Homeಮುಖಪುಟಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ನಿರ್ಧಾರದ ನಂತರ  ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನದ ಲೆಕ್ಕಪರಿಶೋಧನೆಯನ್ನು ಇನ್ನು ಮುಂದೆ ಸಿಎಜಿ ಮಾಡಲಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತಿಳಿಸಿದೆ. ಇಷ್ಟು ದಿನ ಆಂಧ್ರಪ್ರದೇಶ ರಾಜ್ಯ ಲೆಕ್ಕಪರಿಶೋಧನಾ ವಿಭಾಗವು ಲೆಕ್ಕಪರಿಶೋಧನಾ ವರದಿಗಳನ್ನು ನೋಡಿಕೊಳ್ಳುತ್ತಿತ್ತು.

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಮಲ ದೇವಸ್ಥಾನದ ಲೆಕ್ಕಪರಿಶೋಧನಾ ವರದಿಗಳನ್ನು ಈಗ ಭಾರತದ ಕಂಟ್ರೋಲರ್ ಮತ್ತು ಲೆಕ್ಕಪರಿಶೋಧಕ ಜನರಲ್ (ಸಿಎಜಿ) ಮಾಡಲಿದ್ದಾರೆ ಎಂದು ಟಿಟಿಡಿ ಮಂಡಳಿ ಬುಧವಾರ ತಿಳಿಸಿದೆ.

ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಮತ್ತು ಕಳೆದ ಐದು ವರ್ಷಗಳಿಂದ ಟಿಟಿಡಿ ಖಾತೆಗಳ ಲೆಕ್ಕಪರಿಶೋಧನಾ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಆಂಧ್ರಪ್ರದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯು ಇನ್ನು ಬಾಕಿ ಇರುವ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ.

ಟಿಟಿಡಿ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ನಾನು ಮತ್ತು ನನ್ನ ಸಹವರ್ತಿ ಸತ್ಯಪಾಲ್ ಸಭರ್ವಾಲ್ ಕಳೆದ 5 ವರ್ಷಗಳಿಂದ ತಿರುಪತಿ ದೇವಾಲಯದ ನಿಧಿಯ ಸಿಎಜಿ ಲೆಕ್ಕಪರಿಶೋಧನೆಗೆ ಕೋರಿ ಆಂಧ್ರ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದೆವು. ಆಂಧ್ರ ಪ್ರದೇಶ ಸಿಎಂ ಜಗನ್ ಇದಕ್ಕೆ ಒಪ್ಪಿಗೆ ಸೂಚಿಸಿದ್ದರು. ಟಿಟಿಡಿ ಅಧ್ಯಕ್ಷರಾದ ಸುಬ್ಬಾ ರೆಡ್ಡಿ ಮತ್ತು ಸದಸ್ಯ ಮತ್ತು ವಿಎಚ್‌ಎಸ್‌ ಎಪಿ ನಾಯಕ ಗೋವಿಂದ್ ಹರಿ ಇದನ್ನು ಟಿಟಿಡಿ ಮಂಡಳಿಯ ಮೂಲಕ ಪ್ರಾಯೋಗಿಕವಾಗಿ ನಡೆಸಿದರು. ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

ಈ ಕುರಿತು ವಕೀಲ ಸತ್ಯಪಾಲ್ ಸಭರ್ವಾಲ್ ಕೂಡ ಟ್ವೀಟ್ ಮಾಡಿದ್ದು, 5 ವರ್ಷಗಳಿಂದ ಸಿಎಜಿಯಿಂದ ಬಾಹ್ಯ ಲೆಕ್ಕಪರಿಶೋಧನೆಗೆ ನಾನು ಪ್ರಾರ್ಥಿಸುತ್ತಿದ್ದೇನೆ. ಇದೊಂದು ಬೃಹತ್ ಗೆಲುವು ಎಂದಿದ್ದಾರೆ.

ಟಿಟಿಡಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅಂಗೀಕರಿಸಿದ 202 ಪುಟಗಳ ನಿರ್ಣಯದಲ್ಲಿ 2020-2021 ರಿಂದ ಟಿಟಿಡಿಯ ಲೆಕ್ಕಪರಿಶೋಧನೆಯನ್ನು ಸಿಎಜಿಗೆ ವಹಿಸಲು ಮಂಡಳಿ ನಿರ್ಧರಿಸಿದೆ.

ಜೊತೆಗೆ 2014-2015 ರಿಂದ 2019-2020 ರವರೆಗಿನ ಲೆಕ್ಕಪರಿಶೋಧನಾ ವರದಿಯನ್ನು ಈಗಾಗಲೇ ರಾಜ್ಯ ಲೆಕ್ಕಪರಿಶೋಧನಾ ಇಲಾಖೆ ಪೂರ್ಣಗೊಳಿಸಿರುವುದರಿಂದ, ಅದೇ ಅವಧಿಯ ವಿಶೇಷ ಲೆಕ್ಕಪರಿಶೋಧನೆಯನ್ನು ಕೈಗೆತ್ತಿಕೊಳ್ಳಲು ಮತ್ತು ಆರು ತಿಂಗಳೊಳಗೆ ತನ್ನ ವರದಿಯನ್ನು ನೀಡುವಂತೆ ಸಿಎಜಿಗೆ ಮನವಿ ಮಾಡಲು ಮಂಡಳಿ ರಾಜ್ಯ ಸರ್ಕಾರವನ್ನು ಕೋರಿದೆ.

ಟಿಟಿಡಿ ದೇವಸ್ಥಾನದಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ವಿಷಯದಲ್ಲಿ ಏನೂ ಮಾಡಿಲ್ಲ. ಈಗ ನಮಗೆ ಹೊಸ ಮುಖ್ಯಮಂತ್ರಿ ಇದ್ದಾರೆ. ಕಳೆದ ಐದು ವರ್ಷಗಳಿಂದ ತಿರುಮಲ ದೇವಸ್ಥಾನದ ಖಾತೆಗಳನ್ನು ಲೆಕ್ಕಪರಿಶೋಧಿಸಲು ಸಿಎಜಿ ಅಥವಾ ಇನ್ನಿತರ ಸ್ವತಂತ್ರ ಸಂಸ್ಥೆಗೆ ಅವಕಾಶ ನೀಡುವಂತೆ ನಾನು ಕೇಳುತ್ತಿದ್ದೇನೆ ಮತ್ತು ಭಕ್ತರು ಠೇವಣಿ ಇಟ್ಟ ಹಣಕ್ಕೆ ಏನಾಯಿತು ಎಂದು ನಮಗೆ ತಿಳಿಯಬೇಕಿದೆ ಎಂದಿದ್ದಾರೆ ಸುಬ್ಬಾ ರೆಡ್ಡಿ.

ಸದ್ಯ ಟಿಟಿಡಿ ಮಂಡಳಿಯು ತನ್ನ ನಿರ್ಧಾರವನ್ನು ತಿಳಿಸಿ ಹೈಕೋರ್ಟ್‌ಗೆ ಅಫಿಡವಿಟ್ ಕಳುಹಿಸುತ್ತದೆ. ಲೆಕ್ಕಪರಿಶೋಧನಾ ವರದಿಯಲ್ಲಿ ಸಾಮಾನ್ಯವಾಗಿ ದೇವಾಲಯದ ಎಲ್ಲಾ ಖಾತೆಗಳು, ಹಣದ ಬಳಕೆ ಮತ್ತು ಆಭರಣಗಳು ಸೇರಿದಂತೆ ಸಮಗ್ರ ವಿವರಗಳಿರುತ್ತವೆ.


ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...