Homeಮುಖಪುಟನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ 'ಪಾಕಿಸ್ತಾನ್‌ ಝಿಂದಾಬಾದ್‌' ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

ನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್‌’ ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆದ್ದ ಬಳಿಕ ವಿಜಯೋತ್ಸವದ ವೇಳೆ ಅವರ ಬೆಂಬಲಿಗರು ಕೂಗಿದ್ದು ಸಾಸೀರ್‌ ಸಾಬ್‌ ಝಿಂದಾಬಾದ್ ಹೊರತು, ಪಾಕಿಸ್ತಾನ್‌ ಝಿಂದಾಬಾದ್‌ ಅಲ್ಲ, ಆದರೆ ಕನ್ನಡದ ಮಾಧ್ಯಮಗಳು ಇದನ್ನು ತಿರುಚಿವೆ ಎಂದು ಘೋಷಣೆಯ ವೇಳೆ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ ಎಂ.ಮಧು ತಿಳಿಸಿದ್ದಾರೆ.

ಎಎನ್‌ಐ ಕರ್ನಾಟಕ ಮುಖ್ಯಸ್ಥರೂ ಆಗಿರುವ ಮಧು ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು,
‘ಇವರು ಕಾಂಗ್ರೆಸ್ ಪಕ್ಷದ ಸಂಸದ ನಾಸೀರ್‌ ಹುಸೇನ್. ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಇವರ ಬೆಂಬಲಿಗರು ನಾಸೀರ್ ಸಾಬ್ ಝಿಂದಾಬಾದ್, ನಾಸೀರ್‌ ಸಾಬ್ ಝಿಂದಾಬಾದ್, ಸೈಯದ್ ಸಾಬ್  ಝಿಂದಾಬಾದ್ ಎಂದು ಕೂಗಿದರು. ಆದರೆ ಕನ್ನಡದ ಸುದ್ದಿವಾಹಿನಿಗಳು ಇದನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಪ್ಪಾಗಿ ಸುದ್ದಿ ಮಾಡಿದೆ. ಇದು ಉದ್ದೇಶಪೂರ್ವಕ ಕರುಣಾಜನಕ ಪ್ರಮಾದ ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

 

ಇದಲ್ಲದೆ ಮಧು ಅವರು ಮತ್ತೊಂದು ಪೋಸ್ಟ್‌  ಮಾಡಿದ್ದು, ಇದನ್ನು ಪೊಲೀಸ್, ಸರ್ಕಾರ ಮತ್ತು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ನಾನು ನೋಡಿದ್ದನ್ನು ಮತ್ತು ನಾನು ಕೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ಆ ಬೆಂಬಲಿಗರ ಗುಂಪಿನಲ್ಲಿ ಯಾರೂ ಕೂಡ ಯಾವುದೇ ದೇಶದ ಪರವಾಗಿ ಯಾವುದೇ ಘೋಷಣೆಯನ್ನು ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತ ಮಧು ಅವರು ಆರಂಭದಿಂದ ಕೊನೆಯವರೆಗೂ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಇದಲ್ಲದೆ ಮಧು ಅವರಿಗೆ ತಮ್ಮ ಪೋಸ್ಟ್ ಅಳಿಸಿ ಹಾಕುವಂತೆ ಒತ್ತಡಗಳನ್ನು ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಮಾಧ್ಯಮಗಳ ವರದಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ, ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ  “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ! ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ, ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?  ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ, ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು. ಮಾಧ್ಯಮ ಜಾಗೃತವಾಗಲಿ. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಲಿ. ಈ ರೀತಿ ಭಜನೆಗಲ್ಲಾ ಎಂದು ಪ್ರಿಯಾಂಕ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ರಾಜ್ಯಸಭೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು. ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆಯನ್ನು ಮಾಡಿತ್ತು. ಆದರೆ ವಾಸ್ತವವಾಗಿ ಕಾಂಗ್ರೆಸ್‌ ಕಾರ್ಯಕರ್ತರು, ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ವಿಡಿಯೋಗಳ ಪರಿಶೀಲನೆ ವೇಳೆ ಬಯಲಾಗಿತ್ತು.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...