Homeಮುಖಪುಟಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ನಿರ್ಧಾರದ ನಂತರ  ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನದ ಲೆಕ್ಕಪರಿಶೋಧನೆಯನ್ನು ಇನ್ನು ಮುಂದೆ ಸಿಎಜಿ ಮಾಡಲಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತಿಳಿಸಿದೆ. ಇಷ್ಟು ದಿನ ಆಂಧ್ರಪ್ರದೇಶ ರಾಜ್ಯ ಲೆಕ್ಕಪರಿಶೋಧನಾ ವಿಭಾಗವು ಲೆಕ್ಕಪರಿಶೋಧನಾ ವರದಿಗಳನ್ನು ನೋಡಿಕೊಳ್ಳುತ್ತಿತ್ತು.

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಮಲ ದೇವಸ್ಥಾನದ ಲೆಕ್ಕಪರಿಶೋಧನಾ ವರದಿಗಳನ್ನು ಈಗ ಭಾರತದ ಕಂಟ್ರೋಲರ್ ಮತ್ತು ಲೆಕ್ಕಪರಿಶೋಧಕ ಜನರಲ್ (ಸಿಎಜಿ) ಮಾಡಲಿದ್ದಾರೆ ಎಂದು ಟಿಟಿಡಿ ಮಂಡಳಿ ಬುಧವಾರ ತಿಳಿಸಿದೆ.

ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಮತ್ತು ಕಳೆದ ಐದು ವರ್ಷಗಳಿಂದ ಟಿಟಿಡಿ ಖಾತೆಗಳ ಲೆಕ್ಕಪರಿಶೋಧನಾ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಆಂಧ್ರಪ್ರದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯು ಇನ್ನು ಬಾಕಿ ಇರುವ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ.

ಟಿಟಿಡಿ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ನಾನು ಮತ್ತು ನನ್ನ ಸಹವರ್ತಿ ಸತ್ಯಪಾಲ್ ಸಭರ್ವಾಲ್ ಕಳೆದ 5 ವರ್ಷಗಳಿಂದ ತಿರುಪತಿ ದೇವಾಲಯದ ನಿಧಿಯ ಸಿಎಜಿ ಲೆಕ್ಕಪರಿಶೋಧನೆಗೆ ಕೋರಿ ಆಂಧ್ರ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದೆವು. ಆಂಧ್ರ ಪ್ರದೇಶ ಸಿಎಂ ಜಗನ್ ಇದಕ್ಕೆ ಒಪ್ಪಿಗೆ ಸೂಚಿಸಿದ್ದರು. ಟಿಟಿಡಿ ಅಧ್ಯಕ್ಷರಾದ ಸುಬ್ಬಾ ರೆಡ್ಡಿ ಮತ್ತು ಸದಸ್ಯ ಮತ್ತು ವಿಎಚ್‌ಎಸ್‌ ಎಪಿ ನಾಯಕ ಗೋವಿಂದ್ ಹರಿ ಇದನ್ನು ಟಿಟಿಡಿ ಮಂಡಳಿಯ ಮೂಲಕ ಪ್ರಾಯೋಗಿಕವಾಗಿ ನಡೆಸಿದರು. ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

ಈ ಕುರಿತು ವಕೀಲ ಸತ್ಯಪಾಲ್ ಸಭರ್ವಾಲ್ ಕೂಡ ಟ್ವೀಟ್ ಮಾಡಿದ್ದು, 5 ವರ್ಷಗಳಿಂದ ಸಿಎಜಿಯಿಂದ ಬಾಹ್ಯ ಲೆಕ್ಕಪರಿಶೋಧನೆಗೆ ನಾನು ಪ್ರಾರ್ಥಿಸುತ್ತಿದ್ದೇನೆ. ಇದೊಂದು ಬೃಹತ್ ಗೆಲುವು ಎಂದಿದ್ದಾರೆ.

ಟಿಟಿಡಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅಂಗೀಕರಿಸಿದ 202 ಪುಟಗಳ ನಿರ್ಣಯದಲ್ಲಿ 2020-2021 ರಿಂದ ಟಿಟಿಡಿಯ ಲೆಕ್ಕಪರಿಶೋಧನೆಯನ್ನು ಸಿಎಜಿಗೆ ವಹಿಸಲು ಮಂಡಳಿ ನಿರ್ಧರಿಸಿದೆ.

ಜೊತೆಗೆ 2014-2015 ರಿಂದ 2019-2020 ರವರೆಗಿನ ಲೆಕ್ಕಪರಿಶೋಧನಾ ವರದಿಯನ್ನು ಈಗಾಗಲೇ ರಾಜ್ಯ ಲೆಕ್ಕಪರಿಶೋಧನಾ ಇಲಾಖೆ ಪೂರ್ಣಗೊಳಿಸಿರುವುದರಿಂದ, ಅದೇ ಅವಧಿಯ ವಿಶೇಷ ಲೆಕ್ಕಪರಿಶೋಧನೆಯನ್ನು ಕೈಗೆತ್ತಿಕೊಳ್ಳಲು ಮತ್ತು ಆರು ತಿಂಗಳೊಳಗೆ ತನ್ನ ವರದಿಯನ್ನು ನೀಡುವಂತೆ ಸಿಎಜಿಗೆ ಮನವಿ ಮಾಡಲು ಮಂಡಳಿ ರಾಜ್ಯ ಸರ್ಕಾರವನ್ನು ಕೋರಿದೆ.

ಟಿಟಿಡಿ ದೇವಸ್ಥಾನದಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ವಿಷಯದಲ್ಲಿ ಏನೂ ಮಾಡಿಲ್ಲ. ಈಗ ನಮಗೆ ಹೊಸ ಮುಖ್ಯಮಂತ್ರಿ ಇದ್ದಾರೆ. ಕಳೆದ ಐದು ವರ್ಷಗಳಿಂದ ತಿರುಮಲ ದೇವಸ್ಥಾನದ ಖಾತೆಗಳನ್ನು ಲೆಕ್ಕಪರಿಶೋಧಿಸಲು ಸಿಎಜಿ ಅಥವಾ ಇನ್ನಿತರ ಸ್ವತಂತ್ರ ಸಂಸ್ಥೆಗೆ ಅವಕಾಶ ನೀಡುವಂತೆ ನಾನು ಕೇಳುತ್ತಿದ್ದೇನೆ ಮತ್ತು ಭಕ್ತರು ಠೇವಣಿ ಇಟ್ಟ ಹಣಕ್ಕೆ ಏನಾಯಿತು ಎಂದು ನಮಗೆ ತಿಳಿಯಬೇಕಿದೆ ಎಂದಿದ್ದಾರೆ ಸುಬ್ಬಾ ರೆಡ್ಡಿ.

ಸದ್ಯ ಟಿಟಿಡಿ ಮಂಡಳಿಯು ತನ್ನ ನಿರ್ಧಾರವನ್ನು ತಿಳಿಸಿ ಹೈಕೋರ್ಟ್‌ಗೆ ಅಫಿಡವಿಟ್ ಕಳುಹಿಸುತ್ತದೆ. ಲೆಕ್ಕಪರಿಶೋಧನಾ ವರದಿಯಲ್ಲಿ ಸಾಮಾನ್ಯವಾಗಿ ದೇವಾಲಯದ ಎಲ್ಲಾ ಖಾತೆಗಳು, ಹಣದ ಬಳಕೆ ಮತ್ತು ಆಭರಣಗಳು ಸೇರಿದಂತೆ ಸಮಗ್ರ ವಿವರಗಳಿರುತ್ತವೆ.


ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...