Homeಮುಖಪುಟನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ 'ಪಾಕಿಸ್ತಾನ್‌ ಝಿಂದಾಬಾದ್‌' ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

ನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್‌’ ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆದ್ದ ಬಳಿಕ ವಿಜಯೋತ್ಸವದ ವೇಳೆ ಅವರ ಬೆಂಬಲಿಗರು ಕೂಗಿದ್ದು ಸಾಸೀರ್‌ ಸಾಬ್‌ ಝಿಂದಾಬಾದ್ ಹೊರತು, ಪಾಕಿಸ್ತಾನ್‌ ಝಿಂದಾಬಾದ್‌ ಅಲ್ಲ, ಆದರೆ ಕನ್ನಡದ ಮಾಧ್ಯಮಗಳು ಇದನ್ನು ತಿರುಚಿವೆ ಎಂದು ಘೋಷಣೆಯ ವೇಳೆ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ ಎಂ.ಮಧು ತಿಳಿಸಿದ್ದಾರೆ.

ಎಎನ್‌ಐ ಕರ್ನಾಟಕ ಮುಖ್ಯಸ್ಥರೂ ಆಗಿರುವ ಮಧು ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು,
‘ಇವರು ಕಾಂಗ್ರೆಸ್ ಪಕ್ಷದ ಸಂಸದ ನಾಸೀರ್‌ ಹುಸೇನ್. ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಇವರ ಬೆಂಬಲಿಗರು ನಾಸೀರ್ ಸಾಬ್ ಝಿಂದಾಬಾದ್, ನಾಸೀರ್‌ ಸಾಬ್ ಝಿಂದಾಬಾದ್, ಸೈಯದ್ ಸಾಬ್  ಝಿಂದಾಬಾದ್ ಎಂದು ಕೂಗಿದರು. ಆದರೆ ಕನ್ನಡದ ಸುದ್ದಿವಾಹಿನಿಗಳು ಇದನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಪ್ಪಾಗಿ ಸುದ್ದಿ ಮಾಡಿದೆ. ಇದು ಉದ್ದೇಶಪೂರ್ವಕ ಕರುಣಾಜನಕ ಪ್ರಮಾದ ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

 

ಇದಲ್ಲದೆ ಮಧು ಅವರು ಮತ್ತೊಂದು ಪೋಸ್ಟ್‌  ಮಾಡಿದ್ದು, ಇದನ್ನು ಪೊಲೀಸ್, ಸರ್ಕಾರ ಮತ್ತು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ನಾನು ನೋಡಿದ್ದನ್ನು ಮತ್ತು ನಾನು ಕೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ಆ ಬೆಂಬಲಿಗರ ಗುಂಪಿನಲ್ಲಿ ಯಾರೂ ಕೂಡ ಯಾವುದೇ ದೇಶದ ಪರವಾಗಿ ಯಾವುದೇ ಘೋಷಣೆಯನ್ನು ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತ ಮಧು ಅವರು ಆರಂಭದಿಂದ ಕೊನೆಯವರೆಗೂ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಇದಲ್ಲದೆ ಮಧು ಅವರಿಗೆ ತಮ್ಮ ಪೋಸ್ಟ್ ಅಳಿಸಿ ಹಾಕುವಂತೆ ಒತ್ತಡಗಳನ್ನು ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಮಾಧ್ಯಮಗಳ ವರದಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ, ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ  “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ! ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ, ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?  ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ, ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು. ಮಾಧ್ಯಮ ಜಾಗೃತವಾಗಲಿ. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಲಿ. ಈ ರೀತಿ ಭಜನೆಗಲ್ಲಾ ಎಂದು ಪ್ರಿಯಾಂಕ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ರಾಜ್ಯಸಭೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು. ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆಯನ್ನು ಮಾಡಿತ್ತು. ಆದರೆ ವಾಸ್ತವವಾಗಿ ಕಾಂಗ್ರೆಸ್‌ ಕಾರ್ಯಕರ್ತರು, ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ವಿಡಿಯೋಗಳ ಪರಿಶೀಲನೆ ವೇಳೆ ಬಯಲಾಗಿತ್ತು.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...