Homeಮುಖಪುಟಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ನಿರ್ಧಾರದ ನಂತರ  ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನದ ಲೆಕ್ಕಪರಿಶೋಧನೆಯನ್ನು ಇನ್ನು ಮುಂದೆ ಸಿಎಜಿ ಮಾಡಲಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತಿಳಿಸಿದೆ. ಇಷ್ಟು ದಿನ ಆಂಧ್ರಪ್ರದೇಶ ರಾಜ್ಯ ಲೆಕ್ಕಪರಿಶೋಧನಾ ವಿಭಾಗವು ಲೆಕ್ಕಪರಿಶೋಧನಾ ವರದಿಗಳನ್ನು ನೋಡಿಕೊಳ್ಳುತ್ತಿತ್ತು.

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಮಲ ದೇವಸ್ಥಾನದ ಲೆಕ್ಕಪರಿಶೋಧನಾ ವರದಿಗಳನ್ನು ಈಗ ಭಾರತದ ಕಂಟ್ರೋಲರ್ ಮತ್ತು ಲೆಕ್ಕಪರಿಶೋಧಕ ಜನರಲ್ (ಸಿಎಜಿ) ಮಾಡಲಿದ್ದಾರೆ ಎಂದು ಟಿಟಿಡಿ ಮಂಡಳಿ ಬುಧವಾರ ತಿಳಿಸಿದೆ.

ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಮತ್ತು ಕಳೆದ ಐದು ವರ್ಷಗಳಿಂದ ಟಿಟಿಡಿ ಖಾತೆಗಳ ಲೆಕ್ಕಪರಿಶೋಧನಾ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಆಂಧ್ರಪ್ರದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯು ಇನ್ನು ಬಾಕಿ ಇರುವ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ.

ಟಿಟಿಡಿ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ನಾನು ಮತ್ತು ನನ್ನ ಸಹವರ್ತಿ ಸತ್ಯಪಾಲ್ ಸಭರ್ವಾಲ್ ಕಳೆದ 5 ವರ್ಷಗಳಿಂದ ತಿರುಪತಿ ದೇವಾಲಯದ ನಿಧಿಯ ಸಿಎಜಿ ಲೆಕ್ಕಪರಿಶೋಧನೆಗೆ ಕೋರಿ ಆಂಧ್ರ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದೆವು. ಆಂಧ್ರ ಪ್ರದೇಶ ಸಿಎಂ ಜಗನ್ ಇದಕ್ಕೆ ಒಪ್ಪಿಗೆ ಸೂಚಿಸಿದ್ದರು. ಟಿಟಿಡಿ ಅಧ್ಯಕ್ಷರಾದ ಸುಬ್ಬಾ ರೆಡ್ಡಿ ಮತ್ತು ಸದಸ್ಯ ಮತ್ತು ವಿಎಚ್‌ಎಸ್‌ ಎಪಿ ನಾಯಕ ಗೋವಿಂದ್ ಹರಿ ಇದನ್ನು ಟಿಟಿಡಿ ಮಂಡಳಿಯ ಮೂಲಕ ಪ್ರಾಯೋಗಿಕವಾಗಿ ನಡೆಸಿದರು. ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

ಈ ಕುರಿತು ವಕೀಲ ಸತ್ಯಪಾಲ್ ಸಭರ್ವಾಲ್ ಕೂಡ ಟ್ವೀಟ್ ಮಾಡಿದ್ದು, 5 ವರ್ಷಗಳಿಂದ ಸಿಎಜಿಯಿಂದ ಬಾಹ್ಯ ಲೆಕ್ಕಪರಿಶೋಧನೆಗೆ ನಾನು ಪ್ರಾರ್ಥಿಸುತ್ತಿದ್ದೇನೆ. ಇದೊಂದು ಬೃಹತ್ ಗೆಲುವು ಎಂದಿದ್ದಾರೆ.

ಟಿಟಿಡಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅಂಗೀಕರಿಸಿದ 202 ಪುಟಗಳ ನಿರ್ಣಯದಲ್ಲಿ 2020-2021 ರಿಂದ ಟಿಟಿಡಿಯ ಲೆಕ್ಕಪರಿಶೋಧನೆಯನ್ನು ಸಿಎಜಿಗೆ ವಹಿಸಲು ಮಂಡಳಿ ನಿರ್ಧರಿಸಿದೆ.

ಜೊತೆಗೆ 2014-2015 ರಿಂದ 2019-2020 ರವರೆಗಿನ ಲೆಕ್ಕಪರಿಶೋಧನಾ ವರದಿಯನ್ನು ಈಗಾಗಲೇ ರಾಜ್ಯ ಲೆಕ್ಕಪರಿಶೋಧನಾ ಇಲಾಖೆ ಪೂರ್ಣಗೊಳಿಸಿರುವುದರಿಂದ, ಅದೇ ಅವಧಿಯ ವಿಶೇಷ ಲೆಕ್ಕಪರಿಶೋಧನೆಯನ್ನು ಕೈಗೆತ್ತಿಕೊಳ್ಳಲು ಮತ್ತು ಆರು ತಿಂಗಳೊಳಗೆ ತನ್ನ ವರದಿಯನ್ನು ನೀಡುವಂತೆ ಸಿಎಜಿಗೆ ಮನವಿ ಮಾಡಲು ಮಂಡಳಿ ರಾಜ್ಯ ಸರ್ಕಾರವನ್ನು ಕೋರಿದೆ.

ಟಿಟಿಡಿ ದೇವಸ್ಥಾನದಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ವಿಷಯದಲ್ಲಿ ಏನೂ ಮಾಡಿಲ್ಲ. ಈಗ ನಮಗೆ ಹೊಸ ಮುಖ್ಯಮಂತ್ರಿ ಇದ್ದಾರೆ. ಕಳೆದ ಐದು ವರ್ಷಗಳಿಂದ ತಿರುಮಲ ದೇವಸ್ಥಾನದ ಖಾತೆಗಳನ್ನು ಲೆಕ್ಕಪರಿಶೋಧಿಸಲು ಸಿಎಜಿ ಅಥವಾ ಇನ್ನಿತರ ಸ್ವತಂತ್ರ ಸಂಸ್ಥೆಗೆ ಅವಕಾಶ ನೀಡುವಂತೆ ನಾನು ಕೇಳುತ್ತಿದ್ದೇನೆ ಮತ್ತು ಭಕ್ತರು ಠೇವಣಿ ಇಟ್ಟ ಹಣಕ್ಕೆ ಏನಾಯಿತು ಎಂದು ನಮಗೆ ತಿಳಿಯಬೇಕಿದೆ ಎಂದಿದ್ದಾರೆ ಸುಬ್ಬಾ ರೆಡ್ಡಿ.

ಸದ್ಯ ಟಿಟಿಡಿ ಮಂಡಳಿಯು ತನ್ನ ನಿರ್ಧಾರವನ್ನು ತಿಳಿಸಿ ಹೈಕೋರ್ಟ್‌ಗೆ ಅಫಿಡವಿಟ್ ಕಳುಹಿಸುತ್ತದೆ. ಲೆಕ್ಕಪರಿಶೋಧನಾ ವರದಿಯಲ್ಲಿ ಸಾಮಾನ್ಯವಾಗಿ ದೇವಾಲಯದ ಎಲ್ಲಾ ಖಾತೆಗಳು, ಹಣದ ಬಳಕೆ ಮತ್ತು ಆಭರಣಗಳು ಸೇರಿದಂತೆ ಸಮಗ್ರ ವಿವರಗಳಿರುತ್ತವೆ.


ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...