Homeಕರ್ನಾಟಕಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

- Advertisement -
- Advertisement -

ಕಾಡಿನಿಂದ ಆವೃತವಾಗಿರುವ ಉತ್ತರ ಕನ್ನಡದ ಇಡೀ ಜೋಯಿಡಾ ತಾಲ್ಲೂಕಿನಲ್ಲಿ ವೈವಿದ್ಯಮಯ ಗೆಡ್ಡೆ-ಗೆಣಸು ಅನಾದಿ ಕಾಲದಿಂದ ಬೆಳೆಯಲಾಗುತ್ತಿದೆ. ಇಲ್ಲಿಯ ಬುಡಕಟ್ಟು ಕುಣಬಿ ಜನಾಂಗದವರು ಸಾಂಪ್ರದಾಯಿಕವಾಗಿ ಗೆಡ್ಡೆ, ಗೆಣಸು ಬೆಳೆಯುತ್ತಿದ್ದಾರೆ. ಇದು ಕುಣಬಿಗಳ ಮೂಲ ಕಸುಬು. ಕೃಷಿ ವಿಜ್ಞಾನಿಗಳು ಜೋಯಿಡಾ ಭಾಗದ ಗೆಡ್ಡೆ-ಗೆಣಸು ಪರಿಶೀಲಿಸಿ ಇವುಗಳು ಚಿಕ್ಕ ಮಕ್ಕಳ ಆರೋಗ್ಯಕರ ಆಹಾರ ತಯಾರಿಕೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ವರ್ಷದಿಂದ ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ ನಡೆಸಲಾಗುತ್ತಿದ್ದು, ಬುಧವಾರ ಈ ಬಾರಿಯ ಮೇಳವನ್ನು ಕುಣಬಿ ಅಭಿವೃದ್ಧಿ ಸಂಘ ಮತ್ತು ಕಾಳಿ ರೈತ ಉತ್ಪದಕರ ಸಂಘ ಆಯೋಜಿಸಿತ್ತು.

230ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ತಾವು ಬೆಳೆದ ನಾನಾ ನಮೂನೆಯ ಗೆಡ್ಡೆ, ಗೆಣಸುಗಳ ಪ್ರದರ್ಶನ ಮತ್ತು ಮಾರಾಟ ಮಾಡಿದರು. ಗೆಡ್ಡೆಗಳ ವಿವಿಧ ಬಗೆಯ ಖಾದ್ಯ ಮಾರಾಟವೂ ಇತ್ತು. ಸಣ್ಣ-ಪುಟ್ಟ ಗಾತ್ರದಿಂದ ಬೃಹದಾಕಾರದ ಗೆಡ್ಡೆ, ಗೆಣಸುಗಳು ಗೋವಾ, ಮಹಾರಾಷ್ಟ್ರ, ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಿಂದ ಮೇಳಕ್ಕೆ ಬಂದವರನ್ನು ಚಕಿತಗೋಳಿಸಿದವು. ಜೋಯಿಡಾದ ಸುಮಾರು 50 ಎಕರೆ ಪ್ರದೇಶದಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷದ ಗೆಡ್ಡೆ ಮೇಳದಲ್ಲಿ ಮೂರರಿಂದ ಮೂರುವರೆ ಲಕ್ಷದ ವ್ಯಾಪಾರವಾಗಿದೆ ಎನ್ನಲಾಗಿದೆ.

ಮೇಳ ಉದ್ಘಾಟಿಸಿದ ಕಾಳಿ ಹುಲಿ ಸಂರಕ್ಷಣಾ ಪ್ರದೇಶದ ನಿರ್ದೇಶಕ ಮಾರಿಯೋ ಕ್ರಿಸ್ತರಾಜ ಮಾತನಾಡಿ, “ಜೋಯಿಡಾದ ಹಳ್ಳಿಗಾಡಿನ ಜನರು ಅದರಲ್ಲೂ ಕುಣಬಿ ಸಮುದಾಯದವರು ಗೆಡ್ಡೆ-ಗೆಣಸು ಬೆಳೆದು ಪ್ರಸಿದ್ದರಾಗಿದ್ದಾರೆ. ಹಲವಾರು ತಲೆಮಾರಿನಿಂದ ಬಂದಿರುವ ಈ ಕೃಷಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಪೂರ್ವಜರು ಬೆಳೆಸಿ ಉಳಿಸಿದ ಗೆಡ್ಡೆ, ಗೆಣಸು ತಳಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಈ ಪ್ರಯತ್ನ ಯಶಸ್ವಿಯಾಗಲಿ” ಎಂದು ಹಾರೈಸಿದರು.

ಎಲ್ಲ ರಂಗದಲ್ಲಿ ತೀರಾ ಹಿಂದುಳಿದಿರುವ ಜೋಯಿಡಾ ತಾಲೂಕು ಗೆಡ್ಡೆ, ಗೆಣಸು ಮೇಳದಿಂದ ಹೊರ ಪ್ರಪಂಚದಲ್ಲಿ ಗುರುತಿಸಿಕೊಂಡಿದೆ. ದಟ್ಟ ಅಡವಿಯಲ್ಲಿ ಬೆಳೆಯುವ ಗೆಡ್ಡೆ-ಗೆಣಸನ್ನು ಕುಣಬಿ ಬುಡಕಟ್ಟಿನ ಸಮುದಾಯ ಅಡುಗೆ ಮನೆಗೆ ಪರಿಚಯಿಸಿದೆ. ಗೆಡ್ಡೆ-ಗೆಣಸು ಮೇಳದ ಹಿಂದಿನ ಶಕ್ತಿ ಸಹ ಕುಣಬಿ ಜನಾಂಗವೇ ಆಗಿದೆ. ಕೆಸುವಿನ ಗೆಡ್ಡೆ, ಸುವರ್ಣಗೆಡ್ಡೆ, ಕೆಂಪು ಗೆಣಸು, ಅರಿಶಿಣ, ಶುಂಠಿ, ಮಾವಿನ ಶುಂಠಿ, ಆನೆ ಪಾದದಂತೆ ಇರುವ ಬೃಹತ್ ಗಾತ್ರದ ಚರಣ ಮತ್ತಿತರ ಗೆಡ್ಡೆಗಳು ಮೇಳದಲ್ಲಿತ್ತು.

ಡೇರಿಯಾ, ಡಿಗ್ಗಿ, ಬಜಾರಕುಣಂಗ, ನಿಗುಂಡಿ, ತೇರಾಳಿ, ನುಜ್ಜಿ, ಕುಂಡಲ, ಬಾಡಪೋಲಿ, ದುಮಾಳ, ಕರಂಜೋಯಿಡಾ, ಅಣಶಿ, ಕುಂಬಾರವಾಡ, ಕುವೇಶಿ ಮುಂತಾದ ಹಳ್ಳಿಗಳ ಪ್ರತಿಯೊಂದು ಕುಣಬಿ ಮನೆ ಹಿತ್ತಲಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಕಣಬಿಗಳ ಆಡು ಭಾಷೆಯಲ್ಲಿ ಗೆಣಸಿಗೆ ಕೋನ್ ಎಂದರೆ ಕೆಸುವಿನ ಗೆಡ್ಡೆಗೆ ಮುಡ್ಲಿ ಎನ್ನುತ್ತಾರೆ.

ದಾವಾ ಮುಡ್ಲಿ, ಚೇಡ್ವಾಲಿ ಮುಡ್ಲಿ, ರಕ್ಯಾಮುಡ್ಲಿ, ಕುಣಬಿಮುಡ್ಲಿ, ಕಾಳಿ ಮುಡ್ಲಿ, ಪುಲಾ ಮುಡ್ಲಿ, ಗಿಡ್ಡಿ ಮುಡ್ಲಿ, ಲಾಂಬಟ ಮುಡ್ಲಿ, ಹುಂಡು, ಕಾಳೊ ತೆರೊ, ದುರತಾಳಿ, ಆಳೆಕೋನ್, ಧಯೆಕೋನ್, ತಾಂಬ್ಡೆ ಕೋನ್, ದುಕರ್ ಕೋನ್, ನಾಗರ್ ಕೋನ್, ಮಾಂಡೆ ಕೋನ್, ಆಳೆ ಕೋನ್, ಚೇನಿ ಕೋನ್, ಕಾಟೆ ಕಣಗಾ, ಝಾಡ ಕಣಗಾ, ತಾರೋಟಿ ಕಣಗಾ ಮುಂತಾದ ಹೆಸರಿನ ಗೆಡ್ಡೆ-ಗೆಣಸು ಜೋಯಿಡಾ ಪ್ರದೇಶದಲ್ಲಿ ವಿಪುಲವಾಗಿ ಬೆಳೆಯಲಾಗುತ್ತದೆ. ಜೋಯಿಡಾ ಮತ್ತು ಹತ್ತಿರದ ರಾಮನಗರ ಈ ಗೆಡ್ಡೆ-ಗೆಣಸುಗಳ ಪ್ರಮುಖ ಮಾರುಕಟ್ಟೆ.


ಇದನ್ನೂ ಓದಿ: ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...