Homeಮುಖಪುಟನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ 'ಪಾಕಿಸ್ತಾನ್‌ ಝಿಂದಾಬಾದ್‌' ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

ನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್‌’ ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆದ್ದ ಬಳಿಕ ವಿಜಯೋತ್ಸವದ ವೇಳೆ ಅವರ ಬೆಂಬಲಿಗರು ಕೂಗಿದ್ದು ಸಾಸೀರ್‌ ಸಾಬ್‌ ಝಿಂದಾಬಾದ್ ಹೊರತು, ಪಾಕಿಸ್ತಾನ್‌ ಝಿಂದಾಬಾದ್‌ ಅಲ್ಲ, ಆದರೆ ಕನ್ನಡದ ಮಾಧ್ಯಮಗಳು ಇದನ್ನು ತಿರುಚಿವೆ ಎಂದು ಘೋಷಣೆಯ ವೇಳೆ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ ಎಂ.ಮಧು ತಿಳಿಸಿದ್ದಾರೆ.

ಎಎನ್‌ಐ ಕರ್ನಾಟಕ ಮುಖ್ಯಸ್ಥರೂ ಆಗಿರುವ ಮಧು ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು,
‘ಇವರು ಕಾಂಗ್ರೆಸ್ ಪಕ್ಷದ ಸಂಸದ ನಾಸೀರ್‌ ಹುಸೇನ್. ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಇವರ ಬೆಂಬಲಿಗರು ನಾಸೀರ್ ಸಾಬ್ ಝಿಂದಾಬಾದ್, ನಾಸೀರ್‌ ಸಾಬ್ ಝಿಂದಾಬಾದ್, ಸೈಯದ್ ಸಾಬ್  ಝಿಂದಾಬಾದ್ ಎಂದು ಕೂಗಿದರು. ಆದರೆ ಕನ್ನಡದ ಸುದ್ದಿವಾಹಿನಿಗಳು ಇದನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಪ್ಪಾಗಿ ಸುದ್ದಿ ಮಾಡಿದೆ. ಇದು ಉದ್ದೇಶಪೂರ್ವಕ ಕರುಣಾಜನಕ ಪ್ರಮಾದ ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

 

ಇದಲ್ಲದೆ ಮಧು ಅವರು ಮತ್ತೊಂದು ಪೋಸ್ಟ್‌  ಮಾಡಿದ್ದು, ಇದನ್ನು ಪೊಲೀಸ್, ಸರ್ಕಾರ ಮತ್ತು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ನಾನು ನೋಡಿದ್ದನ್ನು ಮತ್ತು ನಾನು ಕೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ಆ ಬೆಂಬಲಿಗರ ಗುಂಪಿನಲ್ಲಿ ಯಾರೂ ಕೂಡ ಯಾವುದೇ ದೇಶದ ಪರವಾಗಿ ಯಾವುದೇ ಘೋಷಣೆಯನ್ನು ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತ ಮಧು ಅವರು ಆರಂಭದಿಂದ ಕೊನೆಯವರೆಗೂ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಇದಲ್ಲದೆ ಮಧು ಅವರಿಗೆ ತಮ್ಮ ಪೋಸ್ಟ್ ಅಳಿಸಿ ಹಾಕುವಂತೆ ಒತ್ತಡಗಳನ್ನು ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಮಾಧ್ಯಮಗಳ ವರದಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ, ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ  “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ! ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ, ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?  ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ, ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು. ಮಾಧ್ಯಮ ಜಾಗೃತವಾಗಲಿ. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಲಿ. ಈ ರೀತಿ ಭಜನೆಗಲ್ಲಾ ಎಂದು ಪ್ರಿಯಾಂಕ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ರಾಜ್ಯಸಭೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು. ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆಯನ್ನು ಮಾಡಿತ್ತು. ಆದರೆ ವಾಸ್ತವವಾಗಿ ಕಾಂಗ್ರೆಸ್‌ ಕಾರ್ಯಕರ್ತರು, ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ವಿಡಿಯೋಗಳ ಪರಿಶೀಲನೆ ವೇಳೆ ಬಯಲಾಗಿತ್ತು.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...