Homeಅಂತರಾಷ್ಟ್ರೀಯ‘ಟ್ರೂಥ್‌ ಸೋಶಿಯಲ್‌’ | ಹೊಸ ಸಾಮಾಜಿಕ ಜಾಲತಾಣ ಘೋಷಿಸಿದ ಟ್ರಂಪ್!

‘ಟ್ರೂಥ್‌ ಸೋಶಿಯಲ್‌’ | ಹೊಸ ಸಾಮಾಜಿಕ ಜಾಲತಾಣ ಘೋಷಿಸಿದ ಟ್ರಂಪ್!

ತನ್ನ ಮೇಲೆ ನಿಷೇಧ ಹೇರಿದ ಫೇಸ್‌ಬುಕ್ ಮತ್ತು ಟ್ವಿಟರ್‌ ಮೇಲೆ ಅವರು ಸಮರ ಸಾರಿದ್ದಾರೆ

- Advertisement -
- Advertisement -

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಫೇಸ್‌ಬುಕ್ ಮತ್ತು ಟ್ವಿಟರ್‌ ನಿಷೇಧ ಹೇರಿದೆ. ಇದೀಗ ಅವರೇ ಸ್ವತಃ ಸಾಮಾಜಿಕ ಜಾಲತಾಣವೊಂದನ್ನು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ. ಜಾಲತಾಣಕ್ಕೆ ‘ಟ್ರೂಥ್‌ ಸೋಶಿಯಲ್‌’ ಎಂಬ ಹೆಸರು ನೀಡಲಾಗಿದ್ದು, ಇನ್ನೂ ಪ್ರಾರಂಭವಾಗಿಲ್ಲ. ಜಾಲತಾಣ ನವೆಂಬರ್‌‌ನಲ್ಲಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಧ್ಯಕ್ಷೀಯ ಚುನಾವಣೆಯ ಸಂದರ್ಭ ಅಮೆರಿಕದ ಕ್ಯಾಪಿಟಲ್ ಹಿಲ್‌ನಲ್ಲಿ ಟ್ರಂಪ್ ಬೆಂಬಲಿಗರು ಹಿಂಸಾಚಾರ ನಡೆಸಿದ್ದರು. ಇದರ ನಂತರ ಅವರನ್ನು ಫೇಸ್‌ಬುಕ್ ಮತ್ತು ಟ್ವಿಟರ್‌‌ ತಮ್ಮ ಜಾಲತಾಣಗಳಲ್ಲಿ ನಿಷೇಧಿಸಿತ್ತು. ಜಾಗತಿಕ ದೈತ ಸಾಮಾಜಿಕ ಜಾಲತಾಣಗಳು ಟ್ರಂಪ್‌ ಅವರನ್ನು ನಿರ್ಬಂಧಿಸುತ್ತಿದ್ದಂತೆ, ತಮ್ಮದೇ ಸ್ವಂತ ಸಾಮಾಜಿಕ ಮಾಧ್ಯಮ ರೂಪಿಸುವುದಾಗಿ ಅವರು ಘೋಷಿಸಿದ್ದರು.

ಇದನ್ನೂ ಓದಿ: ಕ್ಯಾಪಿಟಲ್ ಮೇಲೆ ದಾಳಿ: ಟ್ರಂಪ್ ಮತ್ತು ಬಲಪಂಥೀಯ ಗುಂಪುಗಳ ವಿರುದ್ಧ ಮೊಕದ್ದಮೆ ಹೂಡಿದ ಪೊಲೀಸರು

“ತಾಲಿಬಾನಿಗಳೇ ಹೆಚ್ಚು ತುಂಬಿರುವ ಟ್ವಿಟ್ಟರ್‌ನ್ನು ನಾವು ಬಳಕೆ ಮಾಡುತ್ತಿದ್ದೇವೆ. ಇಷ್ಟಾದರೂ ಅಮೆರಿಕದ ಜನಪ್ರಿಯ ಅಧ್ಯಕ್ಷರು ಮೌನವಾಗಿದ್ದಾರೆ. ಇದು ಸ್ವೀಕಾರಾರ್ಹವಲ್ಲ” ಎಂದು ಟ್ರಂಪ್ ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿದೆ.

 

ಟ್ರಂಪ್ ಮೀಡಿಯಾ ಮತ್ತು ಟೆಕ್ನಾಲಜಿ ಗ್ರೂಪ್ ಹಾಗೂ ಸ್ಪೆಷಲ್‌ ಅಕ್ವಶೀಷನ್‌ ಕಂಪೆನಿ (ಎಸ್‌ಪಿಎಸಿ) ಯನ್ನು ವಿಲೀನ ಮಾಡಿ ಒಂದು ಹೊಸ ಕಂಪನಿಯ ಮೂಲಕ ‘ಟ್ರೂಥ್‌ ಸೋಶಿಯಲ್‌’ ಅನ್ನು ರಚಿಸಲಾಗುವುದು ಎಂದು ಎರಡೂ ಸಂಸ್ಥೆಗಳು ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿವೆ ಎಂದು ರಾಯ್ಟರ್ಸ್‌ ವರದಿ ಹೇಳಿದೆ.

“ನಾನು ಶೀಘ್ರದಲ್ಲೇ ‘ಟ್ರೂಥ್‌ ಸೋಶಿಯಲ್‌’ನಲ್ಲಿ ನನ್ನ ಮೊದಲ ಸತ್ಯವನ್ನು ಕಳುಹಿಸಲು ಉತ್ಸುಕನಾಗಿದ್ದೇನೆ. ಎಲ್ಲರಿಗೂ ಧ್ವನಿಯನ್ನು ನೀಡುವ ಉದ್ದೇಶದಿಂದ TMTG ಅನ್ನು ಸ್ಥಾಪಿಸಲಾಗಿದೆ. ಶೀಘ್ರದಲ್ಲೇ ‘ಟ್ರೂಥ್‌ ಸೋಶಿಯಲ್‌’ ಕುರಿತು ನನ್ನ ಯೋಚನೆಗಳನ್ನು ಹಂಚಿಕೊಳ್ಳಲು ಮತ್ತು ಬೃಹತ್‌ ಸಾಮಾಜಿಕ ಜಾಲತಾಣಗಳ ವಿರುದ್ಧ ಹೋರಾಡಲು ನಾನು ಉತ್ಸುಕನಾಗಿದ್ದೇನೆ” ಎಂದು ಟ್ರಂಪ್ ಹೇಳಿದ್ದಾರೆ. ಈ ಮೂಲಕ ತನ್ನ ಮೇಲೆ ನಿಷೇಧ ಹೇರಿದ ಫೇಸ್‌ಬುಕ್ ಮತ್ತು ಟ್ವಿಟರ್‌ ಮೇಲೆ ಸಮರ ಸಾರಿದ್ದಾರೆ.

ಇದನ್ನೂ ಓದಿ: 2023ರವರೆಗೆ ಟ್ರಂಪ್‌ ಖಾತೆ ಬ್ಯಾನ್‌ ವಿಸ್ತರಿಸಿದ ಫೇಸ್‌ಬುಕ್: ಅವಮಾನವೆಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...