Homeಮುಖಪುಟನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ 'ಪಾಕಿಸ್ತಾನ್‌ ಝಿಂದಾಬಾದ್‌' ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

ನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್‌’ ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆದ್ದ ಬಳಿಕ ವಿಜಯೋತ್ಸವದ ವೇಳೆ ಅವರ ಬೆಂಬಲಿಗರು ಕೂಗಿದ್ದು ಸಾಸೀರ್‌ ಸಾಬ್‌ ಝಿಂದಾಬಾದ್ ಹೊರತು, ಪಾಕಿಸ್ತಾನ್‌ ಝಿಂದಾಬಾದ್‌ ಅಲ್ಲ, ಆದರೆ ಕನ್ನಡದ ಮಾಧ್ಯಮಗಳು ಇದನ್ನು ತಿರುಚಿವೆ ಎಂದು ಘೋಷಣೆಯ ವೇಳೆ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ ಎಂ.ಮಧು ತಿಳಿಸಿದ್ದಾರೆ.

ಎಎನ್‌ಐ ಕರ್ನಾಟಕ ಮುಖ್ಯಸ್ಥರೂ ಆಗಿರುವ ಮಧು ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು,
‘ಇವರು ಕಾಂಗ್ರೆಸ್ ಪಕ್ಷದ ಸಂಸದ ನಾಸೀರ್‌ ಹುಸೇನ್. ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಇವರ ಬೆಂಬಲಿಗರು ನಾಸೀರ್ ಸಾಬ್ ಝಿಂದಾಬಾದ್, ನಾಸೀರ್‌ ಸಾಬ್ ಝಿಂದಾಬಾದ್, ಸೈಯದ್ ಸಾಬ್  ಝಿಂದಾಬಾದ್ ಎಂದು ಕೂಗಿದರು. ಆದರೆ ಕನ್ನಡದ ಸುದ್ದಿವಾಹಿನಿಗಳು ಇದನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಪ್ಪಾಗಿ ಸುದ್ದಿ ಮಾಡಿದೆ. ಇದು ಉದ್ದೇಶಪೂರ್ವಕ ಕರುಣಾಜನಕ ಪ್ರಮಾದ ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

 

ಇದಲ್ಲದೆ ಮಧು ಅವರು ಮತ್ತೊಂದು ಪೋಸ್ಟ್‌  ಮಾಡಿದ್ದು, ಇದನ್ನು ಪೊಲೀಸ್, ಸರ್ಕಾರ ಮತ್ತು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ನಾನು ನೋಡಿದ್ದನ್ನು ಮತ್ತು ನಾನು ಕೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ಆ ಬೆಂಬಲಿಗರ ಗುಂಪಿನಲ್ಲಿ ಯಾರೂ ಕೂಡ ಯಾವುದೇ ದೇಶದ ಪರವಾಗಿ ಯಾವುದೇ ಘೋಷಣೆಯನ್ನು ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತ ಮಧು ಅವರು ಆರಂಭದಿಂದ ಕೊನೆಯವರೆಗೂ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಇದಲ್ಲದೆ ಮಧು ಅವರಿಗೆ ತಮ್ಮ ಪೋಸ್ಟ್ ಅಳಿಸಿ ಹಾಕುವಂತೆ ಒತ್ತಡಗಳನ್ನು ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಮಾಧ್ಯಮಗಳ ವರದಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ, ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ  “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ! ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ, ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?  ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ, ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು. ಮಾಧ್ಯಮ ಜಾಗೃತವಾಗಲಿ. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಲಿ. ಈ ರೀತಿ ಭಜನೆಗಲ್ಲಾ ಎಂದು ಪ್ರಿಯಾಂಕ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ರಾಜ್ಯಸಭೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು. ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆಯನ್ನು ಮಾಡಿತ್ತು. ಆದರೆ ವಾಸ್ತವವಾಗಿ ಕಾಂಗ್ರೆಸ್‌ ಕಾರ್ಯಕರ್ತರು, ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ವಿಡಿಯೋಗಳ ಪರಿಶೀಲನೆ ವೇಳೆ ಬಯಲಾಗಿತ್ತು.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...