Homeಅಂತರಾಷ್ಟ್ರೀಯ'Tryst with Destiny' : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

- Advertisement -
- Advertisement -

ಅಮೆರಿಕದ ಅತಿ ದೊಡ್ಡ ನಗರ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ತನ್ನ ವಿಷಯ ಭಾಷಣದಲ್ಲಿ ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರು ಅವರ ಐತಿಹಾಸಿಕ ಭಾಷಣದ ಸಾಲುಗಳನ್ನು ಉಲ್ಲೇಖಿಸಿ ಗಮನ ಸೆಳೆದಿದ್ದಾರೆ.

ಚುನಾವಣಾ ಗೆಲುವಿನ ಬಳಿಕ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ವಿಜಯ ಭಾಷಣ ಮಾಡಿದ ಮಮ್ದಾನಿ, ಆಗಸ್ಟ್ 14, 1947ರ ಮಧ್ಯಾರಾತ್ರಿ 12 ಗಂಟೆಗೆ ಭಾರತ ಬ್ರಿಟಿಷರ ದಾಸ್ಯದಿಂದ ಸ್ವತಂತ್ರಗೊಂಡಾಗ ನೆಹರು ಮಾಡಿದ ‘ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ನ್ಯೂಯಾರ್ಕ್‌ ಚುನಾವಣಾ ಗೆಲುವನ್ನು ಭಾರತದ ಸ್ವಾತಂತ್ರ್ಯಕ್ಕೆ ಹೋಲಿಕೆ ಮಾಡಿದ್ದಾರೆ.

“A moment comes, but rarely in history, when we step out from the old to the new, when an age ends, and when the soul of a nation, long suppressed, finds utterance”

“ಇತಿಹಾಸದಲ್ಲಿ ಅಪರೂಪಕ್ಕೊಮ್ಮೆ ಒಂದು ಕ್ಷಣ ಬರುತ್ತದೆ. ಹಳೆಯದನ್ನು ಬಿಟ್ಟು ಹೊಸದರೆಡೆಗೆ ಹೆಜ್ಜೆ ಇಡುವಾಗ, ಒಂದು ಯುಗ ಮುಗಿಯುವಾಗ, ದೀರ್ಘಕಾಲ ದಬ್ಬಾಲಿಕೆಗೊಳಗಾದ ರಾಷ್ಟ್ರದ ಆತ್ಮ ಧ್ವನಿಯಾಗಿ ಮೂಡುವಾಗ” ಎಂಬ ನೆಹರು ಅವರ ಭಾಷಣದ ಸಾಲುಗಳನ್ನು ಮಮ್ದಾನಿ ಉಲ್ಲೇಖಿಸಿದ್ದಾರೆ.

“ಇಂದು ರಾತ್ರಿ, ನ್ಯೂಯಾರ್ಕ್ ಹಳೆಯದನ್ನು ಬಿಟ್ಟು ಹೊಸದರೆಡೆಗೆ ಹೆಜ್ಜೆ ಇಟ್ಟಿದೆ. ಅಸಮಾನತೆ, ದುಬಾರಿ ಜೀವನ, ರಾಜಕೀಯ ಕುಟುಂಬಗಳ ಯುಗ ಇಲ್ಲಿಗೆ ಕೊನೆಯಾಗಲಿದೆ. ಹೊಸ ಯುಗ ಆರಂಭಗೊಂಡಿದೆ” ಎಂದು ಹೇಳಿದ್ದಾರೆ.

ಈ ಗೆಲುವು ನ್ಯೂಯಾರ್ಕ್‌ಗೆ ಹೊಸ ಯುಗದ ಸಂಕೇತವಾಗಿದೆ. ನಾನು ಧೈರ್ಯದಿಂದ ನಾಯಕತ್ವ ವಹಿಸುವುದಾಗಿ ನಿಮಗೆ ಭರವಸೆ ನೀಡುತ್ತೇನೆ. ನಾವು ಧೈರ್ಯದಿಂದ ಏನು ಸಾಧಿಸುತ್ತೇವೆ ಎಂದು ನ್ಯೂಯಾರ್ಕ್‌ ಜನರು ನಿರೀಕ್ಷೆ ಮಾಡುತ್ತಿದ್ದಾರೆ. ನಮಗೆ ಪ್ರಯತ್ನಿಸಲು ಧೈರ್ಯವಿಲ್ಲದಿದ್ದರೆ ಏನೂ ಮಾಡಲಾಗದು ಎಂದಿದ್ದಾರೆ.

ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಪರಿಹರಿಸುವುದು ತನ್ನ ಮೊದಲ ಮತ್ತು ಪ್ರಮುಖ ಆದ್ಯತೆ. ಆ ನಿಟ್ಟಿನಲ್ಲಿ ನಮ್ಮ ಆಡಳಿತ ಕೆಲಸ ಮಾಡಲಿದೆ ಎಂದು ಮಮ್ದಾನಿ ಜನರಿಗೆ ಭರವಸೆ ನೀಡಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ನ್ಯೂಯಾರ್ಕ್ ಮೇಯರ್ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....