Homeಅಂತರಾಷ್ಟ್ರೀಯ'Tryst with Destiny' : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

- Advertisement -
- Advertisement -

ಅಮೆರಿಕದ ಅತಿ ದೊಡ್ಡ ನಗರ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ತನ್ನ ವಿಷಯ ಭಾಷಣದಲ್ಲಿ ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರು ಅವರ ಐತಿಹಾಸಿಕ ಭಾಷಣದ ಸಾಲುಗಳನ್ನು ಉಲ್ಲೇಖಿಸಿ ಗಮನ ಸೆಳೆದಿದ್ದಾರೆ.

ಚುನಾವಣಾ ಗೆಲುವಿನ ಬಳಿಕ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ವಿಜಯ ಭಾಷಣ ಮಾಡಿದ ಮಮ್ದಾನಿ, ಆಗಸ್ಟ್ 14, 1947ರ ಮಧ್ಯಾರಾತ್ರಿ 12 ಗಂಟೆಗೆ ಭಾರತ ಬ್ರಿಟಿಷರ ದಾಸ್ಯದಿಂದ ಸ್ವತಂತ್ರಗೊಂಡಾಗ ನೆಹರು ಮಾಡಿದ ‘ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ನ್ಯೂಯಾರ್ಕ್‌ ಚುನಾವಣಾ ಗೆಲುವನ್ನು ಭಾರತದ ಸ್ವಾತಂತ್ರ್ಯಕ್ಕೆ ಹೋಲಿಕೆ ಮಾಡಿದ್ದಾರೆ.

“A moment comes, but rarely in history, when we step out from the old to the new, when an age ends, and when the soul of a nation, long suppressed, finds utterance”

“ಇತಿಹಾಸದಲ್ಲಿ ಅಪರೂಪಕ್ಕೊಮ್ಮೆ ಒಂದು ಕ್ಷಣ ಬರುತ್ತದೆ. ಹಳೆಯದನ್ನು ಬಿಟ್ಟು ಹೊಸದರೆಡೆಗೆ ಹೆಜ್ಜೆ ಇಡುವಾಗ, ಒಂದು ಯುಗ ಮುಗಿಯುವಾಗ, ದೀರ್ಘಕಾಲ ದಬ್ಬಾಲಿಕೆಗೊಳಗಾದ ರಾಷ್ಟ್ರದ ಆತ್ಮ ಧ್ವನಿಯಾಗಿ ಮೂಡುವಾಗ” ಎಂಬ ನೆಹರು ಅವರ ಭಾಷಣದ ಸಾಲುಗಳನ್ನು ಮಮ್ದಾನಿ ಉಲ್ಲೇಖಿಸಿದ್ದಾರೆ.

“ಇಂದು ರಾತ್ರಿ, ನ್ಯೂಯಾರ್ಕ್ ಹಳೆಯದನ್ನು ಬಿಟ್ಟು ಹೊಸದರೆಡೆಗೆ ಹೆಜ್ಜೆ ಇಟ್ಟಿದೆ. ಅಸಮಾನತೆ, ದುಬಾರಿ ಜೀವನ, ರಾಜಕೀಯ ಕುಟುಂಬಗಳ ಯುಗ ಇಲ್ಲಿಗೆ ಕೊನೆಯಾಗಲಿದೆ. ಹೊಸ ಯುಗ ಆರಂಭಗೊಂಡಿದೆ” ಎಂದು ಹೇಳಿದ್ದಾರೆ.

ಈ ಗೆಲುವು ನ್ಯೂಯಾರ್ಕ್‌ಗೆ ಹೊಸ ಯುಗದ ಸಂಕೇತವಾಗಿದೆ. ನಾನು ಧೈರ್ಯದಿಂದ ನಾಯಕತ್ವ ವಹಿಸುವುದಾಗಿ ನಿಮಗೆ ಭರವಸೆ ನೀಡುತ್ತೇನೆ. ನಾವು ಧೈರ್ಯದಿಂದ ಏನು ಸಾಧಿಸುತ್ತೇವೆ ಎಂದು ನ್ಯೂಯಾರ್ಕ್‌ ಜನರು ನಿರೀಕ್ಷೆ ಮಾಡುತ್ತಿದ್ದಾರೆ. ನಮಗೆ ಪ್ರಯತ್ನಿಸಲು ಧೈರ್ಯವಿಲ್ಲದಿದ್ದರೆ ಏನೂ ಮಾಡಲಾಗದು ಎಂದಿದ್ದಾರೆ.

ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಪರಿಹರಿಸುವುದು ತನ್ನ ಮೊದಲ ಮತ್ತು ಪ್ರಮುಖ ಆದ್ಯತೆ. ಆ ನಿಟ್ಟಿನಲ್ಲಿ ನಮ್ಮ ಆಡಳಿತ ಕೆಲಸ ಮಾಡಲಿದೆ ಎಂದು ಮಮ್ದಾನಿ ಜನರಿಗೆ ಭರವಸೆ ನೀಡಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ನ್ಯೂಯಾರ್ಕ್ ಮೇಯರ್ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...