Homeಮುಖಪುಟಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ನಿರ್ಧಾರದ ನಂತರ  ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನದ ಲೆಕ್ಕಪರಿಶೋಧನೆಯನ್ನು ಇನ್ನು ಮುಂದೆ ಸಿಎಜಿ ಮಾಡಲಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತಿಳಿಸಿದೆ. ಇಷ್ಟು ದಿನ ಆಂಧ್ರಪ್ರದೇಶ ರಾಜ್ಯ ಲೆಕ್ಕಪರಿಶೋಧನಾ ವಿಭಾಗವು ಲೆಕ್ಕಪರಿಶೋಧನಾ ವರದಿಗಳನ್ನು ನೋಡಿಕೊಳ್ಳುತ್ತಿತ್ತು.

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಮಲ ದೇವಸ್ಥಾನದ ಲೆಕ್ಕಪರಿಶೋಧನಾ ವರದಿಗಳನ್ನು ಈಗ ಭಾರತದ ಕಂಟ್ರೋಲರ್ ಮತ್ತು ಲೆಕ್ಕಪರಿಶೋಧಕ ಜನರಲ್ (ಸಿಎಜಿ) ಮಾಡಲಿದ್ದಾರೆ ಎಂದು ಟಿಟಿಡಿ ಮಂಡಳಿ ಬುಧವಾರ ತಿಳಿಸಿದೆ.

ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಮತ್ತು ಕಳೆದ ಐದು ವರ್ಷಗಳಿಂದ ಟಿಟಿಡಿ ಖಾತೆಗಳ ಲೆಕ್ಕಪರಿಶೋಧನಾ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಆಂಧ್ರಪ್ರದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯು ಇನ್ನು ಬಾಕಿ ಇರುವ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ.

ಟಿಟಿಡಿ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ನಾನು ಮತ್ತು ನನ್ನ ಸಹವರ್ತಿ ಸತ್ಯಪಾಲ್ ಸಭರ್ವಾಲ್ ಕಳೆದ 5 ವರ್ಷಗಳಿಂದ ತಿರುಪತಿ ದೇವಾಲಯದ ನಿಧಿಯ ಸಿಎಜಿ ಲೆಕ್ಕಪರಿಶೋಧನೆಗೆ ಕೋರಿ ಆಂಧ್ರ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದೆವು. ಆಂಧ್ರ ಪ್ರದೇಶ ಸಿಎಂ ಜಗನ್ ಇದಕ್ಕೆ ಒಪ್ಪಿಗೆ ಸೂಚಿಸಿದ್ದರು. ಟಿಟಿಡಿ ಅಧ್ಯಕ್ಷರಾದ ಸುಬ್ಬಾ ರೆಡ್ಡಿ ಮತ್ತು ಸದಸ್ಯ ಮತ್ತು ವಿಎಚ್‌ಎಸ್‌ ಎಪಿ ನಾಯಕ ಗೋವಿಂದ್ ಹರಿ ಇದನ್ನು ಟಿಟಿಡಿ ಮಂಡಳಿಯ ಮೂಲಕ ಪ್ರಾಯೋಗಿಕವಾಗಿ ನಡೆಸಿದರು. ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

ಈ ಕುರಿತು ವಕೀಲ ಸತ್ಯಪಾಲ್ ಸಭರ್ವಾಲ್ ಕೂಡ ಟ್ವೀಟ್ ಮಾಡಿದ್ದು, 5 ವರ್ಷಗಳಿಂದ ಸಿಎಜಿಯಿಂದ ಬಾಹ್ಯ ಲೆಕ್ಕಪರಿಶೋಧನೆಗೆ ನಾನು ಪ್ರಾರ್ಥಿಸುತ್ತಿದ್ದೇನೆ. ಇದೊಂದು ಬೃಹತ್ ಗೆಲುವು ಎಂದಿದ್ದಾರೆ.

ಟಿಟಿಡಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅಂಗೀಕರಿಸಿದ 202 ಪುಟಗಳ ನಿರ್ಣಯದಲ್ಲಿ 2020-2021 ರಿಂದ ಟಿಟಿಡಿಯ ಲೆಕ್ಕಪರಿಶೋಧನೆಯನ್ನು ಸಿಎಜಿಗೆ ವಹಿಸಲು ಮಂಡಳಿ ನಿರ್ಧರಿಸಿದೆ.

ಜೊತೆಗೆ 2014-2015 ರಿಂದ 2019-2020 ರವರೆಗಿನ ಲೆಕ್ಕಪರಿಶೋಧನಾ ವರದಿಯನ್ನು ಈಗಾಗಲೇ ರಾಜ್ಯ ಲೆಕ್ಕಪರಿಶೋಧನಾ ಇಲಾಖೆ ಪೂರ್ಣಗೊಳಿಸಿರುವುದರಿಂದ, ಅದೇ ಅವಧಿಯ ವಿಶೇಷ ಲೆಕ್ಕಪರಿಶೋಧನೆಯನ್ನು ಕೈಗೆತ್ತಿಕೊಳ್ಳಲು ಮತ್ತು ಆರು ತಿಂಗಳೊಳಗೆ ತನ್ನ ವರದಿಯನ್ನು ನೀಡುವಂತೆ ಸಿಎಜಿಗೆ ಮನವಿ ಮಾಡಲು ಮಂಡಳಿ ರಾಜ್ಯ ಸರ್ಕಾರವನ್ನು ಕೋರಿದೆ.

ಟಿಟಿಡಿ ದೇವಸ್ಥಾನದಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ವಿಷಯದಲ್ಲಿ ಏನೂ ಮಾಡಿಲ್ಲ. ಈಗ ನಮಗೆ ಹೊಸ ಮುಖ್ಯಮಂತ್ರಿ ಇದ್ದಾರೆ. ಕಳೆದ ಐದು ವರ್ಷಗಳಿಂದ ತಿರುಮಲ ದೇವಸ್ಥಾನದ ಖಾತೆಗಳನ್ನು ಲೆಕ್ಕಪರಿಶೋಧಿಸಲು ಸಿಎಜಿ ಅಥವಾ ಇನ್ನಿತರ ಸ್ವತಂತ್ರ ಸಂಸ್ಥೆಗೆ ಅವಕಾಶ ನೀಡುವಂತೆ ನಾನು ಕೇಳುತ್ತಿದ್ದೇನೆ ಮತ್ತು ಭಕ್ತರು ಠೇವಣಿ ಇಟ್ಟ ಹಣಕ್ಕೆ ಏನಾಯಿತು ಎಂದು ನಮಗೆ ತಿಳಿಯಬೇಕಿದೆ ಎಂದಿದ್ದಾರೆ ಸುಬ್ಬಾ ರೆಡ್ಡಿ.

ಸದ್ಯ ಟಿಟಿಡಿ ಮಂಡಳಿಯು ತನ್ನ ನಿರ್ಧಾರವನ್ನು ತಿಳಿಸಿ ಹೈಕೋರ್ಟ್‌ಗೆ ಅಫಿಡವಿಟ್ ಕಳುಹಿಸುತ್ತದೆ. ಲೆಕ್ಕಪರಿಶೋಧನಾ ವರದಿಯಲ್ಲಿ ಸಾಮಾನ್ಯವಾಗಿ ದೇವಾಲಯದ ಎಲ್ಲಾ ಖಾತೆಗಳು, ಹಣದ ಬಳಕೆ ಮತ್ತು ಆಭರಣಗಳು ಸೇರಿದಂತೆ ಸಮಗ್ರ ವಿವರಗಳಿರುತ್ತವೆ.


ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...