Homeಮುಖಪುಟವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

ವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹಿಂದೂಯೇತರರನ್ನು ದೂರವಿಡಿ ಎಂದು ಪೋಸ್ಟರ್‌ ಹಾಕುವ ಮೂಲಕ ಕೋಮುದ್ವೇಷ ಹರಡಲು ಯತ್ನಿಸಿದ ಐವರ ವಿರುದ್ಧ ವಾರಣಾಸಿ ಪೊಲೀಸರು ಜನವರಿ 9ರಂದು ಎಫ್‌ಐಆರ್‌‌ ದಾಖಲಿಸಿದ್ದಾರೆ.

ವಾರಣಾಸಿಯ ವಿವಿಧ ಘಾಟ್‌ಗಳಲ್ಲಿ ಹಿಂದೂಯೇತರರನ್ನು ದೂರವಿಡುವಂತೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳನ್ನು ಹಾಕಲಾಗಿತ್ತು. ಈ ಕುರಿತು ಇಲ್ಲಿನ ಭೇಲುಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಸದಸ್ಯರು ವಾರಣಾಸಿಯ ಘಾಟ್‌ಗಳ ಸುತ್ತಲೂ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಅದರಲ್ಲಿ ಹಿಂದೂಯೇತರರು ವಾರಣಾಸಿಯಲ್ಲಿ ಗಂಗಾನದಿಯ ದಂಡೆಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿತ್ತು. ಈ ಪೋಸ್ಟರ್‌ಗಳನ್ನು ಹಾಕುತ್ತಿರುವ ಫೋಟೋಗಳು, ವೀಡಿಯೊಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಐವರು ಆರೋಪಿಗಳಲ್ಲಿ ಇಬ್ಬರು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸೇರಿದವರು. ಅವರೇ ಈ ಕುರಿತು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬಿಬ್ಬರನ್ನು ರಾಜನ್ ಗುಪ್ತಾ, ನಿಖಿಲ್ ತ್ರಿಪಾಠಿ “ರುದ್ರ” ಎಂದು ಪೊಲೀಸರು ಗುರುತಿಸಿದ್ದಾರೆ.

ವಿಎಚ್‌ಪಿಯ ವಾರಣಾಸಿ ವಿಭಾಗದ ಕಾರ್ಯದರ್ಶಿ ರಾಜನ್ ಗುಪ್ತಾ ಅವರು ವೀಡಿಯೊವೊಂದರಲ್ಲಿ, “ಈ ಪೋಸ್ಟರ್‌ಗಳು ಮನವಿಯಲ್ಲ, ಆದರೆ ಸನಾತನ ಧರ್ಮವನ್ನು ಅನುಸರಿಸದವರಿಗೆ ಎಚ್ಚರಿಕೆ” ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇಲ್ಲಿನ ಘಾಟ್‌ಗಳು, ಕಾಶಿಯ ದೇವಾಲಯಗಳನ್ನು ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಸಂಕೇತಗಳೆಂದು ಕರೆದಿರುವ ಗುಪ್ತಾ, ಇತರರು ಇಲ್ಲಿಂದ ದೂರವಿರಬೇಕು ಎಂದು ಹೇಳುತ್ತಾರೆ. “ಈ ಸ್ಥಳಗಳಿಗೆ ಭೇಟಿ ನೀಡುವವರು ಹಿಂದೂ ಧರ್ಮದಲ್ಲಿ ನಂಬಿಕೆ ಹೊಂದಿದ್ದರೆ, ಅವರಿಗೆ ಸ್ವಾಗತವಿದೆ. ಇಲ್ಲದಿದ್ದರೆ ನಾವು ಅವರನ್ನು ನಮ್ಮ ಪವಿತ್ರ ಸ್ಥಳಗಳಿಂದ ವಾಪಸ್‌ ಕಳುಹಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಬಜರಂಗದಳದ ವಾರಣಾಸಿ ಸಂಯೋಜಕ, ನಿಖಿಲ್ ತ್ರಿಪಾಠಿ ‘ರುದ್ರ’ ಮಾತನಾಡಿ, “ಗಂಗಾ ನದಿ ನಮ್ಮ ತಾಯಿ, ಇದು ಪಿಕ್ನಿಕ್ ಸ್ಪಾಟ್ ಅಲ್ಲ. ಗಂಗೆಯನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸುವವರು ಅದರಿಂದ ದೂರವಿರಬೇಕು. ಅವರಾಗಿಯೇ ಇದನ್ನು ಪಾಲಿಸದಿದ್ದರೆ ಬಜರಂಗದಳ ಈ ಕೆಲಸವನ್ನು ಮಾಡಿಸುತ್ತದೆ” ಎಂದಿದ್ದಾರೆ.

ಇಬ್ಬರನ್ನು ಸಂಘಟನೆಗಳಿಂದ ತೆಗೆದುಹಾಕಲಾಗಿದೆ ಎಂದು ವಿಎಚ್‌ಪಿ ಭಾನುವಾರ ಹೇಳಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌‌ ವರದಿ ಮಾಡಿದೆ.

ಸಹಾಯಕ ಪೊಲೀಸ್ ಕಮಿಷನರ್ (ಭೇಲುಪುರ್) ಪ್ರವೀಣ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ಭಾಗಿಯಾಗಿರುವ ಇತರರ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ತನಿಖಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ.

ಗುಪ್ತಾ ಮತ್ತು ತ್ರಿಪಾಠಿ ಅವರನ್ನು ಸಂಘಟನೆಗಳಿಂದ ಹೊರಹಾಕಲಾಗಿದೆ. ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ವಿಎಚ್‌ಪಿಯ ಕಾಶಿ (ವಾರಣಾಸಿ) ಪ್ರಾಂತ ಮಂತ್ರಿ ಆನಂದ್ ಸಿಂಗ್ ತಿಳಿಸಿದ್ದಾರೆ.

ಸ್ಥಳೀಯ ಕಾಂಗ್ರೆಸ್ ನಾಯಕ ರಾಘವೇಂದ್ರ ಚೌಬೆ ಅವರು ‘ದಿ ವೈರ್‌’ನೊಂದಿಗೆ ಮಾತನಾಡಿ, “ಕಾಂಗ್ರೆಸ್‌ ಪಕ್ಷವು ಬಲಪಂಥೀಯರ ದುಷ್ಕೃತ್ಯಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಪಟ್ಟಣದಲ್ಲಿ ಕೇಸರಿ ವಸ್ತ್ರಧಾರಿ ಯುವಕರು ಆರಂಭಿಸಿರುವ ದ್ವೇಷ ಅಭಿಯಾನದ ಕುರಿತು ಇಲ್ಲಿನ ಡಿಸಿಪಿ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಹೇಳಿದ್ದಾರೆ.

“ಗಂಗಾ ಮತ್ತು ಅದರ ಘಾಟ್‌ಗಳು ಎಂದಿಗೂ ಒಂದು ಧರ್ಮದ ಅನುಯಾಯಿಗಳಿಗೆ ಸೇರಿಲ್ಲ” ಎಂದು ಹಿರಿಯ ಪತ್ರಕರ್ತ ವಿಜಯ್ ವಿನೀತ್ ದೂರವಾಣಿಯಲ್ಲಿ ದಿ ವೈರ್‌ಗೆ ತಿಳಿಸಿದ್ದಾರೆ.

ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರು ಗಂಗಾ ಸ್ನಾನದ ನಂತರ ಹೇಗೆ ನಮಾಜ್ ಮಾಡುತ್ತಿದ್ದರು ಎಂಬುದರ ಕುರಿತು ಹಿರಿಯ ಪತ್ರರ್ಕರು ವಿವರಿಸಿದ್ದಾರೆ. ರಾಜಕೀಯಕ್ಕಾಗಿ ಜನರನ್ನು ವಿಭಜಿಸಲು ಯತ್ನಿಸುತ್ತಿರುವ ಶಕ್ತಿಗಳ ಕುರಿತು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾಗಿದೆ. ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಮುನ್ನ ಈ ಘಟನೆ ನಡೆದಿದೆ.


ಇದನ್ನೂ ಓದಿರಿ: ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...