ಇಲ್ಲ ಎಂದಿದೆ.


ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...