Homeಅಂತರಾಷ್ಟ್ರೀಯ'Tryst with Destiny' : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

- Advertisement -
- Advertisement -

ಅಮೆರಿಕದ ಅತಿ ದೊಡ್ಡ ನಗರ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ತನ್ನ ವಿಷಯ ಭಾಷಣದಲ್ಲಿ ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರು ಅವರ ಐತಿಹಾಸಿಕ ಭಾಷಣದ ಸಾಲುಗಳನ್ನು ಉಲ್ಲೇಖಿಸಿ ಗಮನ ಸೆಳೆದಿದ್ದಾರೆ.

ಚುನಾವಣಾ ಗೆಲುವಿನ ಬಳಿಕ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ವಿಜಯ ಭಾಷಣ ಮಾಡಿದ ಮಮ್ದಾನಿ, ಆಗಸ್ಟ್ 14, 1947ರ ಮಧ್ಯಾರಾತ್ರಿ 12 ಗಂಟೆಗೆ ಭಾರತ ಬ್ರಿಟಿಷರ ದಾಸ್ಯದಿಂದ ಸ್ವತಂತ್ರಗೊಂಡಾಗ ನೆಹರು ಮಾಡಿದ ‘ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ನ್ಯೂಯಾರ್ಕ್‌ ಚುನಾವಣಾ ಗೆಲುವನ್ನು ಭಾರತದ ಸ್ವಾತಂತ್ರ್ಯಕ್ಕೆ ಹೋಲಿಕೆ ಮಾಡಿದ್ದಾರೆ.

“A moment comes, but rarely in history, when we step out from the old to the new, when an age ends, and when the soul of a nation, long suppressed, finds utterance”

“ಇತಿಹಾಸದಲ್ಲಿ ಅಪರೂಪಕ್ಕೊಮ್ಮೆ ಒಂದು ಕ್ಷಣ ಬರುತ್ತದೆ. ಹಳೆಯದನ್ನು ಬಿಟ್ಟು ಹೊಸದರೆಡೆಗೆ ಹೆಜ್ಜೆ ಇಡುವಾಗ, ಒಂದು ಯುಗ ಮುಗಿಯುವಾಗ, ದೀರ್ಘಕಾಲ ದಬ್ಬಾಲಿಕೆಗೊಳಗಾದ ರಾಷ್ಟ್ರದ ಆತ್ಮ ಧ್ವನಿಯಾಗಿ ಮೂಡುವಾಗ” ಎಂಬ ನೆಹರು ಅವರ ಭಾಷಣದ ಸಾಲುಗಳನ್ನು ಮಮ್ದಾನಿ ಉಲ್ಲೇಖಿಸಿದ್ದಾರೆ.

“ಇಂದು ರಾತ್ರಿ, ನ್ಯೂಯಾರ್ಕ್ ಹಳೆಯದನ್ನು ಬಿಟ್ಟು ಹೊಸದರೆಡೆಗೆ ಹೆಜ್ಜೆ ಇಟ್ಟಿದೆ. ಅಸಮಾನತೆ, ದುಬಾರಿ ಜೀವನ, ರಾಜಕೀಯ ಕುಟುಂಬಗಳ ಯುಗ ಇಲ್ಲಿಗೆ ಕೊನೆಯಾಗಲಿದೆ. ಹೊಸ ಯುಗ ಆರಂಭಗೊಂಡಿದೆ” ಎಂದು ಹೇಳಿದ್ದಾರೆ.

ಈ ಗೆಲುವು ನ್ಯೂಯಾರ್ಕ್‌ಗೆ ಹೊಸ ಯುಗದ ಸಂಕೇತವಾಗಿದೆ. ನಾನು ಧೈರ್ಯದಿಂದ ನಾಯಕತ್ವ ವಹಿಸುವುದಾಗಿ ನಿಮಗೆ ಭರವಸೆ ನೀಡುತ್ತೇನೆ. ನಾವು ಧೈರ್ಯದಿಂದ ಏನು ಸಾಧಿಸುತ್ತೇವೆ ಎಂದು ನ್ಯೂಯಾರ್ಕ್‌ ಜನರು ನಿರೀಕ್ಷೆ ಮಾಡುತ್ತಿದ್ದಾರೆ. ನಮಗೆ ಪ್ರಯತ್ನಿಸಲು ಧೈರ್ಯವಿಲ್ಲದಿದ್ದರೆ ಏನೂ ಮಾಡಲಾಗದು ಎಂದಿದ್ದಾರೆ.

ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಪರಿಹರಿಸುವುದು ತನ್ನ ಮೊದಲ ಮತ್ತು ಪ್ರಮುಖ ಆದ್ಯತೆ. ಆ ನಿಟ್ಟಿನಲ್ಲಿ ನಮ್ಮ ಆಡಳಿತ ಕೆಲಸ ಮಾಡಲಿದೆ ಎಂದು ಮಮ್ದಾನಿ ಜನರಿಗೆ ಭರವಸೆ ನೀಡಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ನ್ಯೂಯಾರ್ಕ್ ಮೇಯರ್ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...