Homeಅಂತರಾಷ್ಟ್ರೀಯ'Tryst with Destiny' : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

- Advertisement -
- Advertisement -

ಅಮೆರಿಕದ ಅತಿ ದೊಡ್ಡ ನಗರ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ತನ್ನ ವಿಷಯ ಭಾಷಣದಲ್ಲಿ ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರು ಅವರ ಐತಿಹಾಸಿಕ ಭಾಷಣದ ಸಾಲುಗಳನ್ನು ಉಲ್ಲೇಖಿಸಿ ಗಮನ ಸೆಳೆದಿದ್ದಾರೆ.

ಚುನಾವಣಾ ಗೆಲುವಿನ ಬಳಿಕ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ವಿಜಯ ಭಾಷಣ ಮಾಡಿದ ಮಮ್ದಾನಿ, ಆಗಸ್ಟ್ 14, 1947ರ ಮಧ್ಯಾರಾತ್ರಿ 12 ಗಂಟೆಗೆ ಭಾರತ ಬ್ರಿಟಿಷರ ದಾಸ್ಯದಿಂದ ಸ್ವತಂತ್ರಗೊಂಡಾಗ ನೆಹರು ಮಾಡಿದ ‘ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ನ್ಯೂಯಾರ್ಕ್‌ ಚುನಾವಣಾ ಗೆಲುವನ್ನು ಭಾರತದ ಸ್ವಾತಂತ್ರ್ಯಕ್ಕೆ ಹೋಲಿಕೆ ಮಾಡಿದ್ದಾರೆ.

“A moment comes, but rarely in history, when we step out from the old to the new, when an age ends, and when the soul of a nation, long suppressed, finds utterance”

“ಇತಿಹಾಸದಲ್ಲಿ ಅಪರೂಪಕ್ಕೊಮ್ಮೆ ಒಂದು ಕ್ಷಣ ಬರುತ್ತದೆ. ಹಳೆಯದನ್ನು ಬಿಟ್ಟು ಹೊಸದರೆಡೆಗೆ ಹೆಜ್ಜೆ ಇಡುವಾಗ, ಒಂದು ಯುಗ ಮುಗಿಯುವಾಗ, ದೀರ್ಘಕಾಲ ದಬ್ಬಾಲಿಕೆಗೊಳಗಾದ ರಾಷ್ಟ್ರದ ಆತ್ಮ ಧ್ವನಿಯಾಗಿ ಮೂಡುವಾಗ” ಎಂಬ ನೆಹರು ಅವರ ಭಾಷಣದ ಸಾಲುಗಳನ್ನು ಮಮ್ದಾನಿ ಉಲ್ಲೇಖಿಸಿದ್ದಾರೆ.

“ಇಂದು ರಾತ್ರಿ, ನ್ಯೂಯಾರ್ಕ್ ಹಳೆಯದನ್ನು ಬಿಟ್ಟು ಹೊಸದರೆಡೆಗೆ ಹೆಜ್ಜೆ ಇಟ್ಟಿದೆ. ಅಸಮಾನತೆ, ದುಬಾರಿ ಜೀವನ, ರಾಜಕೀಯ ಕುಟುಂಬಗಳ ಯುಗ ಇಲ್ಲಿಗೆ ಕೊನೆಯಾಗಲಿದೆ. ಹೊಸ ಯುಗ ಆರಂಭಗೊಂಡಿದೆ” ಎಂದು ಹೇಳಿದ್ದಾರೆ.

ಈ ಗೆಲುವು ನ್ಯೂಯಾರ್ಕ್‌ಗೆ ಹೊಸ ಯುಗದ ಸಂಕೇತವಾಗಿದೆ. ನಾನು ಧೈರ್ಯದಿಂದ ನಾಯಕತ್ವ ವಹಿಸುವುದಾಗಿ ನಿಮಗೆ ಭರವಸೆ ನೀಡುತ್ತೇನೆ. ನಾವು ಧೈರ್ಯದಿಂದ ಏನು ಸಾಧಿಸುತ್ತೇವೆ ಎಂದು ನ್ಯೂಯಾರ್ಕ್‌ ಜನರು ನಿರೀಕ್ಷೆ ಮಾಡುತ್ತಿದ್ದಾರೆ. ನಮಗೆ ಪ್ರಯತ್ನಿಸಲು ಧೈರ್ಯವಿಲ್ಲದಿದ್ದರೆ ಏನೂ ಮಾಡಲಾಗದು ಎಂದಿದ್ದಾರೆ.

ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಪರಿಹರಿಸುವುದು ತನ್ನ ಮೊದಲ ಮತ್ತು ಪ್ರಮುಖ ಆದ್ಯತೆ. ಆ ನಿಟ್ಟಿನಲ್ಲಿ ನಮ್ಮ ಆಡಳಿತ ಕೆಲಸ ಮಾಡಲಿದೆ ಎಂದು ಮಮ್ದಾನಿ ಜನರಿಗೆ ಭರವಸೆ ನೀಡಿದ್ದಾರೆ.

ಮಂಗಳವಾರ (ನವೆಂಬರ್ 4, 2025) ನಡೆದ ನ್ಯೂಯಾರ್ಕ್ ಮೇಯರ್ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....