Homeಮುಖಪುಟನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ 'ಪಾಕಿಸ್ತಾನ್‌ ಝಿಂದಾಬಾದ್‌' ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

ನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್‌’ ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆದ್ದ ಬಳಿಕ ವಿಜಯೋತ್ಸವದ ವೇಳೆ ಅವರ ಬೆಂಬಲಿಗರು ಕೂಗಿದ್ದು ಸಾಸೀರ್‌ ಸಾಬ್‌ ಝಿಂದಾಬಾದ್ ಹೊರತು, ಪಾಕಿಸ್ತಾನ್‌ ಝಿಂದಾಬಾದ್‌ ಅಲ್ಲ, ಆದರೆ ಕನ್ನಡದ ಮಾಧ್ಯಮಗಳು ಇದನ್ನು ತಿರುಚಿವೆ ಎಂದು ಘೋಷಣೆಯ ವೇಳೆ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ ಎಂ.ಮಧು ತಿಳಿಸಿದ್ದಾರೆ.

ಎಎನ್‌ಐ ಕರ್ನಾಟಕ ಮುಖ್ಯಸ್ಥರೂ ಆಗಿರುವ ಮಧು ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು,
‘ಇವರು ಕಾಂಗ್ರೆಸ್ ಪಕ್ಷದ ಸಂಸದ ನಾಸೀರ್‌ ಹುಸೇನ್. ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಇವರ ಬೆಂಬಲಿಗರು ನಾಸೀರ್ ಸಾಬ್ ಝಿಂದಾಬಾದ್, ನಾಸೀರ್‌ ಸಾಬ್ ಝಿಂದಾಬಾದ್, ಸೈಯದ್ ಸಾಬ್  ಝಿಂದಾಬಾದ್ ಎಂದು ಕೂಗಿದರು. ಆದರೆ ಕನ್ನಡದ ಸುದ್ದಿವಾಹಿನಿಗಳು ಇದನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಪ್ಪಾಗಿ ಸುದ್ದಿ ಮಾಡಿದೆ. ಇದು ಉದ್ದೇಶಪೂರ್ವಕ ಕರುಣಾಜನಕ ಪ್ರಮಾದ ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

 

ಇದಲ್ಲದೆ ಮಧು ಅವರು ಮತ್ತೊಂದು ಪೋಸ್ಟ್‌  ಮಾಡಿದ್ದು, ಇದನ್ನು ಪೊಲೀಸ್, ಸರ್ಕಾರ ಮತ್ತು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ನಾನು ನೋಡಿದ್ದನ್ನು ಮತ್ತು ನಾನು ಕೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ಆ ಬೆಂಬಲಿಗರ ಗುಂಪಿನಲ್ಲಿ ಯಾರೂ ಕೂಡ ಯಾವುದೇ ದೇಶದ ಪರವಾಗಿ ಯಾವುದೇ ಘೋಷಣೆಯನ್ನು ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತ ಮಧು ಅವರು ಆರಂಭದಿಂದ ಕೊನೆಯವರೆಗೂ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಇದಲ್ಲದೆ ಮಧು ಅವರಿಗೆ ತಮ್ಮ ಪೋಸ್ಟ್ ಅಳಿಸಿ ಹಾಕುವಂತೆ ಒತ್ತಡಗಳನ್ನು ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಮಾಧ್ಯಮಗಳ ವರದಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ, ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ  “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ! ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ, ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?  ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ, ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು. ಮಾಧ್ಯಮ ಜಾಗೃತವಾಗಲಿ. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಲಿ. ಈ ರೀತಿ ಭಜನೆಗಲ್ಲಾ ಎಂದು ಪ್ರಿಯಾಂಕ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ರಾಜ್ಯಸಭೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು. ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆಯನ್ನು ಮಾಡಿತ್ತು. ಆದರೆ ವಾಸ್ತವವಾಗಿ ಕಾಂಗ್ರೆಸ್‌ ಕಾರ್ಯಕರ್ತರು, ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ವಿಡಿಯೋಗಳ ಪರಿಶೀಲನೆ ವೇಳೆ ಬಯಲಾಗಿತ್ತು.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...