Homeಮುಖಪುಟವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

ವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹಿಂದೂಯೇತರರನ್ನು ದೂರವಿಡಿ ಎಂದು ಪೋಸ್ಟರ್‌ ಹಾಕುವ ಮೂಲಕ ಕೋಮುದ್ವೇಷ ಹರಡಲು ಯತ್ನಿಸಿದ ಐವರ ವಿರುದ್ಧ ವಾರಣಾಸಿ ಪೊಲೀಸರು ಜನವರಿ 9ರಂದು ಎಫ್‌ಐಆರ್‌‌ ದಾಖಲಿಸಿದ್ದಾರೆ.

ವಾರಣಾಸಿಯ ವಿವಿಧ ಘಾಟ್‌ಗಳಲ್ಲಿ ಹಿಂದೂಯೇತರರನ್ನು ದೂರವಿಡುವಂತೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳನ್ನು ಹಾಕಲಾಗಿತ್ತು. ಈ ಕುರಿತು ಇಲ್ಲಿನ ಭೇಲುಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಸದಸ್ಯರು ವಾರಣಾಸಿಯ ಘಾಟ್‌ಗಳ ಸುತ್ತಲೂ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಅದರಲ್ಲಿ ಹಿಂದೂಯೇತರರು ವಾರಣಾಸಿಯಲ್ಲಿ ಗಂಗಾನದಿಯ ದಂಡೆಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿತ್ತು. ಈ ಪೋಸ್ಟರ್‌ಗಳನ್ನು ಹಾಕುತ್ತಿರುವ ಫೋಟೋಗಳು, ವೀಡಿಯೊಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಐವರು ಆರೋಪಿಗಳಲ್ಲಿ ಇಬ್ಬರು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸೇರಿದವರು. ಅವರೇ ಈ ಕುರಿತು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬಿಬ್ಬರನ್ನು ರಾಜನ್ ಗುಪ್ತಾ, ನಿಖಿಲ್ ತ್ರಿಪಾಠಿ “ರುದ್ರ” ಎಂದು ಪೊಲೀಸರು ಗುರುತಿಸಿದ್ದಾರೆ.

ವಿಎಚ್‌ಪಿಯ ವಾರಣಾಸಿ ವಿಭಾಗದ ಕಾರ್ಯದರ್ಶಿ ರಾಜನ್ ಗುಪ್ತಾ ಅವರು ವೀಡಿಯೊವೊಂದರಲ್ಲಿ, “ಈ ಪೋಸ್ಟರ್‌ಗಳು ಮನವಿಯಲ್ಲ, ಆದರೆ ಸನಾತನ ಧರ್ಮವನ್ನು ಅನುಸರಿಸದವರಿಗೆ ಎಚ್ಚರಿಕೆ” ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇಲ್ಲಿನ ಘಾಟ್‌ಗಳು, ಕಾಶಿಯ ದೇವಾಲಯಗಳನ್ನು ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಸಂಕೇತಗಳೆಂದು ಕರೆದಿರುವ ಗುಪ್ತಾ, ಇತರರು ಇಲ್ಲಿಂದ ದೂರವಿರಬೇಕು ಎಂದು ಹೇಳುತ್ತಾರೆ. “ಈ ಸ್ಥಳಗಳಿಗೆ ಭೇಟಿ ನೀಡುವವರು ಹಿಂದೂ ಧರ್ಮದಲ್ಲಿ ನಂಬಿಕೆ ಹೊಂದಿದ್ದರೆ, ಅವರಿಗೆ ಸ್ವಾಗತವಿದೆ. ಇಲ್ಲದಿದ್ದರೆ ನಾವು ಅವರನ್ನು ನಮ್ಮ ಪವಿತ್ರ ಸ್ಥಳಗಳಿಂದ ವಾಪಸ್‌ ಕಳುಹಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಬಜರಂಗದಳದ ವಾರಣಾಸಿ ಸಂಯೋಜಕ, ನಿಖಿಲ್ ತ್ರಿಪಾಠಿ ‘ರುದ್ರ’ ಮಾತನಾಡಿ, “ಗಂಗಾ ನದಿ ನಮ್ಮ ತಾಯಿ, ಇದು ಪಿಕ್ನಿಕ್ ಸ್ಪಾಟ್ ಅಲ್ಲ. ಗಂಗೆಯನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸುವವರು ಅದರಿಂದ ದೂರವಿರಬೇಕು. ಅವರಾಗಿಯೇ ಇದನ್ನು ಪಾಲಿಸದಿದ್ದರೆ ಬಜರಂಗದಳ ಈ ಕೆಲಸವನ್ನು ಮಾಡಿಸುತ್ತದೆ” ಎಂದಿದ್ದಾರೆ.

ಇಬ್ಬರನ್ನು ಸಂಘಟನೆಗಳಿಂದ ತೆಗೆದುಹಾಕಲಾಗಿದೆ ಎಂದು ವಿಎಚ್‌ಪಿ ಭಾನುವಾರ ಹೇಳಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌‌ ವರದಿ ಮಾಡಿದೆ.

ಸಹಾಯಕ ಪೊಲೀಸ್ ಕಮಿಷನರ್ (ಭೇಲುಪುರ್) ಪ್ರವೀಣ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ಭಾಗಿಯಾಗಿರುವ ಇತರರ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ತನಿಖಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ.

ಗುಪ್ತಾ ಮತ್ತು ತ್ರಿಪಾಠಿ ಅವರನ್ನು ಸಂಘಟನೆಗಳಿಂದ ಹೊರಹಾಕಲಾಗಿದೆ. ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ವಿಎಚ್‌ಪಿಯ ಕಾಶಿ (ವಾರಣಾಸಿ) ಪ್ರಾಂತ ಮಂತ್ರಿ ಆನಂದ್ ಸಿಂಗ್ ತಿಳಿಸಿದ್ದಾರೆ.

ಸ್ಥಳೀಯ ಕಾಂಗ್ರೆಸ್ ನಾಯಕ ರಾಘವೇಂದ್ರ ಚೌಬೆ ಅವರು ‘ದಿ ವೈರ್‌’ನೊಂದಿಗೆ ಮಾತನಾಡಿ, “ಕಾಂಗ್ರೆಸ್‌ ಪಕ್ಷವು ಬಲಪಂಥೀಯರ ದುಷ್ಕೃತ್ಯಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಪಟ್ಟಣದಲ್ಲಿ ಕೇಸರಿ ವಸ್ತ್ರಧಾರಿ ಯುವಕರು ಆರಂಭಿಸಿರುವ ದ್ವೇಷ ಅಭಿಯಾನದ ಕುರಿತು ಇಲ್ಲಿನ ಡಿಸಿಪಿ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಹೇಳಿದ್ದಾರೆ.

“ಗಂಗಾ ಮತ್ತು ಅದರ ಘಾಟ್‌ಗಳು ಎಂದಿಗೂ ಒಂದು ಧರ್ಮದ ಅನುಯಾಯಿಗಳಿಗೆ ಸೇರಿಲ್ಲ” ಎಂದು ಹಿರಿಯ ಪತ್ರಕರ್ತ ವಿಜಯ್ ವಿನೀತ್ ದೂರವಾಣಿಯಲ್ಲಿ ದಿ ವೈರ್‌ಗೆ ತಿಳಿಸಿದ್ದಾರೆ.

ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರು ಗಂಗಾ ಸ್ನಾನದ ನಂತರ ಹೇಗೆ ನಮಾಜ್ ಮಾಡುತ್ತಿದ್ದರು ಎಂಬುದರ ಕುರಿತು ಹಿರಿಯ ಪತ್ರರ್ಕರು ವಿವರಿಸಿದ್ದಾರೆ. ರಾಜಕೀಯಕ್ಕಾಗಿ ಜನರನ್ನು ವಿಭಜಿಸಲು ಯತ್ನಿಸುತ್ತಿರುವ ಶಕ್ತಿಗಳ ಕುರಿತು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾಗಿದೆ. ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಮುನ್ನ ಈ ಘಟನೆ ನಡೆದಿದೆ.


ಇದನ್ನೂ ಓದಿರಿ: ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...