Homeಅಂತರಾಷ್ಟ್ರೀಯಪ್ರಬಲ ಭೂಕಂಪ: ರಷ್ಯಾ, ಜಪಾನ್‌ ಕರಾವಳಿಗೆ ಅಪ್ಪಳಿಸಿದ ಸುನಾಮಿ

ಪ್ರಬಲ ಭೂಕಂಪ: ರಷ್ಯಾ, ಜಪಾನ್‌ ಕರಾವಳಿಗೆ ಅಪ್ಪಳಿಸಿದ ಸುನಾಮಿ

- Advertisement -
- Advertisement -

ಬುಧವಾರ (ಜು.30) ಮುಂಜಾನೆ ರಷ್ಯಾದ ಕರಾವಳಿಯಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ನಂತರ, ರಷ್ಯಾದ ಕುರಿಲ್ ದ್ವೀಪಗಳು ಮತ್ತು ಜಪಾನ್‌ನ ಉತ್ತರ ದ್ವೀಪ ಹೊಕ್ಕೈಡೊದ ಕರಾವಳಿ ಪ್ರದೇಶಗಳಿಗೆ ಸುನಾಮಿ ಅಪ್ಪಳಿಸಿದೆ. ರಷ್ಯಾದ ಅಲಾಸ್ಕಾ, ಹವಾಯಿ ಮತ್ತು ನ್ಯೂಜಿಲೆಂಡ್ ಕಡೆಗೆ ಇರುವ ಇತರ ಕರಾವಳಿಗಳಿಗೂ ಎಚ್ಚರಿಕೆ ನೀಡಲಾಗಿದೆ.

ಹೊಕ್ಕೈಡೊದಿಂದ ಟೋಕಿಯೊದ ಈಶಾನ್ಯಕ್ಕೆ ಪೆಸಿಫಿಕ್ ಕರಾವಳಿಯಲ್ಲಿ 16 ಸ್ಥಳಗಳಲ್ಲಿ 40 ಸೆಂಟಿ ಮೀಟರ್ (1.3 ಅಡಿ) ಎತ್ತರದ ಸುನಾಮಿ ಅಲೆಗಳು ಕಂಡು ಬಂದಿವೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಇನ್ನು ದೊಡ್ಡ ಅಲೆಗಳು ಅಪ್ಪಳಿಸುವ ಸಾಧ್ಯತೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕಮ್ಚಟ್ಕಾ ಪರ್ಯಾಯ ದ್ವೀಪದ ಭೂಕಂಪದ ಕೇಂದ್ರಬಿಂದುವಿನ ಬಳಿಯ ರಷ್ಯಾದ ಪ್ರದೇಶದಲ್ಲಿ ಹಾನಿ ಮತ್ತು ಜನರನ್ನು ಸ್ಥಳಾಂತರಿಸಿದ ಬಗ್ಗೆ ವರದಿಯಾಗಿದೆ.

ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಅಥವಾ ಹಾನಿಗಳು ವರದಿಯಾಗಿಲ್ಲ ಎಂದು ಜಪಾನ್‌ನ ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಸುನಾಮಿ ಮುನ್ನೆಚ್ಚರಿಕೆಯಾಗಿ ಜಪಾನ್‌ನ ಪೆಸಿಫಿಕ್ ಕರಾವಳಿಯ ಹೊಕ್ಕೈಡೊದಿಂದ ಓಕಿನಾವಾವರೆಗಿನ 133 ಪುರಸಭೆಗಳ ವ್ಯಾಪ್ತಿಯ 900,000ಕ್ಕೂ ಹೆಚ್ಚು ನಿವಾಸಿಗಳಿಗೆ ಸ್ಥಳಾಂತರಕ್ಕೆ ಸಲಹೆ ನೀಡಲಾಗಿದೆ.

ಜಪಾನ್ ಹವಾಮಾನ ಸಂಸ್ಥೆಯ ಪ್ರಕಾರ, ಬುಧವಾರದ ಭೂಕಂಪದ ನಂತರ ಇಶಿನೊಮಕಿಯಲ್ಲಿ 50 ಸೆಂಟಿಮೀಟರ್ (1.6 ಅಡಿ) ಅತಿ ಎತ್ತರದ ಸುನಾಮಿ ಅಲೆಗಳು ಕಂಡು ಬಂದಿವೆ.

ಜಪಾನ್ ಸ್ಥಳೀಯ ಸಮಯ ಬೆಳಿಗ್ಗೆ 8:25ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆಯು ಪ್ರಾಥಮಿಕವಾಗಿ 8.0 ರಷ್ಟಿತ್ತು ಎಂದು ಜಪಾನ್ ಮತ್ತು ಯುಎಸ್ ಭೂಕಂಪಶಾಸ್ತ್ರಜ್ಞರು ತಿಳಿಸಿದ್ದರು. ನಂತರ, ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯು ಭೂಕಂಪದ ತೀವ್ರತೆ 8.8ರಷ್ಟಿತ್ತು ಎಂದು ಖಚಿತಪಡಿಸಿದೆ.

ಮಾರ್ಚ್ 2011ರಲ್ಲಿ ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 9.0 ತೀವ್ರತೆಯ ಭೂಕಂಪದ ನಂತರ, ಇದು ವಿಶ್ವದಲ್ಲಿ ಎಲ್ಲಿಯೂ ಸಂಭವಿಸದ ಅತ್ಯಂತ ಪ್ರಬಲವಾದ ಭೂಕಂಪವಾಗಿದೆ ಎಂದು ವರದಿಗಳು ಹೇಳಿವೆ.

‘ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..’; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...